Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 82...

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 82 ಹುದ್ದೆಗಳ ಪೈಕಿ 47 ಖಾಲಿ!

ಸಕಲ ವ್ಯವಸ್ಥೆಗಳಿರುವ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ

ಅಬ್ದುಲ್ ರಹಿಮಾನ್ ತಲಪಾಡಿಅಬ್ದುಲ್ ರಹಿಮಾನ್ ತಲಪಾಡಿ5 Nov 2019 1:01 PM IST
share
ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 82 ಹುದ್ದೆಗಳ ಪೈಕಿ 47 ಖಾಲಿ!

# ಒತ್ತಡದಿಂದಲೇ ಕಾರ್ಯನಿರ್ವಹಿಸುತ್ತಿರುವ ಹಾಲಿ ವೈದ್ಯರು 

# ಆರೋಗ್ಯ ಸೌಲಭ್ಯದಿಂದ ವಂಚಿತ ಬಡಜನತೆಯ ಕೊರಗು

ಬಂಟ್ವಾಳ, ನ.4: ದ.ಕ. ಜಿಲ್ಲೆಯ ಮೂರನೇ ಅತೀ ದೊಡ್ಡ ಮತ್ತು ಸಕಲ ವ್ಯವಸ್ಥೆಗಳಿರುವ ಸರಕಾರಿ ಆಸ್ಪತ್ರೆ ಎನಿಸಿರುವ ಹಾಗೂ ಸೇವೆ ಪ್ರಮಾಣದಲ್ಲಿ ಲೋಕಾಯುಕ್ತರ ಮೆಚ್ಚುಗೆ ಗಳಿಸಿರುವ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಅತಿಯಾಗಿ ಕಾಡುತ್ತಿದೆ. ಇದರಿಂದ ಈ ಭಾಗದ ಬಡಜನತೆ ಆರೋಗ್ಯ ಸೌಲಭ್ಯದಿಂದ ವಂಚಿತರಾಗುತ್ತಿದ್ದು, ಆಸ್ಪತ್ರೆಯಿಂದ ವಿಮುಖರಾಗುವ ಆತಂಕ ತಲೆದೋರಿದೆ.

ಸುಮಾರು 6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆಗಳಿದ್ದ ಹಳೆ ಸರಕಾರಿ ಆಸ್ಪತ್ರೆಯನ್ನು ವಾಜಿ ಸಚಿವ ಬಿ.ರಮಾನಾಥ ರೈ ಅವರ ವಿಶೇಷ ಮುತುವರ್ಜಿಯಿಂದ ಮೆಲ್ದರ್ಜೆಗೇರಿಸಿದ 100 ಹಾಸಿಗಳ ನೂತನ ಆಸ್ಪತ್ರೆಯನ್ನು ಅಂದಿನ ಮುಖ್ಯಮಂತ್ರಿ ಅವರು ಉದ್ಘಾಟಿಸಿದ್ದರು. ಆದರೆ, ಆಸ್ಪತ್ರೆಯ ಮೆಲ್ದರ್ಜೆಗೇರಿ ಉತ್ತಮ ಸೌಲಭ್ಯಗಳಿದ್ದರೂ ಇಲ್ಲಿಗೆ ಮಂಜೂರಾದ ಶೇ. 50ಕ್ಕಿಂತಲೂ ಅಧಿಕ ಹುದ್ದೆಗಳು ಖಾಲಿಯಾಗಿದೆ. ವೈದ್ಯರು, ಸಿಬ್ಬಂದಿ ಕೊರತೆಯಿಂದ ಹಾಲಿ ಇರುವ ವೈದ್ಯ-ಸಿಬ್ಬಂದಿ ಒತ್ತಡದಿಂದಲೇ ಕಾರ್ಯನಿರ್ವಹಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಯಾವ ಹುದ್ದೆಗಳು ಭರ್ತಿ-ಖಾಲಿ?: ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹುದ್ದೆ ಭರ್ತಿಯಿದ್ದು, ಫಿಸಿಶಿಯನ್, ಮಕ್ಕಳ ತಜ್ಞ ಹಾಗೂ ಅರಿವಳಿಕೆ ತಜ್ಞರ ತಲಾ ಒಂದೊಂದು ಹುದ್ದೆಗಳಲ್ಲಿ ಮೂರು ಕೂಡ ಖಾಲಿ ಇದೆ. ಕೀಲು ಮೂಳೆ ತಜ್ಞರ ಒಂದು ಹುದ್ದೆ ಸದ್ಯಕ್ಕೆ ಭರ್ತಿಯಿದ್ದರೂ, ಈ ವೈದ್ಯರು ಇದೇ ತಿಂಗಳು ನಿವೃತ್ತರಾಗಲಿದ್ದಾರೆ.

