Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2,600 ಕೋ. ರೂ. ಇಪಿಎಫ್ ಹಗರಣ:...

2,600 ಕೋ. ರೂ. ಇಪಿಎಫ್ ಹಗರಣ: ಆದಿತ್ಯನಾಥ್ ಸರಕಾರದ ಪಾತ್ರವಿರುವ ದಾಖಲೆ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ5 Nov 2019 3:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
2,600 ಕೋ. ರೂ. ಇಪಿಎಫ್ ಹಗರಣ: ಆದಿತ್ಯನಾಥ್ ಸರಕಾರದ ಪಾತ್ರವಿರುವ ದಾಖಲೆ ಬಹಿರಂಗ

ಲಕ್ನೊ, ನ.5: ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿರುವ 2,600 ಕೋಟಿ ರೂ. ಮೊತ್ತದ ಇಪಿಎಫ್(ಉದ್ಯೋಗಿಗಳ ಭವಿಷ್ಯನಿಧಿ) ಹಗರಣದ ಕುಣಿಕೆ ಈಗ ಅಧಿಕಾರದಲ್ಲಿರುವ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರದ ಕುತ್ತಿಗೆಗೆ ಬಿಗಿಯುವ ಸೂಚನೆ ಕಂಡುಬರುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರಪ್ರದೇಶ ವಿದ್ಯುತ್ ನಿಗಮದ ಉದ್ಯೋಗಿಗಳ ವೇತನದಿಂದ ಕಡಿತ ಮಾಡುವ ಕೋಟ್ಯಂತರ ರೂಪಾಯಿ ಮೊತ್ತದ ನಿಧಿಯನ್ನು ವಿವಾದಾತ್ಮಕ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್(ಡಿಎಚ್‌ಎಫ್‌ಎಲ್) ಸಂಸ್ಥೆಯಲ್ಲಿ ಹೂಡಿಕೆ ಮಾಡುವ ನಿರ್ಧಾರವನ್ನು ಆದಿತ್ಯನಾಥ್ ನೇತೃತ್ವದ ಸರಕಾರವೇ ಕೈಗೊಂಡಿದೆ ಎಂದು ಹೊಸದಾಗಿ ಬಿಡುಗಡೆಗೊಳಿಸಿರುವ ದಾಖಲೆಪತ್ರ ಬಹಿರಂಗಗೊಳಿಸಿದೆ.

ಉತ್ತರಪ್ರದೇಶ ವಿದ್ಯುತ್ ನಿಗಮದ ಉದ್ಯೋಗಿಗಳ ಇಪಿಎಫ್ ನಿಧಿಯನ್ನು ಡಿಎಚ್‌ಎಫ್‌ಎಲ್‌ನಲ್ಲಿ ಹೂಡಿಕೆ ಮಾಡುವ ನಿರ್ಧಾರವನ್ನು ಅಖಿಲೇಶ್ ಯಾದವ್ ನೇತೃತ್ವದ ಈ ಹಿಂದಿನ ಸರಕಾರ ಕೈಗೊಂಡಿದೆ ಎಂದು ಉತ್ತರಪ್ರದೇಶದ ವಿದ್ಯುತ್ ಸಚಿವ ಶ್ರೀಕಾಂತ್ ಶರ್ಮ ಆರೋಪಿಸಿದ್ದರು.

ಆದರೆ ಆದಿತ್ಯನಾಥ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 5 ದಿನಗಳ ಬಳಿಕ, ಅಂದರೆ 2017ರ ಮಾರ್ಚ್ 24ರಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿರುವ ಉತ್ತರಪ್ರದೇಶ ವಿದ್ಯುತ್ ಕ್ಷೇತ್ರ ನೌಕರರ ಟ್ರಸ್ಟ್, ಅಂದು ನಡೆದ ಸಭೆಯ ಕಾರ್ಯಕಲಾಪದ ವರದಿಯ ಪ್ರತಿಯನ್ನು ಅರ್ಜಿಯ ಜೊತೆ ಸಲ್ಲಿಸಿದೆ.

ಇಪಿಎಫ್ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ರಾಜ್ಯ ಸರಕಾರದ ನಿರ್ಧಾರವನ್ನು ವಿದ್ಯುತ್ ನಿಗಮದ ಉದ್ಯೋಗಿಗಳ ಯೂನಿಯನ್ ಮುಖಂಡ ಶೈಲೇಂದ್ರ ದುಬೆ ಸ್ವಾಗತಿಸಿದ್ದಾರೆ. ಆದರೆ ಡಿಎಚ್‌ಎಫ್‌ಎಲ್ ವಿಷಯಕ್ಕೆ ಸಂಬಂಧಿಸಿದ ಫೈಲುಗಳ ಸುರಕ್ಷತೆಯನ್ನು ಖಾತರಿಗೊಳಿಸಲು ಮುಖ್ಯಮಂತ್ರಿ ವಿದ್ಯುತ್ ಸಚಿವಾಲಯದ ಉನ್ನತ ಅಧಿಕಾರಿಗಳನ್ನು ವರ್ಗಾಯಿಸಬೇಕು ಎಂದವರು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರದ ಅಧೀನದಲ್ಲಿರುವ ಯುಪಿ ವಿದ್ಯುತ್ ನಿಗಮ(ಯುಪಿಪಿಸಿಲ್)ನ ಉದ್ಯೋಗಿಗಳ ಭವಿಷ್ಯ ನಿಧಿಯ ಸುಮಾರು 2,600 ಕೋಟಿ ರೂ. ಮೊತ್ತವನ್ನು ಡಿಎಚ್‌ಎಫ್‌ಎಲ್‌ನಲ್ಲಿ ಹೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಲಕ್ನೊ ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ಕುಖ್ಯಾತ ಕ್ರಿಮಿನಲ್ ದಾವೂದ್ ಇಬ್ರಾಹಿಂನ ಬಂಟ ಇಕ್ಬಾಲ್ ಮಿರ್ಚಿಯ ಜೊತೆಗೆ ಡಿಎಚ್‌ಎಫ್‌ಎಲ್‌ನ ನಿರ್ದೇಶಕರು ನಂಟು ಹೊಂದಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ನಿರ್ದೇಶಕರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಿಚಾರಣೆ ನಡೆಸಿತ್ತು.

ಈ ಮಧ್ಯೆ, ಯುಪಿ ವಿದ್ಯುತ್ ನಿಗಮದ ಆಡಳಿತ ನಿರ್ದೇಶಕಿ ಅಪರ್ಣಾರನ್ನು ವಜಾಗೊಳಿಸಿರುವ ಉತ್ತರಪ್ರದೇಶ ಸರಕಾರ, ಹಿರಿಯ ಐಎಎಸ್ ಅಧಿಕಾರಿ ಎಂ ದೇವರಾಜ್‌ರನ್ನು ನೇಮಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X