Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆರ್‌ಸಿಇಪಿಗೆ ಸೇರದಿರಲು ಭಾರತದ...

ಆರ್‌ಸಿಇಪಿಗೆ ಸೇರದಿರಲು ಭಾರತದ ಕಳವಳಗಳನ್ನು ನಿವಾರಿಸಲಾಗುವುದು: ಚೀನಾ

ವಾರ್ತಾಭಾರತಿವಾರ್ತಾಭಾರತಿ5 Nov 2019 10:46 PM IST
share
ಆರ್‌ಸಿಇಪಿಗೆ ಸೇರದಿರಲು ಭಾರತದ ಕಳವಳಗಳನ್ನು ನಿವಾರಿಸಲಾಗುವುದು: ಚೀನಾ

ಬೀಜಿಂಗ್(ಚೀನಾ),ನ.5: ಬೀಜಿಂಗ್ ಸರಕಾರದ ಬೆಂಬಲಿತ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದಕ್ಕೆ ಸಹಿ ಹಾಕದಿರಲು ಭಾರತವು ಪ್ರಸ್ತಾಪಿಸಿರುವ ಕಳವಳಗಳನ್ನು ಬಗೆಹರಿಸಲು ‘ ಪರಸ್ಪರ ತಿಳುವಳಿಕೆ ಮತ್ತು ಅವಕಾಶ ’ನೀತಿಯನ್ನು ತಾನು ಅನುಸರಿಸುವುದಾಗಿ ಚೀನಾ ಮಂಗಳವಾರ ಹೇಳಿದೆ.

ಭಾರತವು ಶೀಘ್ರವೇ ಒಪ್ಪಂದಕ್ಕೆ ಸೇರ್ಪಡೆಗೊಳ್ಳುವುದನ್ನು ತಾನು ಸ್ವಾಗತಿಸುವುದಾಗಿಯೂ ಚೀನಾ ತಿಳಿಸಿದೆ.

ಸೋಮವಾರ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ 16 ರಾಷ್ಟ್ರಗಳ ಆರ್‌ಸಿಇಪಿ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು,ಒಪ್ಪಂದದ ಈಗಿನ ರೂಪವು ಅದರ ಮೂಲ ಉದ್ದೇಶವನ್ನು ಮತ್ತು ಒಪ್ಪಿತ ಮಾರ್ಗಸೂಚಿ ತತ್ತ್ವಗಳನ್ನು ಪೂರ್ಣವಾಗಿ ಪ್ರತಿಬಿಂಬಿಸುತ್ತಿಲ್ಲ ಎಂದು ಹೇಳುವ ಮೂಲಕ ಒಪ್ಪಂದದಲ್ಲಿ ಭಾಗಿಯಾಗದಿರುವ ಭಾರತದ ನಿರ್ಧಾರವನ್ನು ಪ್ರಕಟಿಸಿದ್ದರು.

ಅಗ್ಗದ ಚೀನಿ ಸರಕುಗಳು ತನ್ನ ದೇಶಿಯ ಉದ್ಯಮಗಳಿಗೆ ಮಾರಕವಾಗಲಿದೆ ಎಂಬ ಕಳವಳದಿಂದಾಗಿ ಭಾರತವು ಆರ್‌ಸಿಇಪಿಗೆ ಸೇರದಿರುವ ಕುರಿತು ಮಂಗಳವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್ ಶುಆಂಗ್ ಅವರು,ಭಾರತವು ಒಪ್ಪಂದಕ್ಕೆ ಸೇರುವುದನ್ನು ಚೀನಾ ಸ್ವಾಗತಿಸುತ್ತದೆ. ಆರ್‌ಸಿಇಪಿಯು ಮುಕ್ತವಾಗಿದೆ. ಭಾರತವು ಎತ್ತಿರುವ ಬಾಕಿಯುಳಿದಿರುವ ಸಮಸ್ಯೆಗಳನ್ನು ಬಗೆಹರಿಸಲು ಪರಸ್ಪರ ತಿಳುವಳಿಕೆ ಮತ್ತು ಅವಕಾಶ ನೀತಿಯನ್ನು ನಾವು ಅನುಸರಿಸಲಿದ್ದೇವೆ. ಆರ್‌ಸಿಇಪಿ ಪ್ರಾದೇಶಿಕ ವ್ಯಾಪಾರ ಒಪ್ಪಂದವಾಗಿದೆ ಮತ್ತು ಪರಸ್ಪರ ಲಾಭದಾಯಕವಾಗಿದೆ ಎಂದು ಹೇಳಿದರು.

