Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದುವೆ ಉಡುಗೊರೆಯಾಗಿ ವಿಶೇಷ ಚೇತನ...

ಮದುವೆ ಉಡುಗೊರೆಯಾಗಿ ವಿಶೇಷ ಚೇತನ ವ್ಯಕ್ತಿಗೆ ಮನೆ ನಿರ್ಮಾಣಕ್ಕೆ ಸಹಾಯ

ಪೊಲೀಸ್ ಸಿಬ್ಬಂದಿಯ ಆದರ್ಶ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ4 Nov 2019 10:39 PM IST
share
ಮದುವೆ ಉಡುಗೊರೆಯಾಗಿ ವಿಶೇಷ ಚೇತನ ವ್ಯಕ್ತಿಗೆ ಮನೆ ನಿರ್ಮಾಣಕ್ಕೆ ಸಹಾಯ

ಪುತ್ತೂರು: ಮದುವೆಯಲ್ಲಿ ಸಂದರ್ಭದಲ್ಲಿ ವಧು ವರದು ಉಡುಗೊರೆ ಸ್ವೀಕರಿಸುವುದು ಸಾಮಾನ್ಯ ಆದರೆ ಇಲ್ಲೊಬ್ಬ ಪೊಲೀಸ್ ಸಿಬ್ಬಂದಿ ತಾನು ಮದುವೆಯಾಗುತ್ತಿರುವ ಶುಭ ಗಳಿಗೆಯಲ್ಲಿ ಬಡ ವಿಶೇಷ ಚೇತನ ವ್ಯಕ್ತಿಯ ಕುಟುಂಬವೊಂದಕ್ಕೆ ಮನೆ ನಿರ್ಮಾಣದ ಸಹಕಾರದ ಉಡುಗೊರೆ ನೀಡುವ ಮೂಲಕ ಆದರ್ಶ ಮೆರೆದಿದ್ದಾರೆ. ಪುತ್ತೂರು ಟ್ರಾಫಿಕ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರೋಹಿತ್ ಕುಲಾಲ್ ಈ ಮಾದರಿ ಕೆಲಸ ಮಾಡಿದ್ದಾರೆ.

ಕಡಬ ತಾಲೂಕು ರಾಮಕುಂಜ ಗ್ರಾಮದ ಬೊಳ್ಳೆರೋಡಿ ನಿವಾಸಿ ಚೆನ್ನಪ್ಪ ಕುಲಾಲ್ ಮತ್ತು ಹೇಮಾವತಿ ದಂಪತಿಗಳ ಪುತ್ರರಾದ ಟ್ರಾಫಿಕ್ ಠಾಣೆಯ ಪೊಲೀಸ್ ರೋಹಿತ್ ಕುಲಾಲ್ ಅವರು ಅಮಿತಾ ಎಂಬವರ ಜೊತೆಗೆ ಭಾನುವಾರ ಉಪ್ಪಿನಂಗಡಿಯ ಶಕ್ತಿ ಸಭಾಭವನದಲ್ಲಿ ಅಮಿತಾ ಎಂಬವರ ಜೊತೆಗೆ ವಿವಾಹಿತರಾದರು. ಈ ಸಂದರ್ಭದಲ್ಲೇ ವಿಶೇಷ ಚೇತನ ವ್ಯಕ್ತಿಯೊಬ್ಬರಿಗೆ ಮನೆ ಕಟ್ಟಲು ನಗದು ಮತ್ತು ಸಾಮಗ್ರಿ ರೂಪದ ನೆರವು ಹಸ್ತಾಂತರಿಸುವ ಮೂಲಕ ಆದರ್ಶ ಮೆರೆದಿದ್ದಾರೆ.

ಮದುವೆ ಸಂದರ್ಭ ಬಂಧು ಮಿತ್ರರಿಂದ ಉಡುಗೊರೆ ಸ್ವೀಕರಿಸುವ ಬದಲು, ಬಳ್ಪ ಸಮೀಪದ ಕೇನ್ಯಾ ಗ್ರಾಮದ ನಿವಾಸಿ ಲಿಂಗು ಎಂಬ ವಿಶೇಷ ಚೇತನ ವ್ಯಕ್ತಿಗೆ ಮನೆ ಕಟ್ಟಲು  25,000 ರೂ. ನಗದು ಮತ್ತು ಮನೆ ಕಟ್ಟಲು ಬೇಕಾದ ಹಂಚು ಮತ್ತಿತರ ಸಾಮಗ್ರಿ ಹಸ್ತಾಂತರಿಸಿದರು.

ಲಿಂಗು ಅವರು ಕಣ್ಣು ಕಾಣದ, ಕಿವಿ ಕೇಳದ ಸ್ಥಿತಿಯಲ್ಲಿದ್ದು, ಬಂಧುಗಳು ದೂರವಾದ ಕಾರಣ ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ. ಮನೆಯಿಲ್ಲದ ಕಾರಣ ಹರಕು ಗುಡಿಸಲಿನಲ್ಲಿ ನೆಲಸಿದ್ದಾರೆ. ಈ ವಿಚಾರವನ್ನು ತನ್ನ ಗೆಳೆಯನಾದ ಯುವ ಬ್ರಿಗೇಡ್‌ನ ತಿಲಕ್‌ರಿಂದ ಕೇಳಿ ತಿಳಿದುಕೊಂಡ ರೋಹಿತ್, ಅವರಿಗೆ ನೆರವು ನೀಡಲು ನಿರ್ಧರಿಸಿದರು. ಅದರಂತೆ ಯುವಬ್ರಿಗೇಡ್ ಕಾರ್ಯಕರ್ತರು ಭಾನುವಾರ ಲಿಂಗು ಅವರನ್ನು ಮದುವೆ ಮಂಟಪಕ್ಕೆ ಕರೆ ತಂದಿದ್ದರು.

ನನಗೆ ಆಡಂಬರದ ಮದುವೆ ಇಷ್ಟವಿಲ್ಲ. ಮೇಲಾಗಿ ಮದುವೆ ಹೆಸರಿನಲ್ಲಿ ಯಾರಿಗಾದರೂ ಸಹಾಯ ಮಡಬೇಕೆಂಬ ಆಸೆ ಇತ್ತು. ಅದು ಈಡೇರಿದೆ ಎಂದು ರೋಹಿತ್ ಕುಲಾಲ್ ಹೇಳುತ್ತಾರೆ. ಪೊಲೀಸ್ ಇಲಾಖೆಯಲ್ಲಿದ್ದುಕೊಂಡು ಅಪೂರ್ವ ಆದರ್ಶವನ್ನು ರೋಹಿತ್ ಮೆರೆದಿದ್ದಾರೆ ಎಂದು ತಿಲಕ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X