Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ, ಸಂಸ್ಕೃತಿ ಸಚಿವರಾಗಲು...

ಕನ್ನಡ, ಸಂಸ್ಕೃತಿ ಸಚಿವರಾಗಲು ಸಿ.ಟಿ.ರವಿಗೆ ಅರ್ಹತೆ ಇಲ್ಲ: ಎಚ್.ಎಚ್.ದೇವರಾಜ್ ಟೀಕೆ

ಕನ್ನಡ ಧ್ವಜಾರೋಹಣ ಮಾಡದ ಸಚಿವ ರವಿ ವಿರುದ್ಧ ವಿವಿಧ ಪಕ್ಷ, ಸಂಘಟನೆಗಳಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ6 Nov 2019 5:42 PM IST
share
ಕನ್ನಡ, ಸಂಸ್ಕೃತಿ ಸಚಿವರಾಗಲು ಸಿ.ಟಿ.ರವಿಗೆ ಅರ್ಹತೆ ಇಲ್ಲ: ಎಚ್.ಎಚ್.ದೇವರಾಜ್ ಟೀಕೆ

ಚಿಕ್ಕಮಗಳೂರು, ನ.6: ಕನ್ನಡ ರಾಜ್ಯೋತ್ಸವ ದಿನಾಚರಣೆಯಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಕನ್ನಡ ಧ್ವಜಾರೋಹಣ ಮಾಡದೇ ಕನ್ನಡ ಸಂಸ್ಕೃತಿಯವರಲ್ಲ ಎಂಬುದನ್ನು ಸಾಬಿತು ಮಾಡಿದ್ದಾರೆ. ಕನ್ನಡ ಧ್ವಜಕ್ಕೆ ಮಾನ್ಯತೆ ಇಲ್ಲ ಎನ್ನುವ ಸಿ.ಟಿ.ರವಿ ಚುನಾವಣೆಗೋಸ್ಕರ ಕೇಸರಿ ಬಾವುಟ ಹಿಡಿಯುತ್ತಾರೆ, ಕೇಸರಿ ಬಾವುಟಕ್ಕೆ ಮಾನ್ಯತೆ ನೀಡಿದವರು ಯಾರು? ಎಂಬುದನ್ನು ಸ್ಪಷ್ಟಪಡಿಸಬೇಕು. ಕನ್ನಡಿಗರ ಹಬ್ಬದಂದು ನಾಡಧ್ವಜ ಹಾರಿಸದೇ ಕನ್ನಡಿಗರಿಗೆ ದ್ರೋಹ ಬಗೆದ ಸಿ.ಟಿ.ರವಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾಗಿರಲು ಯಾವುದೇ ಅರ್ಹತೆ ಇಲ್ಲ, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್ ಆಗ್ರಹಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ದಿನಾಚರಣೆ ಸಂದರ್ಭಲ್ಲಿ ಸಚಿವ ಸಿ.ಟಿ.ರವಿ ನಾಡಧ್ವಜಾರೋಹಣ ಮಾಡದೇ ಉದ್ಧಟತನ ಮೆರದಿದ್ದಾರೆಂದು ಆರೋಪಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ರಾಜಕೀಯ ಪಕ್ಷಗಳು, ದಲಿತ, ರೈತ, ಪ್ರಗತಿಪರ ಸಂಘಟನೆಗಳು ಬುಧವಾರ ನಗರದ ಆಝಾದ್ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಆರಂಭದಿಂದಲೂ ಏಕ ಭಾಷೆ, ಏಕ ಸಂಸ್ಕೃತಿ ನಿಲುವಿನ ಪರ ಹೇಳಿಕೆ ನೀಡುತ್ತಾ ದೇಶದ ವೈವಿಧ್ಯತೆಯನ್ನು ಕಡೆಗಣಿಸುತ್ತಿದ್ದಾರೆ. ಕನ್ನಡಿಗರಿಗೆ ಸ್ವಾಭಿಮಾನದ ಸಂಕೇತವಾಗಿರುವ ನಾಡಧ್ವಜಕ್ಕೆ ಮಾನ್ಯತೆ ಇಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಸಿ.ಟಿ.ರವಿಗೆ ಕನ್ನಡ ನಾಡಿನ ಇತಿಹಾಸದ ಬಗ್ಗೆ ಅರಿವಿದ್ದಂತಿಲ್ಲ. ಕನ್ನಡ ವಿಷಯ ಬಂದಾಗಲೆಲ್ಲ ಅವರು ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಿದ್ದು, ನಗರದಲ್ಲಿ ರಾಜ್ಯೋತ್ಸವ ದಿನಾಚರಣೆಯಂದು ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಅವರು, ನಾಡಧ್ವಜಾರೋಹಣ ಮಾಡದೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನೇ ಅವಮಾನಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ ಮುಖಂಡ ರೇಣುಕಾರಾಧ್ಯ ಮಾತನಾಡಿ, ಸಿ.ಟಿ.ರವಿ ಆರೆಸ್ಸೆಸ್ ಹಿನ್ನೆಲೆ ಇರುವ ರಾಜಕಾರಣಿ. ಆರೆಸ್ಸೆಸ್‌ಗೆ ಕನ್ನಡ ನಾಡಿನ ಗಂಧ ಗಾಳಿ ಗೊತ್ತಿಲ್ಲ. ಗೌರವವೂ ಇಲ್ಲ. ಆರೆಸ್ಸೆಸ್ ಈ ನೆಲದ ಸಂಘಟನೆಯಲ್ಲ, ಗಣರಾಜ್ಯ ವ್ಯವಸ್ಥೆಯಲ್ಲೂ ಅವರಿಗೆ ನಂಬಿಕೆ ಇಲ್ಲ. ಅದರಂತೆ ಸಿ.ಟಿ.ರವಿಗೆ ಕನ್ನಡದ ಬಗ್ಗೆ ಗೌರವ ಇರಲು ಸಾಧ್ಯವಿಲ್ಲ, ಕನ್ನಡ ನಾಡಿನ ನೆಲ ಜಲ, ಸಮಸ್ಯೆಗಳು, ಕನ್ನಡಿಗರ ಬದುಕಿನ ಬಗ್ಗೆ ಅರಿವಿಲ್ಲ ಎಂದ ಅವರು, ಮಂತ್ರಿಗಳಿಗೆ ಅಹಂಕಾರ ಇರುತ್ತದೆ, ಆದರೆ ಸಿ.ಟಿ.ರವಿಗೆ ದುರಹಂಕಾರವಿದೆ. ಇಂತಹ ಸಚಿವನನ್ನು ಜನರು ಮುಂದಿನ ದಿನಗಳಲ್ಲಿ ಮನೆಗೆ ಕಳಿಸಬೇಕಿದೆ ಎಂದರು.