 ಒಪ್ಪಂದಕ್ಕೆ ಅಂಕಿತ ಬಿದ್ದು ಅನುಷ್ಠಾನಗೊಂಡಿದ್ದರೆ ಭಾರತೀಯ ಸರಕುಗಳು ಚೀನಾ ಮತ್ತು ಇತರ ಸದಸ್ಯ ರಾಷ್ಟ್ರಗಳ ಮಾರುಕಟ್ಟೆಗಳನ್ನು ಪ್ರವೇಶಿಸಲು ಪೂರಕವಾಗುತ್ತಿತ್ತು. ಅದೇ ರೀತ ಚೀನಿ ಸರಕುಗಳು ಭಾರತ ಮತ್ತು ಇತರ ಸದಸ್ಯ ರಾಷ್ಟ್ರಗಳ ಮಾರುಕಟ್ಟೆಗಳನ್ನು ಪ್ರವೇಶಿಸಲು ನೆರವಾಗುತ್ತಿತ್ತು ಎಂದ ಅವರು,ಇದು ಸದಸ್ಯ ರಾಷ್ಟ್ರಗಳಿಗೆ ಪರಸ್ಪರ ಪೂರಕ ಒಪ್ಪಂದವಾಗಿದೆ. ಚೀನಾ ಮತ್ತು ಭಾರತ ಎರಡೂ ಪ್ರಮುಖ ಉದಯೋನ್ಮ್ಮುಖ ಆರ್ಥಿಕತೆಗಳಾಗಿವೆ.

2.7 ಶತಕೋಟಿ ಜನಸಂಖ್ಯೆಯ ಬೃಹತ್ ಮಾರುಕಟೆಯನ್ನು ನಾವು ಹೊಂದಿದ್ದು,ಇದು ಭಾರೀ ಸಾಮರ್ಥ್ಯವನ್ನು ಹೊಂದಿದೆ ಎಂದರು. ಮಂಗಳವಾರ ಶಾಂಘೈನಲ್ಲಿ ಚೀನಾ ಇಂಟರ್‌ನ್ಯಾಷನಲ್ ಇಂಪೋರ್ಟ್ ಎಕ್ಸ್‌ಪೋ ಉದ್ಘಾಟಿಸಿ ಮಾತನಾಡಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೂ ಆರ್‌ಸಿಇಪಿಯನ್ನು ಪ್ರಸ್ತಾಪಿಸಿದರಾದರೂ ಒಪ್ಪಂದದಿಂದ ಹೊರಗುಳಿಯುವ ಭಾರತದ ನಿರ್ಧಾರವನ್ನು ಉಲ್ಲೇಖಿಸಲಿಲ್ಲ.

ಆರ್‌ಸಿಇಪಿಯಲ್ಲಿ ಪಾಲ್ಗೊಂಡಿರುವ 15 ರಾಷ್ಟ್ರಗಳು ಆ ಕುರಿತು ಮಾತುಕತೆಗಳನ್ನು ಪೂರ್ಣಗೊಳಿಸಿವೆ ಮತ್ತು ಒಪ್ಪಂದಕ್ಕೆ ಶೀಘ್ರವೇ ಅಂಕಿತ ಬೀಳಲಿದೆ ಹಾಗೂ ಅದು ಅನುಷ್ಠಾನಗೊಳ್ಳಲಿದೆ ಎಂದು ತಾನು ಆಶಿಸಿದ್ದೇನೆ ಎಂದು ಕ್ಸಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X