Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗ್ರಾ.ಪಂ. ಪೌರ ಕಾರ್ಮಿಕರಿಗೆ 40...

ಗ್ರಾ.ಪಂ. ಪೌರ ಕಾರ್ಮಿಕರಿಗೆ 40 ತಿಂಗಳಿಂದ ಸಂಬಳವಿಲ್ಲ !

61 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳ ಯಾತನೆ ಕೇಳುವವರೇ ಇಲ್ಲ

ಮಂಜುನಾಥ ದಾಸನಪುರಮಂಜುನಾಥ ದಾಸನಪುರ3 Nov 2019 11:07 PM IST
share
ಗ್ರಾ.ಪಂ. ಪೌರ ಕಾರ್ಮಿಕರಿಗೆ 40 ತಿಂಗಳಿಂದ ಸಂಬಳವಿಲ್ಲ !

ಬೆಂಗಳೂರು, ನ.3: ನಾವು ಊರನ್ನು ಗುಡಿಸುತ್ತೇವೆ, ಚರಂಡಿಗಳನ್ನು ಸ್ವಚ್ಚ ಮಾಡುತ್ತೇವೆ. ಆದರೆ, ಸಂಬಳ ಮಾತ್ರ ಇಲ್ಲವಾಗಿದೆ. ಸುಮಾರು 40, 20 ತಿಂಗಳಿಂದ ಸಂಬಳವಿಲ್ಲದೆ ಪರಿತಪಿಸುತ್ತಿದ್ದರೂ ನಮ್ಮ ಗೋಳನ್ನು ಪಂಚಾಯತ್ ಅಧ್ಯಕ್ಷರು, ಕಾರ್ಯದರ್ಶಿಗಳು ಕೇಳಿಸಿಕೊಳ್ಳುತ್ತಿಲ್ಲ.

ಇದು ಗ್ರಾಮ ಪಂಚಾಯತ್‌ಗಳಲ್ಲಿ ಕಸ ಗುಡಿಸುವವರು, ಚರಂಡಿ ಸ್ವಚ್ಚ ಮಾಡುವವರು, ಬಿಲ್ ಕಲೆಕ್ಟರ್, ಪಂಪ್ ಅಪರೇಟರ್‌ಗಳು ಸೇರಿದಂತೆ ಕೆಳ ಹಂತದಲ್ಲಿ ಕೆಲಸ ಮಾಡುತ್ತಿರುವ ಸುಮಾರು 61 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳ ಯಾತನೆಯಾಗಿದೆ.

ಈ ಸಿಬ್ಬಂದಿಗಳನ್ನು ಮಾತನಾಡಿಸುತ್ತಾ ಹೋದಂತೆ ಒಬ್ಬೊಬ್ಬರದು ಒಂದೊಂದು ಯಾತನೆಯ ಕತೆ ಬಿಚ್ಚಿಕೊಳ್ಳುತ್ತದೆ. "ನನಗೆ 4,800 ರೂ. ಸಂಬಳ. ಇದನ್ನೇ ನಂಬಿ ಜೀವನ ನಡೆಸುತ್ತಿದ್ದೇನೆ. ಪ್ರತಿದಿನ ಊರೆಲ್ಲಾ ಸುತ್ತಾಡಿ ಕಸ ಗುಡಿಸಿ ಬರುತ್ತೇನೆ. ಆದರೆ, ನನಗೆ ಕಳೆದ 40 ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿದ್ದಾರೆ. ಈ ಬಗ್ಗೆ ಪಂಚಾಯತ್‌ನ ಅಧ್ಯಕ್ಷರು, ಕಾರ್ಯದರ್ಶಿಗಳನ್ನು ಕೇಳಿದರೆ, ಸರಕಾರದಿಂದ ಹಣ ಬಂದಿಲ್ಲವೆಂದು ಸಬೂಬು ಹೇಳುತ್ತಾರೆ. ಸಂಬಳವಿಲ್ಲದೆ ನನ್ನ ಮಕ್ಕಳಿಗೆ ಬಟ್ಟೆ ಸೇರಿದಂತೆ ಅವರಿಗೆ ಕೇಳಿದ್ದನ್ನು ಕೊಡಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳನ್ನು ಹೆತ್ತ ತಪ್ಪಿಗೆ ಈಗ ಪರಿತಪಿಸುವಂತಾಗಿದೆ. ಈಗ ಮಕ್ಕಳು ಶಾಲೆಗೆ ಹೋಗುವುದನ್ನು ಬಿಟ್ಟಿದ್ದಾರೆ. ನಾವು ಕೆಲಸ ಮಾಡಿದರೂ ನಮಗೆ ಸಂಬಳ ಕೊಡುತ್ತಿಲ್ಲ. ದಯಮಾಡಿ ನಮಗೆ ಸಂಬಳ ಕೊಡಿಸಿ" ಎಂದು ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಶಿವಮ್ಮಾ, ಪಾರ್ವತಮ್ಮ, ಲಕ್ಷ್ಮಮ್ಮ ಹಾಗೂ ಭಾಗ್ಯ ಎಂಬುವವರು ಕಣ್ಣೀರು ಸುರಿಸುತ್ತಾರೆ. 

