Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಾರಿಗೂ ಖಾಸಗಿತನ ಉಳಿದಿಲ್ಲ: ಸುಪ್ರೀಂ...

ಯಾರಿಗೂ ಖಾಸಗಿತನ ಉಳಿದಿಲ್ಲ: ಸುಪ್ರೀಂ ಕೋರ್ಟ್

ಛತ್ತೀಸ್‌ಗಡದ ಐಪಿಎಸ್ ಅಧಿಕಾರಿಯ ಪೋನ್ ಕದ್ದಾಲಿಕೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ4 Nov 2019 8:45 PM IST
share
ಯಾರಿಗೂ ಖಾಸಗಿತನ ಉಳಿದಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.4: ಛತ್ತೀಸ್‌ಗಡ ಸರಕಾರದಿಂದ ಐಪಿಎಸ್ ಅಧಿಕಾರಿ ಮುಕೇಶ ಗುಪ್ತಾ ಅವರ ಫೋನ್ ಕದ್ದಾಲಿಕೆ ಪ್ರಕರಣದ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡಿದ್ದ ಸರ್ವೋಚ್ಚ ನ್ಯಾಯಾಲಯವು,‘ಯಾರಿಗೂ ಖಾಸಗಿತನ ಉಳಿದಿಲ್ಲ’ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಭೂಪೇಶ ಬಾಘೇಲ್ ನೇತೃತ್ವದ ಸರಕಾರವು ತನ್ನನ್ನು ಮತ್ತು ತನ್ನ ಕುಟುಂಬವನ್ನು ಗುರಿಯಾಗಿಸಿಕೊಂಡಿದೆ ಎಂದು ಗುಪ್ತಾ ಆರೋಪಿಸಿದ್ದಾರೆ.

ಈ ದೇಶದಲ್ಲಿ ಏನಾಗುತ್ತಿದೆ? ಈ ಫೋನ್ ಕದ್ದಾಲಿಕೆಗೆ ಯಾರು ಆದೇಶಿಸಿದ್ದರು ಎಂದು ಪ್ರಶ್ನಿಸಿದ ನ್ಯಾಯಮೂರ್ತಿಗಳಾದ ಅರುಣ ಮಿಶ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರ ಪೀಠವು,ಕದ್ದಾಲಿಕೆಗೆ ಆದೇಶಿಸಿದ್ದು ಯಾರು ಎನ್ನುವುದನ್ನು ಮತ್ತು ಅದರ ಹಿಂದಿನ ಕಾರಣಗಳೇನು ಎಂದು ಸ್ಪಷ್ಟಪಡಿಸಿ ವಿವರವಾದ ಅಫಿಡವಿಟ್ ಅನ್ನು ಸಲ್ಲಿಸುವಂತೆ ಛತ್ತೀಸ್‌ಗಡ ಸರಕಾರದ ಅಧಿಕಾರಿಗಳಿಗೆ ನಿರ್ದೇಶ ನೀಡಿತು.

  ಗುಪ್ತಾ ಅವರನ್ನು ಬಂಧಿಸದಂತೆ ಮತ್ತು ಅನಗತ್ಯ ಕಿರುಕುಳಗಳನ್ನು ನೀಡದಂತೆ ಸರ್ವೋಚ್ಚ ನ್ಯಾಯಾಲಯವು ಕಳೆದ ಅಕ್ಟೋಬರ್‌ನಲ್ಲಿ ಛತ್ತೀಸ್‌ಗಡ ಪೊಲೀಸರಿಗೆ ಸೂಚಿಸಿತ್ತು.

ಗುಪ್ತಾ ಪರ ವಕೀಲ ಮಹೇಶ ಜೇಠ್ಮಲಾನಿ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಿರುವುದನ್ನು ಆಕ್ಷೇಪಿಸಿದ ನ್ಯಾಯಾಲಯವು,ಅವರ ವಿರುದ್ಧ ವಿಚಾರಣೆಗೆ ತಡೆಯಾಜ್ಞೆ ನೀಡಿತು. ಮುಖ್ಯಮಂತ್ರಿಗಳ ಹೆಸರನ್ನು ಪ್ರಕರಣದಲ್ಲಿ ಎಳೆದುತರುವ ಮೂಲಕ ವಿಷಯವನ್ನು ರಾಜಕೀಯಗೊಳಿಸದಂತೆ ಜೇಠ್ಮಲಾನಿಯವರಿಗೆ ನಿರ್ದೇಶ ನೀಡಿದ ನ್ಯಾಯಾಲಯವು,ಅರ್ಜಿಯಲ್ಲಿನ ಪ್ರತಿವಾದಿಗಳ ಪೈಕಿ ಬಾಘೇಲ್ ಹೆಸರನ್ನು ತೆಗೆಯುವಂತೆ ಆದೇಶಿಸಿತು.

ಆರ್ಥಿಕ ಅಪರಾಧಗಳ ಘಟಕವು ಆಗ ವಿಶೇಷ ಡಿಜಿಪಿಯಾಗಿದ್ದ ಗುಪ್ತಾ ಮತ್ತು ನಾರಾಯಣಪುರ ಎಸ್‌ಪಿ ಆಗಿದ್ದ ರಜನೇಶ್ ಸಿಂಗ್ ಅವರ ವಿರುದ್ಧ ಕ್ರಿಮಿನಲ್ ಒಳಸಂಚಿನ ಆರೋಪದಲ್ಲಿ ವರದಿಯೊಂದನ್ನು ದಾಖಲಿಸಿದ ಬಳಿಕ ಫೆ.9ರಂದು ಅವರಿಬ್ಬರನ್ನೂ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಈ ಅಧಿಕಾರಿಗಳು 2015ರಲ್ಲಿ ನಾಗರಿಕ ಪೂರೈಕೆ ನಿಗಮದ ಹಗರಣದ ತನಿಖೆಯ ಸಂದರ್ಭದಲ್ಲಿ ಫೋನ್‌ಗಳನ್ನು ಕದ್ದಾಲಿಸಿದ್ದರೆಂದೂ ಆರೋಪಿಸಲಾಗಿತ್ತು.

ಸುಳ್ಳು ಸಾಕ್ಷಗಳನ್ನು ಒದಗಿಸಿದ್ದ,ಸಾಕ್ಷವನ್ನು ತಿರುಚಿದ್ದ ಮತ್ತು ಫೋರ್ಜರಿ ಸೇರಿದಂತೆ ವಿವಿಧ ಆರೋಪಗಳನ್ನು ಗುಪ್ತಾ ಮತ್ತು ಸಿಂಗ್ ವಿರುದ್ಧ ಹೊರಿಸಲಾಗಿತ್ತು. ಎಲ್ಲ ಆರೋಪಗಳನ್ನು ನಿರಾಕರಿಸಿರುವ ಗುಪ್ತಾ,ಕಾನೂನಿನಂತೆ ವಿಚಾರಣೆಯನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ.

ಸೆ.2ರಂದು ಮಧ್ಯಂತರ ಆದೇಶದ ಮೂಲಕ ಸರಕಾರವು ಗುಪ್ತಾ ವಿರುದ್ಧ ದಾಖಲಿಸಿದ್ದ ಮೂರು ಎಫ್‌ಐಆರ್‌ಗಳಿಗೆ ತಡೆಯನ್ನು ನೀಡಿದ್ದ ಸರ್ವೋಚ್ಚ ನ್ಯಾಯಾಲಯವು,ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X