Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಲಿ: 49 ಯೋಧರ ಹತ್ಯಾಕಾಂಡದ ಹೊಣೆ ಹೊತ್ತ...

ಮಾಲಿ: 49 ಯೋಧರ ಹತ್ಯಾಕಾಂಡದ ಹೊಣೆ ಹೊತ್ತ ಐಸಿಸ್

ವಾರ್ತಾಭಾರತಿವಾರ್ತಾಭಾರತಿ3 Nov 2019 9:24 PM IST
share
ಮಾಲಿ: 49 ಯೋಧರ ಹತ್ಯಾಕಾಂಡದ ಹೊಣೆ ಹೊತ್ತ ಐಸಿಸ್

ವಾಶಿಂಗ್ಟನ್,ನ.3: ಆಫ್ರಿಕನ್ ರಾಷ್ಟ್ರವಾದ ಮಾಲಿಯಲ್ಲಿ 49 ಯೋಧರ ಹತ್ಯೆಗೆ ಕಾರಣವಾದ ಭೀಕರ ದಾಳಿ ಯ ಹೊಣೆಯನ್ನು ಐಸಿಸ್ ಭಯೋತ್ಪಾದಕ ಗುಂಪು ವಹಿಸಿಕೊಂಡಿದೆ. ಓರ್ವ ಫ್ರೆಂಚ್ ಸೈನಿಕನನ್ನು ಬಲಿತೆಗೆದುಕೊಂಡ ಬಾಂಬ್ ಸ್ಪೋಟ ಕೂಡಾ ತನ್ನ ಕೃತ್ಯವೆಂದು ಅದು ಹೇಳಿಕೊಂಡಿದೆ.

 ನೈಜರ್ ಗಡಿಗೆ ತಾಗಿಕೊಂಡಿರುವ ಪೂರ್ವ ಮೆನಕಾ ಪ್ರಾಂತದಲ್ಲಿ ಮಾಲಿ ಸೇನೆಯ ಹೊರಠಾಣೆಯಲ್ಲಿ ಶುಕ್ರವಾರ ನೆಲಬಾಂಬೊಂದು ಸ್ಪೋಟಿಸಿ 49 ಮಾಲಿ ಯೋಧರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದರು ಹಾಗೂ ಇತರ 20 ಮಂದಿ ಗಾಯಗೊಂಡಿದ್ದರು.

 ಐಸಿಸ್ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಇಂದು ನೀಡಿದ ಹೇಳಿಕೆಯೊಂದರಲ್ಲಿ ತನ್ನ ಯೋಧರು ಗ್ರಾಮವೊಂದರಲ್ಲಿ ನಿಯೋಜಿತವಾಗಿದ್ದ ಮಾಲಿಯ ಸೇನಾನೆಲೆಯ ಮೇಲೆ ದಾಳಿ ನಡೆಸಿದ್ದಾರೆ’’ ಎಂದು ಹೇಳಿಕೊಂಡಿತ್ತು.

 ಶನಿವಾರ ಮಾಲಿಯ ಮೆನಕಾ ನಗರದ ಸಮೀಪ ಐಇಡಿ ಸ್ಫೋಟಕ್ಕೆ ಸೇನಾ ವಾಹನವೊಂದರಲ್ಲಿ ಪ್ರಯಾಣಿಸುತ್ತಿದ್ದ ಫ್ರೆಂಚ್ ಕಾರ್ಪೊರಲ್ ಯೋಧ ರೊನಾನ್ ಪಾಯಿಂಟಾವ್ ಎಂಬಾತ ಮೃತಪಟ್ಟಿದ್ದಾನೆ ಎಂದು ಫ್ರೆಂಚ್ ರಕ್ಷಣಾ ಸಚಿವಾಲಯದ ಹೇಳಿಕೆಯು ತಿಳಿಸಿದೆ. ಈ ಕೃತ್ಯದ ಹೊಣೆಯನ್ನು ಕೂಡಾ ಐಸಿಸ್ ವಹಿಸಿಕೊಂಡಿದೆ. ರೊನಾನ್ ಪಾಯಿಂಟಾವ್ ಹಾಗೂ ಆತನ ಸಹಯೋಧರು ಗಾವೊ ಹಾಗೂ ಮೆನಕಾ ನಗರಗಳ ನಡುವೆ ಸೇನಾವಾಹನಕ್ಕೆ ಬೆಂಗಾವಲಾಗಿ ಪ್ರಯಾಣಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆಯೆಂದು ತಿಳಿದುಬಂದಿದೆ.

  2012ರಲ್ಲಿ ಉತ್ತರ ಮಾಲಿಯಲ್ಲಿ ಭುಗಿಲೆದ್ದ ಬಂಡಾಯವನ್ನು ಮಾಲಿಯ ಸೇನೆಯು ಸದೆಬಡಿಯಲು ವಿಫಲವಾದ ಆನಂತರ ಆ ಪ್ರದೇಶವನ್ನು ಅಲ್‌ಖಾಯಿದಾ ಜೊತೆ ನಂಟು ಹೊಂದಿರುವ ಉಗ್ರರು ತಮ್ಮ ನಿಯಂತ್ರಣಕ್ಕೆ ಪಡೆದುಕೊಂಡಿದ್ದರು. ಈ ಉಗ್ರರ ವಿರುದ್ಧ ಫ್ರಾನ್ಸ್ ನೇತೃತ್ವದಲ್ಲಿ ಸೇನಾ ಕಾರ್ಯಾಚರಣೆ ಆರಂಭಗೊಂಡಿದ್ದು, ಸುಮಾರು ಒಂದು ವರ್ಷದ ಬಳಿಕ ಉಗ್ರರನ್ನು ಹಿಮ್ಮೆಟ್ಟಿಸಲು ಸಾಧ್ಯವಾಯಿತು. ಆದರೆ ಕೇಂದ್ರ ಹಾಗೂ ದಕ್ಷಿಣ ಮಾಲಿಯಲ್ಲಿ ಬಂಡುಕೋರ ಉಗ್ರರು ಪುನರ್‌ ಸಂಘಟಿತರಾಗುತ್ತಿದ್ದು. ಸೇನಾಪಡೆಗಳ ಮೇಲೆ ಮಿಂಚಿನ ದಾಳಿ ನಡೆಸಿ ಪರಾರಿಯಾಗುತ್ತಿದ್ದಾರೆ ಹಾಗೂ ನೆಲಬಾಂಬ್ ಸ್ಫೋಟಗಳನ್ನು ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X