Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಜೊತೆ ಮಾತುಕತೆ ಇಲ್ಲ: ಇರಾನ್‌ನ...

ಅಮೆರಿಕ ಜೊತೆ ಮಾತುಕತೆ ಇಲ್ಲ: ಇರಾನ್‌ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ4 Nov 2019 11:15 PM IST
share
ಅಮೆರಿಕ ಜೊತೆ ಮಾತುಕತೆ ಇಲ್ಲ: ಇರಾನ್‌ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಘೋಷಣೆ

ಟೆಹರಾನ್ (ಇರಾನ್), ನ. 4: ಅಮೆರಿಕದೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಯನ್ನು ಇರಾನ್‌ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ರವಿವಾರ ಹೇಳಿದ್ದಾರೆ.

‘‘ಎಲ್ಲ ಸಮಸ್ಯೆಗಳಿಗೆ ಅಮೆರಿಕದೊಂದಿಗೆ ಮಾತುಕತೆ ನಡೆಸುವುದೇ ಪರಿಹಾರ ಎಂದು ಭಾವಿಸುವವರು ತಪ್ಪು ಅಭಿಪ್ರಾಯ ಹೊಂದಿದ್ದಾರೆ’’ ಎಂದು ಟೆಹರಾನ್‌ನಲ್ಲಿರುವ ರಾಯಭಾರ ಕಚೇರಿಯಲ್ಲಿ ಒತ್ತೆಯಾಳು ಬಿಕ್ಕಟ್ಟು ಸಂಭವಿಸಿದ 40ನೇ ವಾರ್ಷಿಕ ದಿನದ ಮುನ್ನಾ ದಿನ ಮಾಡಿದ ಭಾಷಣವೊಂದರಲ್ಲಿ ಅವರು ಹೇಳಿದ್ದಾರೆ ಎಂದು ಅವರ ಅಧಿಕೃತ ವೆಬ್‌ ಸೈಟ್ ತಿಳಿಸಿದೆ.

‘‘ಅಮೆರಿಕದೊಂದಿಗೆ ಮಾತನಾಡಿದರೆ ಏನೂ ಆಗುವುದಿಲ್ಲ. ಯಾಕೆಂದರೆ ಅವರು ಖಂಡಿತವಾಗಿಯೂ ಯಾವುದೇ ರಿಯಾಯಿತಿ ನೀಡುವುದಿಲ್ಲ’’ ಎಂದರು.

 ಇರಾನ್‌ನ ಅಮೆರಿಕ ಬೆಂಬಲಿತ ಆಡಳಿತಗಾರ ಶಾರನ್ನು ಅಧಿಕಾರದಿಂದ ಕೆಳಗಿಳಿಸಿದ ಸುಮಾರು 9 ತಿಂಗಳ ಬಳಿಕ, 1979 ನವೆಂಬರ್ 4ರಂದು ವಿದ್ಯಾರ್ಥಿಗಳು ಟೆಹರಾನ್‌ ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯೊಳಗೆ ನುಗ್ಗಿ ಅಲ್ಲಿನ ಸಿಬ್ಬಂದಿಯನ್ನು ಒತ್ತೆಸೆರೆಯಾಳಾಗಿ ಇಟ್ಟುಕೊಂಡಿದ್ದರು. ಅಮೆರಿಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರನ್ನು ಒಪ್ಪಿಸಬೇಕು ಎಂದು ಅಮೆರಿಕವನ್ನು ಅವರು ಒತ್ತಾಯಿಸುತ್ತಿದ್ದರು.

