Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರದಲ್ಲೂ ರೆಸಾರ್ಟ್ ರಾಜಕೀಯ:...

ಮಹಾರಾಷ್ಟ್ರದಲ್ಲೂ ರೆಸಾರ್ಟ್ ರಾಜಕೀಯ: ಶಾಸಕರನ್ನು ಹೊಟೇಲ್‌ಗೆ ವರ್ಗಾಯಿಸಿದ ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ7 Nov 2019 8:00 PM IST
share
ಮಹಾರಾಷ್ಟ್ರದಲ್ಲೂ ರೆಸಾರ್ಟ್ ರಾಜಕೀಯ: ಶಾಸಕರನ್ನು ಹೊಟೇಲ್‌ಗೆ ವರ್ಗಾಯಿಸಿದ ಶಿವಸೇನೆ

 ಮುಂಬೈ, ನ. 7: ಮಹಾರಾಷ್ಟ್ರದಲ್ಲಿ ಸರಕಾರ ರಚಿಸಲು ಅಂತಿಮ ಗಡು ಸಮೀಪಿಸುತ್ತಿದೆ. ಈ ನಡುವೆ ಗುರುವಾರ ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ಹಾಗೂ ತನ್ನ ಶಾಸಕರನ್ನು ಮಂಬೈ ಪಂಚತಾರಾ ಹೊಟೇಲ್‌ಗೆ ವರ್ಗಾಯಿಸಿದ ಶಿವಸೇನೆ ಸರಕಾರ ರಚನೆ ವಿಳಂಬ ಕುರಿತಂತೆ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ.

ತನಗೆ 182 ಶಾಸಕರ ಬೆಂಬಲ ಇದೆ ಎಂಬ ಬಿಜೆಪಿ ಪ್ರತಿಪಾದನೆ ಕುರಿತ ವರದಿಯಿಂದ ತತ್ತರಿಸಿರುವ ಶಿವಸೇನೆ ಇಂದು ಶಾಸಕರನ್ನು ಪ್ರತ್ಯೇಕವಾಗಿರಿಸಲು ತುರ್ತು ಕ್ರಮಗಳನ್ನು ತೆಗೆದುಕೊಂಡಿದೆ. ಶಾಸಕರಿಗೆ ನಗದು ಬ್ಯಾಗ್‌ಗಳ ಆಮಿಷ ಒಡ್ಡಲಾಗಿದೆ ಎಂದು ಸಾಮ್ನಾದ ಸಂಪಾದಕೀಯದಲ್ಲಿ ಶಿವಸೇನೆ ಆರೋಪಿಸಿದೆ.

ತನ್ನ ನಿವಾಸ ‘ಮಾತೋಶ್ರೀ’ಯಲ್ಲಿ ಸಭೆ ನಡೆಸಿದ ಬಳಿಕ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶಿವಸೇನೆಯ ಶಾಸಕರು ಹಾಗೂ ಬೆಂಬಲ ನೀಡುತ್ತಿರುವ ಕೆಲವು ಸ್ವತಂತ್ರ ಶಾಸಕರನ್ನು ಬಾಂದ್ರಾದಲ್ಲಿರುವ ಹೊಟೇಲ್ ರಂಗಶಾರದಕ್ಕೆ ಕರೆದೊಯ್ದಿದ್ದಾರೆ.

‘ಮಾತೋಶ್ರೀ’ಯಿಂದ 2 ಕಿ.ಮೀ. ದೂರದಲ್ಲಿರುವ ಹಾಗೂ ಶಿವಸೇನೆಯ ಕೇಂದ್ರ ಕಚೇರಿಗೆ ತುಂಬಾ ಹತ್ತಿರದಲ್ಲಿರುವ ಹೊಟೇಲ್‌ನಲ್ಲಿ ಶಾಸಕರನ್ನು ಎರಡು ದಿನಗಳ ಕಾಲ ಇರಿಸಲು ನಿರ್ಧರಿಸಲಾಗಿದೆ.

ಶಿವಸೇನೆ ತನ್ನ ಶಾಸಕರ ಮೇಲೆ ನಿಗಾ ಇರಿಸಿದ ನಡುವೆ ಬಿಜೆಪಿ ನಾಯಕರು ಗುಂಪೊಂದು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಿದೆ.

‘‘ಮೈತ್ರಿ (ಬಿಜೆಪಿ-ಶಿವಸೇನೆ) ಸ್ಪಷ್ಟ ಬಹುಮತ ಪಡೆದಿದೆ. ಇದರ ಆಧಾರದಲ್ಲಿ ಸರಕಾರ ರಚನೆಯಾಗಲಿದೆ. ನಾವು ಈ ಬಗ್ಗೆ ರಾಜ್ಯಪಾಲರಲ್ಲಿ ಚರ್ಚೆ ನಡೆಸಿದ್ದೇವೆ’’ ಎಂದು ಮಹಾರಾಷ್ಟ್ರ ಬಿಜೆಪಿ ವರಿಷ್ಠ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಶಾಸಕರನ್ನು ಪಂಚತಾರಾ ಹೊಟೇಲ್‌ಗೆ ವರ್ಗಾಯಿಸಿದ ವರದಿ ನಿರಾಕರಿಸಿದ ಶಿವಸೇನೆ

ಒಂದು ಬಣ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇರುವುದರಿಂದ ಶಿವಸೇನೆ ಮುಂಬೈಯ ಪಂಚತಾರ ಹೊಟೇಲ್‌ನಲ್ಲಿ ಕೊಠಡಿ ಕಾಯ್ದಿರಿಸಿದೆ ಎಂಬ ವರದಿ ನಿರಾಕರಿಸಿರುವ ಶಿವಸೇನೆಯ ಸಂಸದ ಸಂಜಯ್ ರಾವತ್, ‘‘ನಮ್ಮ ಶಾಸಕರು ಪಕ್ಷಕ್ಕೆ ಬದ್ಧರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಇಬ್ಭಾಗವಾಗದು’’ ಎಂದಿದ್ದಾರೆ.

‘‘ಶಿವಸೇನೆ ಶಾಸಕರ ಹತ್ತಿರ ಬರಲು ಯಾರೊಬ್ಬರಿಗೂ ಧೈರ್ಯ ಇಲ್ಲ. ನಮ್ಮ ಶಾಸಕರು ನಿರ್ಧಾರಕ್ಕೆ ಹಾಗೂ ಪಕ್ಷಕ್ಕೆ ಬದ್ಧರಾಗಿದ್ದಾರೆ. ಇಂತಹ ವದಂತಿಗಳನ್ನು ಹರಡುವವರು ತಮ್ಮ ಶಾಸಕರ ಬಗ್ಗೆ ಚಿಂತಿಸಲಿ’’ ಎಂದು ಅವರು ಹೇಳಿದರು.

 ಶಿವಸೇನೆ ವರದಿಯನ್ನು ನಿರಾಕರಿಸಿದ ಹೊರತಾಗಿಯೂ ಉದ್ಧವ್ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ಯಿಂದ ಕೇವಲ 5 ನಿಮಿಷಗಳ ದೂರದಲ್ಲಿರುವ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಪಂಚತಾರಾ ಹೊಟೇಲ್‌ಗೆ ಶಾಸಕರನ್ನು ವರ್ಗಾಯಿಸ ಲಾಗಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X