ಕಲಬುರಗಿ ತಾಲೂಕಿನ ಮಲ್ಲಣ್ಣ ಎಂಬುವವರು ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಾರೆ. ಇವರಿಗೂ ಸರಿಯಾಗಿ ಸಂಬಳವಾಗುತ್ತಿಲ್ಲ. ಪಂಚಾಯತ್ ಅಧ್ಯಕ್ಷರ ಬಳಿ ಗೋಗರೆದಾಗ ಒಂದು ತಿಂಗಳ ಸಂಬಳ ನೀಡುತ್ತಾರೆ. ಪುನಃ ಆರು ತಿಂಗಳು ಕೊಡುವುದಿಲ್ಲ. ಹೀಗಾಗಿ ನಮ್ಮ ಸಂಬಳವನ್ನು ನೇರವಾಗಿ ನಮ್ಮ ಬ್ಯಾಂಕ್ ಖಾತೆಗಳಿಗೆ ಹಾಕುವಂತಹ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕೆಳ ಹಂತದಲ್ಲಿ ದುಡಿಯುತ್ತಿರುವ ನಮಗೆ ಗ್ರಾಮ ಪಂಚಾಯತ್‌ಗಳಲ್ಲಿ ಕುಳಿತು ಕೊಳ್ಳಲು ಒಂದು ಕುರ್ಚಿ ಇರುವುದಿಲ್ಲ. ನಮ್ಮನ್ನು ಉದಾಸೀನವಾಗಿ ಕಾಣುತ್ತಾರೆ. ನಾವು ಪಂಚಾಯತ್‌ಗಳಲ್ಲಿ ಸುಮಾರು 10-15ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ನಮ್ಮ ವಿವರಗಳನ್ನು ಎಲ್ಲಿಯೂ ದಾಖಲಿಸುತ್ತಿಲ್ಲ. ಇದರಿಂದ ನಮ್ಮ ಸೇವಾ ಹಿರಿತನವಾಗಲಿ, ನಮ್ಮ ಕೆಲಸದ ಮಾಹಿತಿ ಇಲಾಖೆಗೆ ಸಿಗುವುದೇ ಇಲ್ಲ. ಈ ಬಗ್ಗೆ ಹಿರಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.

-ಮಲ್ಲಣ್ಣ ಬಿಲ್ ಕಲೆಕ್ಟರ್, ಕಲಬುರಗಿ

ಈಗಲೂ ಗ್ರಾಮಗಳಲ್ಲಿ ಜಾತಿ ತಾರತಮ್ಯ, ಅಸ್ಪೃಶ್ಯತೆ ಜೀವಂತವಾಗಿದೆ. ಇದು ಗ್ರಾಮ ಪಂಚಾಯತ್‌ಗಳಲ್ಲಿ ದುಡಿಯುತ್ತಿರುವ ಕೆಳ ಹಂತದ ಸಿಬ್ಬಂದಿಗಳ ಮೇಲೂ ಪರಿಣಾಮ ಬೀರುತ್ತಿದೆ. ಕಸ ಗುಡಿಸುವವರು, ಚರಂಡಿ ಸ್ವಚ್ಚ ಮಾಡುವವರು ಬಹುತೇಕರು ದಲಿತರೇ ಆಗಿರುವುದರಿಂದ ಅವರ ಸಮಸ್ಯೆಗಳು ಹಾಗೆಯೇ ಜೀವಂತವಾಗಿವೆ. ಹಲವು ಕಡೆಗಳಲ್ಲಿ ಗ್ರಾಮ ಪಂಚಾಯತ್‌ಗೆ ದಲಿತ ವ್ಯಕ್ತಿಯೊಬ್ಬ ಅಧ್ಯಕ್ಷನಾದರೆ, ಆತನಿಗೆ ಕುರ್ಚಿ ಸಿಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬೀದಿ ಗುಡಿಸುವವರ ಸಮಸ್ಯೆಯನ್ನು ಯಾರು ಕೇಳುತ್ತಾರೆ’

-ಮಾರುತಿ ಮಾನ್ಪಡೆ, ಅಧ್ಯಕ್ಷ, ಗ್ರಾಮ ಪಂಚಾಯತ್ ನೌಕರರ ಸಂಘ

share
ಮಂಜುನಾಥ ದಾಸನಪುರ
ಮಂಜುನಾಥ ದಾಸನಪುರ
Next Story
X