Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ ಸಿಇಪಿ ಒಪ್ಪಂದಕ್ಕೆ ಭಾರತ ಸಹಿ...

ಆರ್ ಸಿಇಪಿ ಒಪ್ಪಂದಕ್ಕೆ ಭಾರತ ಸಹಿ ಹಾಕುವುದಿಲ್ಲ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ4 Nov 2019 7:34 PM IST
share
ಆರ್ ಸಿಇಪಿ ಒಪ್ಪಂದಕ್ಕೆ ಭಾರತ ಸಹಿ ಹಾಕುವುದಿಲ್ಲ: ಪ್ರಧಾನಿ ಮೋದಿ

 ಹೊಸದಿಲ್ಲಿ,ನ.4: ಚೀನಾ ಬೆಂಬಲಿತ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ವ್ಯಾಪಾರ ಒಪ್ಪಂದದಲ್ಲಿ ಭಾಗಿಯಾಗದಿರಲು ಭಾರತವು ಸೋಮವಾರ ನಿರ್ಧರಿಸಿದ್ದು,ಒಪ್ಪಂದದ ಕುರಿತು ತನ್ನ ಪ್ರಮುಖ ಕಳವಳಗಳನ್ನು ಬಗೆಹರಿಸಲಾಗಿಲ್ಲ ಎಂದು ಹೇಳಿದೆ.

ಇದೇ ವೇಳೆ ಭಾರತವನ್ನು ಹೊರಗಿಟ್ಟು ಒಪ್ಪಂದವನ್ನು ಅಂತಿಮಗೊಳಿಸಲು ‘ಆಸಿಯಾನ್‌’ನ 10 ಸದಸ್ಯ ರಾಷ್ಟ್ರಗಳು ಮತ್ತು ಈ ಗುಂಪಿನೊಂದಿಗೆ ಗುರುತಿಸಿಕೊಂಡಿರುವ ಇತರ ಐದು ರಾಷ್ಟ್ರಗಳು ನಿರ್ಧರಿಸಿವೆ ಮತ್ತು ಭಾರತವು ಯಾವಾಗ ಬೇಕಾದರೂ ಒಪ್ಪಂದದಲ್ಲಿ ಭಾಗಿಯಾಗಬಹುದು ಎಂದು ಚೀನಾ ಹೇಳಿದೆ.

ಮುಖ್ಯ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಆರ್‌ಸಿಇಪಿ ತನ್ನ ಮೂಲ ಉದ್ದೇಶವನ್ನು ಪ್ರತಿಫಲಿಸುತ್ತಿಲ್ಲ ಎಂದು ಹಿರಿಯ ಸರಕಾರಿ ಮೂಲಗಳು ಇಲ್ಲಿ ತಿಳಿಸಿದವು.

ಭಾರತದ ನಿಲುವು ವಾಸ್ತವ ವ್ಯವಹಾರಿಕತೆ,ಬಡವರ ಹಿತಾಸಕ್ತಿಗಳನ್ನು ರಕ್ಷಿಸುವ ಒತ್ತಾಸೆ ಮತ್ತು ದೇಶದ ಸೇವಾ ಕ್ಷೇತ್ರಕ್ಕೆ ಲಾಭವನ್ನೊದಗಿಸುವ ಪ್ರಯತ್ನದ ಸಮ್ಮಿಶ್ರಣವಾಗಿದೆ ಎಂದೂ ಅವು ಹೇಳಿದವು.

“ಇಂತಹ ನಿರ್ಧಾರಗಳಲ್ಲಿ ನಮ್ಮ ರೈತರು,ವ್ಯಾಪಾರಿಗಳು,ವೃತ್ತಿಪರರು ಮತ್ತು ಕೈಗಾರಿಕೆಗಳ ಹಿತಾಸಕ್ತಿಗಳು ಅಡಗಿವೆ. ಭಾರತವನ್ನು ಬೃಹತ್ ಮಾರುಕಟ್ಟೆಯನ್ನಾಗಿ ಮತ್ತು ಖರೀದಿ ಸಾಮರ್ಥ್ಯದಲ್ಲಿ ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಮಾಡಿರುವ ಕಾರ್ಮಿಕರು ಮತ್ತು ಬಳಕೆದಾರರೂ ಅಷ್ಟೇ ಮುಖ್ಯವಾಗಿದ್ದಾರೆ. ಎಲ್ಲ ಭಾರತೀಯರ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ಆರ್‌ಸಿಇಪಿಯನ್ನು ತೂಗಿ ನೋಡಿದಾಗ ಯಾವುದೇ ಧನಾತ್ಮಕ ಉತ್ತರ ನನಗೆ ದೊರಕಿಲ್ಲ. ಹೀಗಾಗಿ ಆರ್‌ಸಿಇಪಿಗೆ ಸೇರ್ಪಡೆಗೊಳ್ಳಲು ನನ್ನ ಮನಃಸ್ಸಾಕ್ಷಿ ಅನುಮತಿಯನ್ನು ನೀಡುತ್ತಿಲ್ಲ” ಎಂದು ಬ್ಯಾಂಕಾಕ್‌ನಲ್ಲಿ ಆರ್‌ಸಿಇಪಿ ಶೃಂಗದಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಚೀನಿ ಆಮದುಗಳ ವಿರುದ್ಧ ರಕ್ಷಣೆಗಾಗಿ ಸುಂಕ ಇಳಿಕೆಗೆ 2014ನ್ನು ಮೂಲ ವರ್ಷವಾಗಿ ಪರಿಗಣಿಸುವಿಕೆ ಮತ್ತು 15 ರಾಷ್ಟ್ರಗಳಿಂದ ಸೇವೆಗಳ ಕ್ಷೇತ್ರವನ್ನು ಮುಕ್ತಗೊಳಿಸುವಿಕೆ ಸೇರಿದಂತೆ ಹಲವಾರು ಕಳವಳಗಳನ್ನು ಬೆಟ್ಟು ಮಾಡುವ ಮೂಲಕ ಮೋದಿ ಸರಕಾರವು ಆರ್‌ಸಿಇಪಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಠಿಣ ನಿಲುವು ತಳೆದಿತ್ತು.

ಯಾವುದೇ ಗಡುವನ್ನು ಸ್ವೀಕರಿಸಲು ಮೋದಿ ಸರಕಾರವು ಸಿದ್ಧವಿಲ್ಲ ಮತ್ತು ದೇಶದ ಹಿತಾಸಕ್ತಿಗಳ ಸಂಪೂರ್ಣ ರಕ್ಷಣೆಯಾಗಬೇಕು ಎಂದು ಬಯಸಿದೆ ಎಂದು ಭಾರತೀಯ ಅಧಿಕಾರಿಗಳು ಒಪ್ಪಂದದ ಕುರಿತು ಇತರ ರಾಷ್ಟ್ರಗಳೊಂದಿಗಿನ ಚರ್ಚೆಯಲ್ಲಿ ಸ್ಪಷ್ಟವಾಗಿ ಹೇಳಿದ್ದರು.

ಭಾರತವು ಜಾಗತಿಕ ಶಕ್ತಿಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಅದು ಈ ಬಾರಿ ರಕ್ಷಣಾತ್ಮಕ ನಿಲುವನ್ನು ತಳೆದಿದೆ ಎಂದು ಮೂಲಗಳು ತಿಳಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X