Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡವರ ವಿರುದ್ಧ ತಾರತಮ್ಯವೆಸಗುವ ನೀಟ್...

ಬಡವರ ವಿರುದ್ಧ ತಾರತಮ್ಯವೆಸಗುವ ನೀಟ್ ಅನ್ನು ಸರಕಾರವೇಕೆ ರದ್ದುಗೊಳಿಸುತ್ತಿಲ್ಲ ?

ಮದ್ರಾಸ್ ಉಚ್ಚ ನ್ಯಾಯಾಲಯದ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ4 Nov 2019 11:21 PM IST
share
ಬಡವರ ವಿರುದ್ಧ ತಾರತಮ್ಯವೆಸಗುವ ನೀಟ್ ಅನ್ನು ಸರಕಾರವೇಕೆ ರದ್ದುಗೊಳಿಸುತ್ತಿಲ್ಲ ?

ಚೆನ್ನೈ,ನ.4: ನೀಟ್ ಪರೀಕ್ಷೆಗಾಗಿ ತರಬೇತಿ ನೀಡುವ ಖಾಸಗಿ ಸಂಸ್ಥೆಗಳು ಐದು ಲ.ರೂ.ವರೆಗೂ ಶುಲ್ಕವನ್ನು ವಿಧಿಸುತ್ತಿರುವುದರಿಂದ ಅವುಗಳಲ್ಲಿ ತರಬೇತಿ ಪಡೆಯಲು ಬಡವರಿಗೆ ಸಾಧ್ಯವಿಲ್ಲ ಎಂದು ಅಭಿಪ್ರಾಯಿಸಿರುವ ಮದ್ರಾಸ್ ಉಚ್ಚ ನ್ಯಾಯಾಲಯವು,ಖಾಸಗಿ ತರಬೇತಿ ಕೇಂದ್ರಗಳಿಗೆ ಹಾಜರಾಗುವವರು ಮಾತ್ರ ವೈದ್ಯಕೀಯ ಸೀಟ್‌ಗಳನ್ನು ಪಡೆಯುತ್ತಿರುವುದರಿಂದ ನೀಟ್‌ನಿಂದ ಬಡವರಿಗೆ ಯಾವುದೇ ಲಾಭವಿಲ್ಲ ಮತ್ತು ಮೆಡಿಕಲ್ ಕಾಲೇಜುಗಳು ಬಡವಿದ್ಯಾರ್ಥಿಗಳಿಗೆ ಎಂದೂ ಬಾಗಿಲು ತೆರೆಯುವುದಿಲ್ಲ ಎಂದು ಹೇಳಿದೆ.

ನಕಲಿ ಪರೀಕ್ಷಾರ್ಥಿಯೋರ್ವ ನೀಟ್‌ಗೆ ಹಾಜರಾಗಿದ್ದ ಪ್ರಕರಣವೊಂದರ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಾಲಯವು,ಹಿಂದಿನ ಯುಪಿಎ ಸರಕಾರದ ಇತರೆಲ್ಲ ಕಾರ್ಯಕ್ರಮಗಳನ್ನು ಹಿಂದೆಗೆದುಕೊಂಡಿರುವ ಕೇಂದ್ರ ಸರಕಾರವು ನೀಟ್‌ಗೆ ಮಾತ್ರ ಏಕೆ ವಿನಾಯಿತಿ ನೀಡಿದೆ ಎಂದು ಪ್ರಶ್ನಿಸಿತು.

ನೀಟ್ ಬಡವರ ವಿರುದ್ಧ ತಾರತಮ್ಯವನ್ನೆಸಗುತ್ತಿದೆ. ಐದು ಲ.ರೂ.ಗಳನ್ನು ನೀಡಿ ಖಾಸಗಿ ಸಂಸ್ಥೆಗಳಲ್ಲಿ ತರಬೇತಿ ಪಡೆಯುವವರು ಮಾತ್ರ ವೈದ್ಯಕೀಯ ಸೀಟ್‌ಗಳನ್ನು ಪಡೆಯುತ್ತಿರುವುದು ಆಘಾತಕಾರಿಯಾಗಿದೆ. ಕಾಂಗ್ರೆಸ್-ಡಿಎಂಕೆ ಆಡಳಿತದಲ್ಲಿ ಜಾರಿಗೊಳಿಸಿದ್ದ ನೀಟ್‌ನಂತಹ ಕಾರ್ಯಕ್ರಮಗಳನ್ನು ಕೇಂದ್ರವೇಕೆ ರದ್ದುಗೊಳಿಸುತ್ತಿಲ್ಲ ಎಂದು ನ್ಯಾಯಾಲಯವು ಪ್ರಶ್ನಿಸಿತು.

ಸರಕಾರಿ ವೈದ್ಯರಿಗೆ ಕಡಿಮೆ ವೇತನ ನೀಡುತ್ತಿರುವುದಕ್ಕಾಗಿ ತಮಿಳು ನಾಡು ಸರಕಾರವನ್ನೂ ತೀವ್ರ ತರಾಟೆಗೆತ್ತಿಕೊಂಡ ನ್ಯಾಯಾಲಯವು,ವೈದ್ಯರಿಗೆ ಕೇವಲ 57,000 ರೂ.ವೇತನ ನೀಡಲಾಗುತ್ತಿದೆ,ಆದರೆ ಸರಕಾರಿ ಶಾಲೆಗಳ ಶಿಕ್ಷಕರು ಮತ್ತು ಹೈಕೋರ್ಟ್ ನ್ಯಾಯಾಧೀಶರ ಆಪ್ತ ಸಹಾಯಕರು ಅವರಿಗಿಂತ ಹೆಚ್ಚು ವೇತನಗಳನ್ನು ಪಡೆಯುತ್ತಿದ್ದಾರೆ ಎಂದು ಬೆಟ್ಟು ಮಾಡಿತು. ಪ್ರಕರಣದ ವಿಚಾರಣೆಯನ್ನು ನ.7ಕ್ಕೆ ಮುಂದೂಡಿದ ನ್ಯಾಯಾಲಯವು,ನೀಟ್‌ಗೆ ನಕಲಿ ಪರೀಕ್ಷಾರ್ಥಿಗಳು ಹಾಜರಾಗಿದ್ದ ಬಗ್ಗೆ ದೂರುಗಳೇನಾದರೂ ಬಂದಿವೆಯೇ ಎನ್ನುವುದನ್ನು ತಿಳಿಸುವಂತೆ ಸಿಬಿಐಗೆ ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X