Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಚನ ಸಾಹಿತ್ಯದಿಂದ ಕ್ರಾಂತಿ ಸೃಷ್ಟಿ...

ವಚನ ಸಾಹಿತ್ಯದಿಂದ ಕ್ರಾಂತಿ ಸೃಷ್ಟಿ :ಎಸ್.ಎಸ್.ನಾಯಕ್

ವಿಶ್ವಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ-2019

ವಾರ್ತಾಭಾರತಿವಾರ್ತಾಭಾರತಿ3 Nov 2019 10:27 PM IST
share
ವಚನ ಸಾಹಿತ್ಯದಿಂದ ಕ್ರಾಂತಿ ಸೃಷ್ಟಿ :ಎಸ್.ಎಸ್.ನಾಯಕ್

ಮಂಗಳೂರು, ನ.3: ಎಲ್ಲರಲ್ಲೂ ಪ್ರೀತಿ ಮತ್ತು ವಿಶ್ವಾಸದ ಬೆಸುಗೆ ಬೆಸೆಯಲಿ ಮಾನವನ ಜೀವನ ಮೌಲ್ಯ ಗಟ್ಟಿಗೊಳ್ಳಲಿ ಎನ್ನುವುದು ವಚನಕಾರರ ಆಶಯವಾಗಿತ್ತು. ಬಸವಣ್ಣನವರ ಕಾಲದಲ್ಲಿ ರಚಿತವಾದ ವಚನ ಸಾಹಿತ್ಯ ಪ್ರಕಾರಗಳು ಸಾಮಾಜಿಕ ಮತ್ತು ಕೌಟುಂಬಿಕ, ರಾಜಕೀಯ ವೌಲ್ಯಗಳನ್ನು ಕಟ್ಟಿಕೊಡುವಲ್ಲಿ ಕ್ರಾಂತಿಯನ್ನೇ ಮಾಡಿತು. ಅಹಿಂಸಾ ನೀತಿಯನ್ನು ವಚನ ಸಾಹಿತ್ಯದ ಮೂಲಕ ಪ್ರತಿಪಾದಿಸಿದ ವಚನಕಾರರು ನಮಗೆ ಸ್ಪೂರ್ತಿ. ಕನ್ನಡ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಸರಸ್ವತಿಯ ಎರಡು ಆಯಾಮಗಳಾಗಿವೆ ಎಂದು ಲೆಕ್ಕ ಪರಿಶೋಧಕ ಎಸ್.ಎಸ್.ನಾಯಕ್ ನುಡಿದರು.

ಶ್ರೆ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬೆಂಗಳೂರು ಜಂಟಿ ಆಶ್ರಯದಲ್ಲಿ ರವಿವಾರ ನಗರದ ವಿವಿ ಕಾಲೇಜು ಸಭಾಂಗಣದಲ್ಲಿ ಜರುಗಿದ 5ನೇ ವಿಶ್ವಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ-2019 ಹಾಗೂ ಕನ್ನಡ ರಾಜ್ಯೋತ್ಸವ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂಗ್ಲಿಷ್‌ಗಿಂತಲೂ ಕನ್ನಡವು ಅತ್ಯಧಿಕ ಸಮೃದ್ಧಿಯನ್ನು ಒಳಗೊಂಡಿದೆ. ಸದ್ವಿಚಾರ, ಸದಾಶಯ ಸರ್ವ ಧರ್ಮಗಳ ಜೀವಾಳ. ಈ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಬದುಕು ಸುಂದರ ಹಾಗೂ ಸಾರ್ಥಕತೆ ಕಂಡುಕೊಳ್ಳುತ್ತದೆ ಎಂದು ಎಸ್.ಎಸ್.ನಾಯಕ್ ಹೇಳಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರವೀಂದ್ರ ಶೆಟ್ಟಿ ನುಳಿಯಾಲು, ಡಾ.ಸಂಜಯ ಪಂ.ಹೊಸಮಠ, ಚಂದ್ರ ಕೊಲ್ಚಾರು, ಬಿ.ಎಸ್. ತಾಂಡವ ಮೂರ್ತಿ, ಜಯಂತ ನಡುಬೈಲು, ನಿತ್ಯಾನಂದ ಮುಂಡೋಡಿ, ರಾಕೇಶ್ ಕುಮಾರ್, ಭಾಸ್ಕರ ಬಲ್ಯಾಯ, ಸುಂದರ ಗೌಡ ಮಂಡೆಕರ, ಎ.ಚಂದ್ರ ನಲಿಕೆ, ಕೋಟಿಯಪ್ಪ ಪೂಜಾರಿ ಸೇರ, ವಿದ್ಯಾ ರಾಕೇಶ್, ಯಶ್ಚಿತ್ ಕಾಳಂಮನೆ ಅವರಿಗೆ ಸಮಾಜ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಚನ ಸಾಹಿತ್ಯ ಗೋಷ್ಠಿ, ವಚನ ಸಾಹಿತ್ಯದಲ್ಲಿ ಕೃಷಿ, ವಚನಕಾರರ ನಡವಳಿಕೆ, ಕನ್ನಡ ಭಾಷೆ ಮತ್ತು ಸಂಸ್ಕೃತಿ ಗೋಷ್ಠಿಗಳು ನಡೆದವು. ತೋನ್ಸೆ ಪುಷ್ಕಲ್ ಕುಮಾರ್ ಅವರಿಂದ ಜಗಜ್ಯೋತಿ ಬಸವಣ್ಣ ಹರಿಕಥೆ ಕಾರ್ಯಕ್ರಮ ಜರುಗಿತು. ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾರದಾ ವಿದ್ಯಾಲಯದ ಅಧ್ಯಕ್ಷ ಎಂ.ಬಿ.ಪುರಾಣಿಕ್, ಶ್ರೆದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಸದಾನಂದ ಶೆಟ್ಟಿ, ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ನರೇಂದ್ರ ಎಲ್. ನಾಯಕ್, ಸೂರಜ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ್ ರೇವಣ್ಕರ್, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.

ಕರುಣಾಕರ ಬಳ್ಕೂರು ವಂದಿಸಿದರು. ಭಾಸ್ಕರ್ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X