Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಕಾರಣಿಗಳಿಗೆ ಇತಿಹಾಸದ ಪ್ರಜ್ಞೆ...

ರಾಜಕಾರಣಿಗಳಿಗೆ ಇತಿಹಾಸದ ಪ್ರಜ್ಞೆ ಇರಬೇಕು: ಪ್ರೊ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ3 Nov 2019 11:33 PM IST
share
ರಾಜಕಾರಣಿಗಳಿಗೆ ಇತಿಹಾಸದ ಪ್ರಜ್ಞೆ ಇರಬೇಕು: ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು, ನ.3: ರಾಜಕಾರಣಿಗಳಿಗೆ ಇತಿಹಾಸದ ಪ್ರಜ್ಞೆ ಇರಬೇಕು ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ರವಿವಾರ ಬಸವನಗುಡಿಯ ವಾಡಿಯ ಸಭಾಂಗಣದಲ್ಲಿ ಅಂಕಿತ ಪುಸ್ತಕ ವತಿಯಿಂದ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಐದು ಪುಸ್ತಕಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಜನಪ್ರಿಯ ಯೋಜನೆಗಳನ್ನು ದೊಡ್ಡ ಪ್ರಮಾಣದಲ್ಲಿ ರೂಪಿಸಿದವರು ದೇವರಾಜ ಅರಸು ಅವರು. ಅವರ ಆಡಳಿತದ ಅವಧಿಯಲ್ಲಿ ಕರ್ನಾಟಕದಲ್ಲಿ ಆರ್ಥಿಕ ಭದ್ರತೆ ಇತ್ತು ಎಂದು ಅನೇಕ ಆರ್ಥಿಕ ತಜ್ಞರು ಬರೆಯುತ್ತಾರೆ. ಆದರೆ, ಅದನ್ನು ಓದದೇ ಟೀಕಿಸುವವರು ಇದ್ದಾರೆ. ಅದೇ ರೀತಿ ಜನಪ್ರಿಯ ಕಲೆ ಸಹ ನಮ್ಮ ಒಟ್ಟು ಸಾಹಿತ್ಯ, ಸಿನಿಮಾ, ಕಲಾ ವಲಯಕ್ಕೆ ದೊಡ್ಡ ಅನ್ಯಾಯ ಮಾಡುತ್ತೆ ಎಂದು ನಾನು ಭಾವಿಸಿಲ್ಲ. ಯಾವುದೇ ಕಲಾ ಪ್ರಕಾರವನ್ನು ಅನಾಧರ ಮತ್ತು ಸಿನಿಕತನದಿಂದ ನೋಡುವುದನ್ನು ಬಿಡಬೇಕು. ಟೀಕೆ ಮಾಡುವುದಕ್ಕೂ ಮುನ್ನ ಓದಬೇಕು, ನೋಡಬೇಕು ಎಂಬುದು ನನ್ನ ಕಾಳಜಿ ಎಂದು ಹೇಳಿದರು.

ಕನ್ನಡದ ಕೆಲವು ವಿಮರ್ಶಕರು ಸಿನಿಮಾ ನಮ್ಮ ಸಂಸ್ಕೃತಿಯ ಭಾಗವಾಗಿಲ್ಲ ಎಂದು ಬರೆದಿದ್ದಾರೆ ಇದು ತಪ್ಪು ಕಲ್ಪನೆ. ಜನಪ್ರಿಯ ಎಂದರೆ ಸಂಸ್ಕೃತಿಯ ಭಾವನೆಯಲ್ಲ. ಸಂಸ್ಕೃತಿಯಲ್ಲಿ ಏಕರೂಪತೆ ಅನ್ನುವುದು ಇರುವುದಿಲ್ಲ. ಭಾರತೀಯತೆ ಅನ್ನುವುದೇ ಬಹುರೂಪತೆ. ಜನಪ್ರೀಯತೆ ಬಗ್ಗೆ ವಿಮರ್ಶೆ, ಟೀಕೆ ಮಾಡಬೇಕು ಎಂದು ಹೇಳಿದರು.

ಲೇಖಕ ಡಾ. ಕೆ. ಪುಟ್ಟಸ್ವಾಮಿ ಮಾತನಾಡಿ, ಸಿನಿಮಾ ಗಾಂಭೀರ್ಯತೆಯ ಕುರಿತು ಅಧ್ಯಯನ ನಡೆಯಬೇಕು. ಸಿನಿಮಾ ರಂಗವನ್ನು ಆಧರದಿಂದ ಕಾಣಬೇಕಾಗಿದೆ. ಸಿನಿಮಾ ಕುರಿತು ವಿಮರ್ಶೆ ಅಗತ್ಯ. ಅನ್ಯಭಾಷೆಯಲ್ಲಿ ಸಿನಿಮಾ ಬಗ್ಗೆ ಸಾಕಷ್ಟು ವಿಮರ್ಶೆ ನಡೆಯುತ್ತಿದೆ. ಆದರೆ, ಕನ್ನಡ ಭಾಷೆಯ ಸಿನಿಮಾಗಳ ವಿಮರ್ಶೆ ತೀರಾ ಕಡಿಮೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಘುನಾಥ ಚ.ಹ ಅವರ ‘ಬೆಳ್ಳಿತೊರೆ’, ಸಂತೋಷ ಕುಮಾರ್ ಅವರ ‘ಎಂಟೆಬೆ’, ವಿಕಾಸ್ ನೇಗಿಲೋಣಿ ಅವರ ’ಬಸವರಾಜ ವಿಳಾಸ’, ಕೆ.ಟಿ. ಗಟ್ಟಿ ಅವರ ಕಾದಂಬರಿಗಳಾದ ‘ಅಬ್ರಾಹ್ಮಣ’ ಮತ್ತು ‘ಇತಿಹಾಸದ ಮೊಗಸಾಲೆಯಲ್ಲಿ’ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಲೇಖಕ ಜೋಗಿ ಹಾಗೂ ಕೃತಿಯ ಲೇಖಕರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X