Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಮರಳುಗಾರಿಕೆ ಆರಂಭಿಸುವಂತೆ...

ಕುಂದಾಪುರ: ಮರಳುಗಾರಿಕೆ ಆರಂಭಿಸುವಂತೆ ಆಗ್ರಹಿಸಿ ಕಾರ್ಮಿಕರಿಂದ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ4 Nov 2019 10:24 PM IST
share
ಕುಂದಾಪುರ: ಮರಳುಗಾರಿಕೆ ಆರಂಭಿಸುವಂತೆ ಆಗ್ರಹಿಸಿ ಕಾರ್ಮಿಕರಿಂದ ಪಾದಯಾತ್ರೆ

 ಕುಂದಾಪುರ, ನ.4: ಕುಂದಾಪುರ ಹಾಗೂ ಬೈಂದೂರಿನ ಎಲ್ಲ ನದಿಗಳಲ್ಲಿ ಮರಳುಗಾರಿಕೆ ಆರಂಭಿಸಬೇಕು ಮತ್ತು ಈ ವಿಚಾರದಲ್ಲಿ ಸರಕಾರ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ನೇತೃತ್ವದಲ್ಲಿ ಸೋಮವಾರ ಕುಂದಾಪುರದಿಂದ ಹಾಲಾಡಿಯಲ್ಲಿರುವ ಕುಂದಾಪುರ ಶಾಸಕರ ಮನೆಯವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳಗ್ಗೆ ಕುಂದಾಪುರದ ವಿನಾಯಕ ಥಿಯೇಟರ್ ಎದುರಿನಿಂದ ಪಾದಯಾತ್ರೆ ಆರಂಭಗೊಂಡಿದ್ದು, ದಾರಿಯುದ್ದಕ್ಕೂ ವಿವಿಧ ಗ್ರಾಮ ಘಟಕಗಳ ಕಾರ್ಯ ಕರ್ತರು ಪಾದಯಾತ್ರೆಯನ್ನು ಸೇರಿಕೊಂಡರು. ಸಂಜೆ ವೇಳೆ ಸಾವಿರಾರು ಸಂಖ್ಯೆ ಯಲ್ಲಿದ್ದ ಕಾರ್ಮಿಕರ ಪಾದಯಾತ್ರೆ 30 ಕಿ.ಮೀ. ದೂರದಲ್ಲಿರುವ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನೆ ತಲುಪಿತು.

ಪಾದಯಾತ್ರೆಯ ಮೂಲಕ ಸಾಗಿಬಂದ ಕಾರ್ಮಿಕರನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬರ ಮಾಡಿಕೊಂಡರು. ಅವರಿಗೆ ಬೆಲ್ಲ ನೀರು ಹಾಗೂ ಲಘು ಉಪಹಾರವನ್ನು ನೀಡಲಾಯಿತು. ಅಲ್ಲದೇ ಕಾರ್ಮಿಕರಿಗಾಗಿಯೇ ಶಾಸಕರ ಮನೆಯ ಎದುರು ಬೃಹತ್ ಆಗಿ ಪೆಂಡಾಲ್ ಅನ್ನು ಅಳವಡಿಸಿ ಆಸನದ ವ್ಯವಸ್ಥೆ ಯನ್ನೂ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಮುಖಂಡರು, ಹಿಂದೆ ಜಿಲ್ಲಾಧಿಕಾರಿ ಕಚೇರಿ ಎದುರು ಕಾರ್ಮಿಕರು ಧರಣಿ ನಡೆಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅ.15ರೊಳಗೆ ಎಲ್ಲಾ ಕಡೆಗಳಲ್ಲೂ ಮರಳು ತೆಗೆಯುವ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ನಮ್ಮಲ್ಲಿ ಈವರೆಗೆ ಮರಳನ್ನು ತೆಗೆಯುವ ಪ್ರಕ್ರಿಯೆ ಆರಂಭವಾಗಿಲ್ಲ. ಇದರಿಂದ ಕೆಲಸವಿಲ್ಲದೆ ಕಾರ್ಮಿಕ ಕುಟುಂಬಗಳು ಬೀದಿ ಪಾಲಾಗಿದೆ ಎಂದು ಆರೋಪಿಸಿದರು.

ಬಳಿಕ ಮಾತನಾಡಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮರಳಿನ ಪ್ರಮಾಣವನ್ನು ಹೆಚ್ಚಿಸಿ ಅರ್ಧದಲ್ಲಿ ನಿಂತಿರುವ ಕಾಮಗಾರಿಗಳಿಗೆ ಕೂಡಲೇ ಮರಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು. ಈ ಬಗ್ಗೆ ಹಿಂದಿನಿಂದಲೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಮರಳನ್ನು ಕೊಡಿಸುವುದಕ್ಕಾಗಿ ಸದನದಲ್ಲಿ ಸರಕಾರದ ಗಮನ ಸೆಳೆಯುವ ಕೆಲಸವನ್ನು ಮಾಡುತ್ತ ಬಂದಿದ್ದೇನೆ. ಮುಂದಿನ 10 ದಿನದೊಳಗೆ ಅವಶ್ಯವಿರುವ ಕಡೆಗಳಲ್ಲಿ ಬಳ್ಕೂರು ಹಾಗೂ ಮಾಬುಕಳದಿಂದ ಮರಳನ್ನು ಪೂರೈಸುವ ಕೆಲಸ ಮಾಡ ಲಾಗುವುದು ಎಂದು ಭರವಸೆ ನೀಡಿದರು.

ಸಂಘದ ತಾಲೂಕು ಅಧ್ಯಕ್ಷ ಯು.ದಾಸ ಭಂಡಾರಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಕೆ.ಶಂಕರ್, ಎಚ್.ನರಸಿಂಹ, ಮಹಾಬಲ ವಡೇರಹೋಬಳಿ, ರಾಜು ಪಡುಕೋಣೆ, ತಾಲೂಕು ಮುಖಂಡರಾದ ಜಗದೀಶ್ ಆಚಾರ್ಯ, ಸಂತೋಷ ಹೆಮ್ಮಾಡಿ, ರಮೇಶ್ ಗುಲ್ವಾಡಿ, ಅರುಣ್ ಕುಮಾರ್ ಗಂಗೊಳ್ಳಿ, ವಿಜಯೇಂದ್ರ ಕೋಣಿ, ಚಿಕ್ಕ ಮೊಗವೀರ, ಸುಧಾಕರ ಕುಂಭಾಶಿ, ಪ್ರಶಾಂತ್ ಸಳ್ವಾಡಿ, ಶ್ರೀನಿವಾಸ ಪೂಜಾರಿ, ರಾಮಚಂದ್ರ ನಾವಡ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X