Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಹೊರ ಬರುವ...

ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಹೊರ ಬರುವ ಪ್ರಕ್ರಿಯೆ ಆರಂಭಿಸಿದ ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ5 Nov 2019 11:21 PM IST
share
ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಹೊರ ಬರುವ ಪ್ರಕ್ರಿಯೆ ಆರಂಭಿಸಿದ ಅಮೆರಿಕ

ವಾಶಿಂಗ್ಟನ್, ನ. 5: ಪ್ಯಾರಿಸ್ ಹವಾಮಾನ ಒಪ್ಪಂದದಿಂದ ತಾನು ಹಿಂದೆ ಸರಿಯುತ್ತಿರುವುದಾಗಿ ಅಮೆರಿಕ ಸೋಮವಾರ ವಿಶ್ವಸಂಸ್ಥೆಗೆ ಔಪಚಾರಿಕವಾಗಿ ತಿಳಿಸಿದೆ. ಈ ಮೂಲಕ ಒಪ್ಪಂದದಿಂದ ಹೊರಗುಳಿದ ಜಗತ್ತಿನ ಅತಿ ದೊಡ್ಡ ಆರ್ಥಿಕ ಶಕ್ತಿ ಅಮೆರಿಕವಾಗಿದೆ.

ಹವಾಮಾನ ಬದಲಾವಣೆಯ ವಾಸ್ತವ ಮತ್ತು ಅದರ ಪರಿಣಾಮಗಳ ಬಗ್ಗೆ ಅಗಾಧ ಪುರಾವೆಗಳಿದ್ದರೂ, ಒಪ್ಪಂದದಿಂದ ಹೊರಹೋಗುವ ಪ್ರಕ್ರಿಯೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಾಲನೆ ನೀಡಿದ್ದಾರೆ.

ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮರ ಮಧ್ಯಸ್ಥಿಕೆಯಲ್ಲಿ 2015ರಲ್ಲಿ ಜಾಗತಿಕ ಪರಿಸರ ಒಪ್ಪಂದಕ್ಕೆ ಜಗತ್ತಿನ ದೇಶಗಳು ಸಹಿ ಹಾಕಿದ್ದವು.

2020 ನವೆಂಬರ್ 4ರಂದು ಅಮೆರಿಕವು ಪ್ಯಾರಿಸ್ ಪರಿಸರ ಒಪ್ಪಂದದಿಂದ ಅಧಿಕೃತವಾಗಿ ಹೊರಬೀಳಲಿದೆ. ಅಂದರೆ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯುವ ಒಂದು ದಿನದ ಬಳಿಕ ಇದು ಸಂಭವಿಸಲಿದೆ. ಆ ಚುನಾವಣೆಯಲ್ಲಿ ಟ್ರಂಪ್ ಮರು ಆಯ್ಕೆಯನ್ನು ಕೋರುತ್ತಿದ್ದಾರೆ.

ಅಮೆರಿಕದ ನಿರ್ಧಾರವನ್ನು ಘೋಷಿಸಿದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ, ಈ ಒಪ್ಪಂದವು ಅಮೆರಿಕದ ಮೇಲೆ ‘ಅನ್ಯಾಯಯುತ ಆರ್ಥಿಕ ಹೊರೆ’ಯನ್ನು ಹೇರಿದೆ ಎಂಬ ಟ್ರಂಪ್‌ರ ಹೇಳಿಕೆಯನ್ನು ಪುನರುಚ್ಚರಿಸಿದರು.

ಅಮೆರಿಕದಿಂದ ಪರಿಸರ ರಾಜಕೀಯ: ಡೆಮಾಕ್ರಟ್ ಸಂಸದ

ಅಮೆರಿಕದ ಟ್ರಂಪ್ ಆಡಳಿತವು ಮತ್ತೊಮ್ಮೆ ತನ್ನ ಮಿತ್ರ ದೇಶಗಳೊಂದಿಗೆ ಅಗೌರವಯುತವಾಗಿ ನಡೆದುಕೊಳ್ಳುತ್ತಿದೆ, ವಾಸ್ತವಗಳಿಗೆ ಕುರುಡಾಗಿದೆ ಹಾಗೂ ಜಗತ್ತಿನ ಅತಿ ದೊಡ್ಡ ಪರಿಸರ ಸವಾಲನ್ನು ಇನ್ನಷ್ಟು ರಾಜಕೀಕರಣಗೊಳಿಸುತ್ತಿದೆ ಎಂದು ಅಮೆರಿಕದ ಸೆನೆಟ್ ವಿದೇಶ ಸಂಬಂಧಗಳ ಸಮಿತಿಯಲ್ಲಿರುವ ಉನ್ನತ ಡೆಮಾಕ್ರಟ್ ಸಂಸದ ರಾಬರ್ಟ್ ಮೆನೆಂಡೀಝ್ ಹೇಳಿದ್ದಾರೆ.

ಸ್ವಾರ್ಥಕ್ಕಾಗಿ ಭೂ ಗ್ರಹವನ್ನು ಬಲಿಕೊಡುವವರು: ಮಾಜಿ ಉಪಾಧ್ಯಕ್ಷ ಅಲ್ ಗೋರ್

2015ರ ಪರಿಸರ ಒಪ್ಪಂದದಿಂದ ಅಮೆರಿಕವನ್ನು ಹಿಂದಕ್ಕೆ ಎಳೆಯುವ ಟ್ರಂಪ್ ಸರಕಾರದ ನಿರ್ಧಾರಕ್ಕೆ ಅಮೆರಿಕದ ಮಾಜಿ ಉಪಾಧ್ಯಕ್ಷ ಹಾಗೂ ಪರಿಸರ ಹೋರಾಟಗಾರ ಅಲ್ ಗೋರ್ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ, ಹೊಸ ಅಧ್ಯಕ್ಷರು ಅಮೆರಿಕವನ್ನು 30 ದಿನಗಳಲ್ಲಿ ಒಪ್ಪಂದಕ್ಕೆ ಮರುಸೇರಿಸಬಹುದು ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

‘‘ಪರಿಸರ ಬಿಕ್ಕಟ್ಟನ್ನು ಪರಿಹರಿಸುವ ನಮ್ಮ ವೇಗವನ್ನು ಯಾವುದೇ ವ್ಯಕ್ತಿ ಅಥವಾ ಪಕ್ಷ ತಡೆಯಲು ಸಾಧ್ಯವಿಲ್ಲ. ಆದರೆ ಹೀಗೆ ಮಾಡಲು ಪ್ರಯತ್ನಿಸುವವರು ತಮ್ಮ ಸ್ವಾರ್ಥಕ್ಕಾಗಿ ಭೂ ಗ್ರಹವನ್ನು ಬಲಿಕೊಡಲು ನಡೆಸಿದ ಪ್ರಯತ್ನಗಳಿಗಾಗಿ ನೆನಪಿನಲ್ಲಿ ಉಳಿಯುವರು’’ ಎಂದು ಗೋರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X