ಅದೇ ರೀತಿ ಕಣ್ಣಿನ ತಜ್ಞರು, ಇಎನ್‌ಟಿ ತಜ್ಞರು, ಜನರಲ್ ಸರ್ಜನ್, ಸ್ತ್ರಿರೋಗ ತಜ್ಞರು, ಹಿರಿಯ ದಂತ ಆರೋಗ್ಯಾಧಿಕಾರಿ, ಎಸ್‌ಎಂಒ, ಸಹಾಯಕ ಆಡಳಿತಾಧಿಕಾರಿ, ಶುಶ್ರೂಷಕ ಅಧೀಕ್ಷಕರು ದರ್ಜೆ-2ರ ತಲಾ ಒಂದೊಂದು ಹುದ್ದೆಗಳಲ್ಲಿ ಎಲ್ಲವೂ ಭರ್ತಿಯಾಗಿದೆ. ಕಚೇರಿ ಅಧೀಕ್ಷಕರು ಹಾಗೂ ಹಿರಿಯ ಪ್ರಯೋಗಶಾಲಾ ತಂತ್ರಜ್ಞ, ಹಿರಿಯ ಫಾರ್ಮಸಿಸ್ಟ್, ನೇತ್ರಾಧಿಕಾರಿ ತಲಾ ಒಂದೊಂದು ಹುದ್ದೆಗಳಲ್ಲಿ ನಾಲ್ಕು ಕೂಡ ಖಾಲಿ ಇದೆ.

ಆಸ್ಪತ್ರೆಗೆ ಮಂಜೂರಾಗಿರುವ 20 ಶುಶ್ರೂಷಕರ ಹುದ್ದೆಗಳಲ್ಲಿ ಎಲ್ಲವೂ ಭರ್ತಿ ಇದೆ. ಕಿರಿಯ ಪ್ರಯೋಗಶಾಲಾ ತಂತ್ರಜ್ಞ ಒಂದು ಹುದ್ದೆ ಭರ್ತಿ ಇದೆ. ಕಿರಿಯ ಫಾರ್ಮಸಿಸ್ಟ್, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ ತಲಾ ಎರಡೆರಡು ಹುದ್ದೆಗಳಲ್ಲಿ ಎಲ್ಲವೂ ಖಾಲಿ ಇದೆ. ಎಕ್ಸ್‌ರೇ ತಂತ್ರಜ್ಞರು ಹಾಗೂ ವಾಹನ ಚಾಲಕರ ತಲಾ ಎರಡೆರಡು ಹುದ್ದೆಗಳಲ್ಲಿ ಒಂದೊಂದು ಮಾತ್ರ ಭರ್ತಿಯಾಗಿದೆ. ಕ್ಲರ್ಕ್ ಕಂ ಟೈಪಿಸ್ಟ್ ಹಾಗೂ ಅಡುಗೆಯವರ ತಲಾ ಒಂದೊಂದು ಹುದ್ದೆಗಳಲ್ಲಿ ಎರಡೂ ಖಾಲಿ ಇದೆ. ಗ್ರೂಪ್ ಡಿಯ 32 ಹುದ್ದೆಗಳಲ್ಲಿ 30 ಖಾಲಿಯಿದ್ದು, ಇದರ ಒತ್ತಡ ನಿರ್ವಹಣೆಗೆ 15 ಮಂದಿ ಹೊರಗುತ್ತಿಗೆಯ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾಮಾಣಿಕ ಸೇವೆ: ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಹಾಲಿ ವೈದ್ಯರು, ಸಿಬ್ಬಂದಿಯ ಕರ್ತವ್ಯದ ಬಗ್ಗೆಯೂ ಆರೋಪಗಳಿಲ್ಲ. ಆದರೂ, ವೈದ್ಯರ ಮತ್ತು ಸಿಬ್ಬಂದಿ ಕೊರತೆಯಿಂದ ಜನತೆಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬುದು ಆಸ್ಪತ್ರೆಯವರ ಕೊರಗಾದರೆ, ಆಸ್ಪತ್ರೆ ಇದ್ದರೂ ವೈದ್ಯ, ಸಿಬ್ಬಂದಿ ಕೊರತೆಯಿಂದ ಬಡವರು ಬವಣೆ ಪಡುವಂತಾಗಿದೆ.


