Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡ್ : ರೋಬಾಟಿಕ್ ಕಾಡುಪ್ರಾಣಿಗಳ...

ಬಿ.ಸಿ.ರೋಡ್ : ರೋಬಾಟಿಕ್ ಕಾಡುಪ್ರಾಣಿಗಳ ಪ್ರದರ್ಶನ 'ಎಕ್ಸಿಬಿಷನ್ ಇಂಡಿಯಾ'

ವಾರ್ತಾಭಾರತಿವಾರ್ತಾಭಾರತಿ4 Nov 2019 6:51 PM IST
share
ಬಿ.ಸಿ.ರೋಡ್ : ರೋಬಾಟಿಕ್ ಕಾಡುಪ್ರಾಣಿಗಳ ಪ್ರದರ್ಶನ ಎಕ್ಸಿಬಿಷನ್ ಇಂಡಿಯಾ

ಬಂಟ್ವಾಳ : ತಾಲೂಕು ಕೇಂದ್ರ ಬಿ.ಸಿ.ರೋಡ್ ಜೋಡುಮಾರ್ಗ ಉದ್ಯಾನವನದ ಬಳಿ ಇರುವ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಪ್ರತಿದಿನ ಸಂಜೆ 5ರಿಂದ ರಾತ್ರಿ 10 ಗಂಟೆವರೆಗೆ ವಸ್ತುಪ್ರದರ್ಶನ, ರೋಬಾಟಿಕ್ ಕಾಡುಪ್ರಾಣಿಗಳ ಪ್ರದರ್ಶನ ನಡೆಯಲಿದೆ. ಈ ವೇಳೆ ಸಾರ್ವಜನಿಕರಿಗಾಗಿ ಶಾಪಿಂಗ್, ಫನ್ ಎಂಟರ್ಟೈನ್ಮೆಂಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈಗಾಗಲೇ ವಸ್ತುಪ್ರದರ್ಶನ ಆರಂಭಗೊಂಡಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಉದ್ಘಾಟಿಸಿದ್ದು, ಉಪಾಧ್ಯಕ್ಷ ಅಬ್ಬಾಸ್ ಅಲಿ, ವಕೀಲ ಅಶೋಕ್ ಬರಿಮಾರು, ಸಾಮಾಜಿಕ ಕಾರ್ಯಕರ್ತ ಎಸ್.ಎಂ.ಇಸ್ಮಾಯಿಲ್, ಎಂ.ಸುಬ್ಬರಾವ್, ಫಾರೂಕ್  ಭಾಗವಹಿಸಿದ್ದರು.

ಬಂಟ್ವಾಳದಲ್ಲಿ ಇದೇ ಪ್ರಥಮವಾಗಿ ವಸ್ತುಪ್ರದರ್ಶನವನ್ನು ನಾವು ಆಯೋಜಿಸುತ್ತಿದ್ದು, ಸ್ವಚ್ಛತೆ, ಆರೋಗ್ಯದ ಕಡೆ ಗಮನ, 100ಕ್ಕೂ ಅಧಿಕ ಮಳಿಗೆಗಳು, ಮನರಂಜನೆ, ಮಕ್ಕಳಿಗೆ ಬೋಟಿಂಗ್, 20ಕ್ಕೂ ಅಧಿಕ ಆಟದ ಸಾಮಾಗ್ರಿಗಳು ಇರಲಿವೆ ಎಂದು ಪ್ರದರ್ಶನ ಸಂಸ್ಥೆಯಾದ ಎಕ್ಸಿಬಿಷನ್ ಇಂಡಿಯಾದ ಪ್ರಮುಖ ಎಂ.ಎಸ್. ನಾಗಚಂದ್ರ ಮಾಹಿತಿ ನೀಡಿದರು.

ರಾಜ್ಯಾದ್ಯಂತ ಒಟ್ಟು ನಾಲ್ಕು ಪ್ರದರ್ಶನಗಳನ್ನು ನೀಡಿದ್ದು, ಇದು ಐದನೇ ಪ್ರದರ್ಶನ, ರೋಬೋಟಿಕ್ ಎನಿಮಲ್ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿವೆ. ಹ್ಯಾಂಡ್ಲೂಮ್, ಕೈಮಗ್ಗದ ವಸ್ತುಗಳು, ಮನೆಬಳಕೆ ಸಾಮಗ್ರಿಗಳು, ಪುಸ್ತಕ, ಫುಡ್ ಕೋರ್ಟ್, ಸಂಗೀತ ಕಾರಂಜಿ, ದೊಡ್ಡ ಜಯಂಟ್ ವೀಲ್, ಟೊರಾ ಟೊರಾ, ಬ್ರೇಕ್ ಡ್ಯಾನ್ಸ್, ಡ್ರ್ಯಾಗನ್ ಟ್ರೈನ್, ವಾಟರ್ ಬೋಟ್, ಬೌನ್ಸಿ ಮತ್ತು ಮಕ್ಕಳ ಅಮ್ಯೂಸ್ ಮೆಂಟ್ ಇರಲಿದೆ ಎಂದವರು ಮಾಹಿತಿ ನೀಡಿದರು.

ಶೇ. 50 ರಿಯಾಯಿತಿ

ಶಾಲೆಯವರು ಸಂಪರ್ಕಿಸಿದರೆ, ಶೇ.50ರಷ್ಟು ರಿಯಾಯಿತಿಯನ್ನು ಪ್ರವೇಶ ದರದಲ್ಲಿ ನೀಡಲಾಗುತ್ತದೆ. ಸುಮಾರು 1 ಲಕ್ಷದಷ್ಟು ಗ್ರಾಹಕರು ಆಗಮಿಸುವ ನಿರೀಕ್ಷೆ ಇದ್ದು, ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಕೆ.ಪಾಟೀಲ್, ಮಹಮ್ಮದ್ ಕಬೀರ್, ಎಸ್. ಶಿವಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X