Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದಿನ ದಿನಗಳಲ್ಲಿ ಆರ್ಥಿಕ ಸುಧಾರಣೆಗೆ...

ಮುಂದಿನ ದಿನಗಳಲ್ಲಿ ಆರ್ಥಿಕ ಸುಧಾರಣೆಗೆ ಇನ್ನಷ್ಟು ಕ್ರಮ: ನಿರ್ಮಲಾ ಸುಳಿವು

ವಾರ್ತಾಭಾರತಿವಾರ್ತಾಭಾರತಿ6 Nov 2019 11:03 PM IST
share
ಮುಂದಿನ ದಿನಗಳಲ್ಲಿ ಆರ್ಥಿಕ ಸುಧಾರಣೆಗೆ ಇನ್ನಷ್ಟು ಕ್ರಮ: ನಿರ್ಮಲಾ ಸುಳಿವು

 ಹೊಸದಿಲ್ಲಿ,ನ.6: ಮುಂಬರುವ ದಿನಗಳಲ್ಲಿ ಇನ್ನಷ್ಟು ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯ ಬಗ್ಗೆ ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಸುಳಿವು ನೀಡಿದ್ದಾರೆ.

ಹಿಂದಿನ ಅವಧಿಯಲ್ಲಿ ರಾಜ್ಯಸಭೆಯಲ್ಲಿ ಆಡಳಿತಾರೂಢ ಎನ್‌ಡಿಎ ಒಕ್ಕೂಟಕ್ಕೆ ಸಂಖ್ಯಾಬಲದ ಕೊರತೆಯಿದ್ದುದರಿಂದ ಹಲವಾರು ವಿಧೇಯಕಗಳನ್ನು ಜಾರಿಗೆ ತರಲು ಸಾಧ್ಯವಾಗದೆ ಇದ್ದುದನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಅವರು ಬಿಜೆಪಿ ನೇತೃತ್ವದ ಸರಕಾರವು ಕಳೆದ ಸಲ ಅವಕಾಶವನ್ನು ಕಳೆದುಕೊಂಡಿರಬಹುದು, ಆರೆ ಖಂಡಿತವಾಗಿಯೂ ಈ ಸಲ ಹಾಗಾಗಲಾರದು ಎಂದು ಅವರು ಹೇಳಿದ್ದಾರೆ.

 ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯು ಆಯೋಜಿಸಿದ್ದ ‘ಎಕ್ಸ್‌ಪ್ರೆಸ್ ಅಡ್ಡಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರ್ಥಿಕ ಸುಧಾರಣೆಗಳು ತ್ವರಿತವಾಗಿ ನಡೆಯವಂತೆ ಮಾಡುವ ನಿಟ್ಟಿನಲ್ಲಿ ನಮಗಿರುವ ಬದ್ಧತೆಯನ್ನು ನಾವು ಈಗ ತೋರಿಸುವುದು ಖಚಿತ. ಮೋದಿ 2.0 ಸರಕಾರಕ್ಕೆ ನೀಡಿರುವ ಜನಾದೇಶವು ಇದಕ್ಕೆ ನೆರವಾಗಲಿದೆಯೆಂದು ಅವರು ಹೇಳಿದರು.

   ಆರ್ಥಿಕ ಹಿಂಜರಿತದಿಂದಾಗಿ ಬಿಜೆಪಿಯು ಇತ್ತೀಚೆಗೆ ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ರಾಷ್ಟ್ರವಾದಿ ಭಾವನೆಗಳನ್ನು ಬಂಡವಾಳವಾಗಿ ಮಾಡಿಕೊಳ್ಳುವಲ್ಲಿ ವಿಫಲವಾಯಿತೆಂಬ ಅನಿಸಿಕೆಗಳನ್ನು ಅವರು ಅಲ್ಲಗಳೆದಿದ್ದಾರೆ. ‘‘ ಕೇಂದ್ರ ಅಥವಾ ರಾಜ್ಯ ಸರಕಾರಗಳಾಗಿರಲಿ, ಯಾವುದೇ ಸರಕಾರಕ್ಕೂ, ‘‘ ರಾಷ್ಟ್ರವಾದದ ಕುರಿತಾಗಿ ನಿಮ್ಮ ಮತವನ್ನು ನೀಡಿ ಮತ್ತು ನಾನು ಅರ್ಥಿಕ ವಿಚಾರಗಳ ಬಗ್ಗೆ ಮಾತನಾಡಲು ಬಯಸುವುದಿಲ್ಲ’’ ಎಂದು ಹೇಳಿಕೊಂಡು ಮತ ಯಾಚಿಸಲು ಸಾಧ್ಯವಿಲ್ಲ ಎಂದರು.

 ಪ್ರತಿಯೊಂದು ಚುನಾವಣೆಯಲ್ಲಿಯೂ ಆರ್ಥಿಕತೆಯು ಪ್ರಮುಖ ಚುನಾವಣಾ ವಿಷಯವಾಗಿರುತ್ತದೆ.ಮತದಾರನು ದೇಶದ ಆರ್ಥಿಕತೆಯ ನಿರ್ಮಾಣದ ಬಗ್ಗೆ ವಾಸ್ತವಿಕವಾದ ಪ್ರಯತ್ನಗಳು ನಡೆಯುತ್ತಿರುವುದನ್ನು ಕಾಣುತ್ತಿದ್ದಾನೆ ಎಂದರು.

 ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕೆಲವೊಂದು ಸುಧಾರಣೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೇಂದರ ಸರಕಾ ಶ್ರಮಿಸುತ್ತಿದಗೆಯೆಂದರು.

 ಬ್ಯಾಂಕ್ ಬಡ್ಡಿದರದಲ್ಲಿ ಇಳಿಕೆಗಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಆಧಾರವಾಗುವ ನಿಟ್ಟಿನಲ್ಲಿಯೂ ಕೇಂದ್ರ ಸರಕಾರ ಶ್ರಮಿಸುತ್ತಿದೆ ಎಂದರು.

ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಮರುಚೈತನ್ಯ

ರಾಷ್ಟ್ರೀಯ ಶೇರು ವಿನಿಮಯ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನಡೆದ ಇನ್ನೊಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನಿರ್ಮಲಾ ಅವರು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ನೆಲೆಸಿರುವ ಮಂದಗತಿಯನ್ನು ನಿವಾರಿಸಬೇಕಾಗಿದೆ ಎಂದು ಅಭಿಪ್ರಾಯಿಸಿದ್ದಾರೆ ಹಾಗೂ ರಿಯಲ್‌ ಎಸ್ಟೇಟ್ ವಲಯಕ್ಕೆ ಚೈತನ್ಯ ತುಂಬಲು ಕೇಂದ್ರ ಸರಕಾರವು ತುಂಬಾ ಆಸಕ್ತವಾಗಿದೆ ಎಂದವರು ಹೇಳಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಜೊತೆ ಕೈಜೋಡಿಸಿ ಅದು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಬಾಧಿತರಾದ ವ್ಯಕ್ತಿಗಳನ್ನು ನೆರವಾಗುವುದಕ್ಕೆ ಇರುವ ಅಡಚಣೆಗಳನ್ನು ತೊಡೆದುಹಾಕಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X