ಬಿಕ್ಕಟ್ಟು ಕೊನೆಗೊಳ್ಳಲು 444 ದಿನಗಳು ಬೇಕಾದವು. ಕೊನೆಗೂ ವಿದ್ಯಾರ್ಥಿಗಳು 52 ಅಮೆರಿಕನ್ನರನ್ನು ಬಿಡುಗಡೆಗೊಳಿಸಿದರು. ಆದರೆ 1980ರಲ್ಲಿ ಅಮೆರಿಕವು ಇರಾನ್ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿತು. ಅಂದಿನಿಂದ ಉಭಯ ದೇಶಗಳ ನಡುವೆ ಯಾವುದೇ ಬಾಂಧವ್ಯ ಉಳಿಯಲಿಲ್ಲ.

ವೈರತ್ವಕ್ಕೆ ರಾಯಭಾರ ಕಚೇರಿ ಬಿಕ್ಕಟ್ಟು ಕಾರಣವಲ್ಲ: ಖಾಮಿನೈ

 1979 ನವೆಂಬರ್ 4ರಂದು ವಿದ್ಯಾರ್ಥಿಗಳು ಟೆಹರಾನ್ ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯನ್ನು ವಶಪಡಿಸಿಕೊಂಡಿರುವುದು, ಇರಾನ್-ಅಮೆರಿಕ ಬಿಕ್ಕಟ್ಟಿಗೆ ಕಾರಣವಲ್ಲ ಎಂದು ಇರಾನ್‌ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅಭಿಪ್ರಾಯಪಟ್ಟಿದ್ದಾರೆ.

‘‘ಬಿಕ್ಕಟ್ಟು 1953ರ ಕ್ಷಿಪ್ರಕ್ರಾಂತಿಯಿಂದಲೇ ಆರಂಭವಾಗಿತ್ತು. ಅಂದು ರಾಷ್ಟ್ರೀಯ ಸರಕಾರವನ್ನು ಅಮೆರಿಕ ಉರುಳಿಸಿತು ಹಾಗೂ ತನ್ನ ಕೈಗೊಂಬೆ ಹಾಗೂ ಭ್ರಷ್ಟ ಸರಕಾರವನ್ನು ಅಮೆರಿಕ ಇರಾನ್‌ನಲ್ಲಿ ಪ್ರತಿಷ್ಠಾಪಿಸಿತು. ಅಮೆರಿಕವನ್ನು ನಂಬುವ ಮೂಲಕ ರಾಷ್ಟ್ರೀಯ ಸರಕಾರವು ತಪ್ಪು ಮಾಡಿತ್ತು’’ ಎಂದು ಟ್ವಿಟರ್‌ನಲ್ಲಿ ಖಾಮಿನೈ ಹೇಳಿದ್ದಾರೆ.

ಬ್ರಿಟನ್ ನೆರವಿನೊಂದಿಗೆ ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ಸಂಘಟಿಸಿದ ಕ್ಷಿಪ್ರಕ್ರಾಂತಿಯು ಅತ್ಯಂತ ಜನಪ್ರಿಯ ಪ್ರಧಾನಿ ಮುಹಮ್ಮದ್ ಮುಸಾದಿಯನ್ನು ಅಧಿಕಾರದಿಂದ ಕೆಳಗಿಳಿಸಿತು. ಅವರು ಇರಾನ್‌ನ ತೈಲದ ರಾಷ್ಟ್ರೀಕರಣಕ್ಕೆ ಕರೆ ನೀಡಿದ್ದರು.

ಕ್ಷಿಪ್ರಕ್ರಾಂತಿಯ ಬಳಿಕ, ದೇಶದ ಕೊನೆಯ ಶಾರನ್ನು ಮರಳಿ ಅಧಿಕಾರಕ್ಕೆ ಏರಿಸಲಾಯಿತು. ಪ್ರಧಾನಿ ಮುಸಾದಿಯನ್ನು ಅಧಿಕಾರದಿಂದ ಕೆಳಗಿಳಿಸಲು ವಿಫಲ ಪ್ರಯತ್ನ ನಡೆಸಿದ ಬಳಿಕ ಶಾ 1953 ಆಗಸ್ಟ್‌ನಲ್ಲಿ ದೇಶದಿಂದ ಪಲಾಯನಗೈದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X