Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೆ.10 ರಿಂದ ಪ್ರಥಮ ಪಿಯುಸಿ ಪರೀಕ್ಷೆಗೆ...

ಫೆ.10 ರಿಂದ ಪ್ರಥಮ ಪಿಯುಸಿ ಪರೀಕ್ಷೆಗೆ ವಿರೋಧ: ಪರೀಕ್ಷೆಗಳನ್ನು ಮುಂದೂಡುವಂತೆ ಪೋಷಕರು, ವಿದ್ಯಾರ್ಥಿಗಳ ಮನವಿ

ವಾರ್ತಾಭಾರತಿವಾರ್ತಾಭಾರತಿ6 Nov 2019 10:47 PM IST
share

ಬೆಂಗಳೂರು, ನ.6: ರಾಜ್ಯದಲ್ಲಿ ಎರಡು ಭಾರೀ ಭೀಕರ ನೆರೆಯಿಂದಾಗಿ ಉತ್ತರ ಕರ್ನಾಟಕದ ಭಾಗದಲ್ಲಿನ ಕಾಲೇಜುಗಳಲ್ಲಿ ಬೋಧನಾ ಅವಧಿ ನಷ್ಟವಾಗಿದೆ. ಆದರೂ, ಫೆ.10ರಿಂದ ಪ್ರಥಮ ಪಿಯುಸಿ ಪರೀಕ್ಷೆಗಳು ನಡೆಸಲು ಮುಂದಾಗಿರುವ ಪರೀಕ್ಷಾ ಮಂಡಳಿಯ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ.

ಬಾಗಲಕೋಟೆ, ಬಿಜಾಪುರ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಪ್ರವಾಹದಿಂದಾಗಿ ಮನೆಗಳು ಕೊಚ್ಚಿಕೊಂಡು ಹೋಗಿದ್ದವು. ಮಕ್ಕಳ ಪುಸ್ತಕಗಳೆಲ್ಲವೂ ಅದರಲ್ಲಿಯೇ ಹೋಗಿವೆ. ಇಂತಹ ಸಂದರ್ಭದಲ್ಲಿ ಬೋಧನಾ ಅವಧಿ ಕಡಿಮೆ ಮಾಡಿ ಪರೀಕ್ಷೆಗಳು ನಡೆಸುವುದು ಸೂಕ್ತವಲ್ಲ ಎಂದು ಪೋಷಕರು ಮನವಿ ಮಾಡಿದ್ದಾರೆ.

ಪ್ರವಾಹದಿಂದಾಗಿ ಹಲವು ದಿನಗಳು ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಜನವರಿ ವೇಳೆಗೆ ಪಾಠ ಪ್ರವಚನಗಳು ಕೊನೆಗೊಳ್ಳುವುದು ಕಷ್ಟ. ಹೀಗಾಗಿ ಅವಸರದಲ್ಲಿ ಪರೀಕ್ಷೆ ಮಾಡುವುದು ಏಕೆ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರಶ್ನಿಸುತ್ತಿದ್ದಾರೆ.

ಈಗಾಗಲೇ ವೇಳಾಪಟ್ಟಿ ಪ್ರಕಟವಾಗಿರುವಂತೆ ಫೆ.10ರಿಂದ 20ರವರೆಗೆ ಪ್ರಥಮ ಪಿಯು ಪರೀಕ್ಷೆಗಳು ನಡೆಯಲಿವೆ. ವಿಜ್ಞಾನ ವಿದ್ಯಾರ್ಥಿಗಳಿಗೆ ಜನವರಿ ಮೊದಲ ವಾರದಿಂದಲೇ ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತವೆ. ಅಂದರೆ ಡಿಸೆಂಬರ್ ವೇಳೆಗೇ ಬಹುತೇಕ ಪಠ್ಯವನ್ನು ಬೋಧಿಸಿ ಮುಗಿಸಬೇಕಾಗುತ್ತದೆ. ಈ ಬಾರಿ ಅದು ಬಹಳ ಕಷ್ಟ ಎಂದು ಕಾಲೇಜು ಪಾಂಶುಪಾಲರೊಬ್ಬರು ಹೇಳಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ ಕೊನೆಗೊಂಡ ನಂತರವೂ ಪ್ರಥಮ ಪಿಯು ಪರೀಕ್ಷೆ ನಡೆಸಬಹುದಲ್ಲ ಎಂದು ಕೇಳುವ ಪೋಷಕರು, ಮಾರ್ಚ್ ಕೊನೆಯ ವಾರದಲ್ಲಿ ಪ್ರಥಮ ಪಿಯು ಪರೀಕ್ಷೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದು, ಎಸೆಸೆಲ್ಸಿ ಪರೀಕ್ಷೆ ಇದೇ ಸಮಯದಲ್ಲಿ ನಡೆದರೂ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳುತ್ತಾರೆ.

ಉತ್ತರ ಕರ್ನಾಟಕದ ಭಾಗಗಳಲ್ಲಿ ರವಿವಾರವೂ ತರಗತಿಗಳನ್ನು ನಡೆಸುತ್ತಿರುವುದರಿಂದ ಬೋಧನಾ ಅವಧಿಯನ್ನು ತಲುಪುವ ನಿರೀಕ್ಷೆಯಿದ್ದು, ಪಠ್ಯಗಳನ್ನು ಪೂರ್ಣಗೊಳಿಸಲಾಗುವುದು. ಪರೀಕ್ಷೆಗಳನ್ನು ಮುಂದೂಡುವಂತೆ ಇದುವರೆಗೂ ಪೋಷಕರು ಹಾಗೂ ವಿದ್ಯಾರ್ಥಿಗಳಿಂದ ಯಾವುದೇ ಬೇಡಿಕೆ ಬಂದಿಲ್ಲ.
-ರಾಜಶೇಖರ ಪಟ್ಟಣಶೆಟ್ಟಿ, ಬೆಳಗಾವಿ ಜಿಲ್ಲೆಯ ಪ್ರಭಾರ ಡಿಡಿಪಿಯು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X