47 ಹುದ್ದೆಗಳು ಖಾಲಿ
ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಮಂಜೂರಾಗಿರುವ ಒಟ್ಟು 82 ಹುದ್ದೆಗಳಲ್ಲಿ ಹಾಲಿ 35 ಮಂದಿ ಕಾರ್ಯನಿರ್ವಹಿಸುತ್ತಿದ್ದು, 47 ಹುದ್ದೆಗಳು ಖಾಲಿ ಇವೆ. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ವರದಿಯ ಪ್ರಕಾರ ಆಸ್ಪತ್ರೆಗೆ ಮಾಸಿಕ 17 ಸಾವಿರ ಹೊರರೋಗಿಗಳು ಹಾಗೂ ಒಂದು ಸಾವಿರ ಒಳರೋಗಿಗಳು ಸೇವೆಯನ್ನು ಪಡೆದುಕೊಳ್ಳುತ್ತಿದ್ದು, ಇನ್ನಷ್ಟು ಸೇವೆ ಲಭ್ಯವಾಗುವ ನಿಟ್ಟಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಜರುಗಿಸಬೇಕಿದೆ.


ಅಗತ್ಯ ಬೇಕಾಗಿರುವ ಸಾಧನ-ಉಪಕರಣಗಳು
ತಜ್ಞ ವೈದ್ಯರ ಸೇವೆ, ಹೆರಿಗೆ ಸೌಲಭ್ಯ, ತುರ್ತು ಚಿಕಿತ್ಸೆ ಹಾಗೂ ಶಸ್ತ್ರ ಚಿಕಿತ್ಸೆ ಸೌಲಭ್ಯವಿದ್ದು, ಡಯಾಲಿಸಿಸ್ ಘಟಕವು ಕಾರ್ಯನಿರ್ವಹಿಸುತ್ತದೆ. ಆದರೆ, ಪ್ರಸ್ತುತವಾಗಿ ಪ್ರಯೋಗಶಾಲಾ ವಿಭಾಗ ಮತ್ತು ತಜ್ಞರು, ಶವ ಶೈತ್ಯಾಗಾರ, ಲಾಂಡ್ರಿ ವಿಭಾಗ, 75ಕೆವಿಎ ಜನರೇಟರ್ ರಕ್ತ ಸಂಗ್ರಹ ಘಟಕ ಹಾಗೂ ಉಪಕರಣಗಳ ಆವಶ್ಯಕತೆ ಇದೆ.


ಅ.30ರಂದು ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಜರಗಿದ ಆ್ಯಂಬುಲೆನ್ಸ್ ಹಸ್ತಾಂತರ ಕಾರ್ಯಕ್ರಮದಲ್ಲಿ ಹುದ್ದೆಗಳ ಭರ್ತಿಯ ಕುರಿತು ಸಚಿವರಿಗೆ ಮನವಿ ಮಾಡಲಾಗಿದೆ. ಪ್ರಸ್ತುತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಸೇವೆ ಲಭ್ಯವಾಗುತ್ತಿದ್ದು, ಶೀಘ್ರದಲ್ಲಿ ಸಿಬ್ಬಂದಿ ಭರ್ತಿಯ ಜೊತೆಗೆ ಇತರ ಸೌಲಭ್ಯಗಳನ್ನೂ ಒದಗಿಸುವ ಕುರಿತು ಕ್ರಮಕೈಗೊಳ್ಳಲಾಗುವುದು. ಈ ಮೂಲಕ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯಂತೆ ಇಲ್ಲಿನ ಆಸ್ಪತ್ರೆಯು ಕಾರ್ಯನಿರ್ವಹಿಸಲಿದೆ.

-ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಶಾಸಕರು

share
ಅಬ್ದುಲ್ ರಹಿಮಾನ್ ತಲಪಾಡಿ
ಅಬ್ದುಲ್ ರಹಿಮಾನ್ ತಲಪಾಡಿ
Next Story
X