ಬಿಎಸ್ಪಿ ಮುಖಂಡ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಸರಕಾರ ಕನ್ನಡ ಧ್ವಜಕ್ಕೆ ಶೀಘ್ರ ಮಾನ್ಯತೆ ನೀಡಬೇಕು. ರಾಜ್ಯೋತ್ಸವ ಕನ್ನಡಿಗರ ಹಬ್ಬವಾದ್ದರಿಂದ ಈ ಸಂದರ್ಭದಲ್ಲಿ ರಾಷ್ಟ್ರಧ್ವಜದೊಂದಿಗೆ ನಾಡಧ್ವಜವೂ ಹಾರಬೇಕು. ಈ ನಿಟ್ಟಿನಲ್ಲಿ ಸರಕಾರಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದ ಅವರು, ರಾಜ್ಯೋತ್ಸವದ ದಿನಾಚರಣೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಕನ್ನಡಧ್ವಜಾರೋಹಣ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡದಿರಲು ಸರಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿದರು.

ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್, ಕನ್ನಡ ಸಾಹಿತ್ಯ ಪರಿಷತ್ ಮುಖಂಡ ಹಿರೇಮಗಳೂರು ಪುಟ್ಟಸ್ವಾಮಿ, ಸಿಪಿಐ ನಾಯಕಿ ರಾಧಾಸುಂದರೇಶ್, ಜೆಡಿಎಸ್‌ನ ಹಣಸೇಮಕ್ಕಿ ಲಕ್ಷ್ಮಣ್, ಕನ್ನಡಸೇನೆಯ ರಾಜೇಗೌಡ, ರೈತ ಸಂಘದ ಪುಟ್ಟಸ್ವಾಮಿಗೌಡ ಮತ್ತಿತರರು ಮಾತನಾಡಿದರು.

ಧರಣಿಗೂ ಮುನ್ನ ನಗರದ ತಾಲೂಕು ಕಚೇರಿಯಿಂದ ಎಂಜಿ ರಸ್ತೆ ಮಾರ್ಗವಾಗಿ ಆಝಾದ್ ಪಾರ್ಕ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರಾದ ರಘು, ನಿಂಗೇಗೌಡ, ರೈತ ಮುಖಂಡರಾದ ಕೃಷ್ಣೇಗೌಡ, ಗುರುಶಾಂತಪ್ಪ, ಚಂದ್ರೇಗೌಡ, ದಲಿತ ಸಂಘಟನೆಗಳ ಮುಖಂಡರಾದ ರಾಜರತ್ನಂ, ದಂಟರಮಕ್ಕಿ ಶ್ರೀನಿವಾಸ್, ಸಿಪಿಐ ಮುಖಂಡ ಬಿ.ಅಮ್ಝದ್ ಮತ್ತಿತರರು ಧರಣಿಯ ನೇತೃತ್ವ ವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X