Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2,000 ರೂ. ನೋಟು ನಿಷೇಧಿಸಬಹುದು ಎಂದ...

2,000 ರೂ. ನೋಟು ನಿಷೇಧಿಸಬಹುದು ಎಂದ ಮಾಜಿ ವಿತ್ತ ಕಾರ್ಯದರ್ಶಿ ಗರ್ಗ್!

ವಾರ್ತಾಭಾರತಿವಾರ್ತಾಭಾರತಿ8 Nov 2019 5:09 PM IST
share
2,000 ರೂ. ನೋಟು ನಿಷೇಧಿಸಬಹುದು ಎಂದ ಮಾಜಿ ವಿತ್ತ ಕಾರ್ಯದರ್ಶಿ ಗರ್ಗ್!

ಹೊಸದಿಲ್ಲಿ, ನ.8: ದೇಶದಲ್ಲಿ ಈಗಿರುವ 2000 ರೂ. ಮುಖಬೆಲೆಯ ನೋಟುಗಳ ಪೈಕಿ ಹೆಚ್ಚಿನವು ವಾಸ್ತವವಾಗಿ ಚಲಾವಣೆಯಲ್ಲಿಲ್ಲ, ಬದಲಾಗಿ ಅವುಗಳನ್ನು ದಾಸ್ತಾನಿರಿಸಲಾಗಿದೆ. ಆದುದರಿಂದ ಯಾವುದೇ ಸಮಸ್ಯೆಯಿಲ್ಲದೆ ಅವುಗಳನ್ನು ಅಮಾನ್ಯೀಕರಣಗೊಳಿಸಬಹುದು ಎಂಬ ಸಲಹೆಯನ್ನು ಮಾಜಿ ವಿತ್ತ ಕಾರ್ಯದರ್ಶಿ ಸುಭಾಶ್ ಚಂದ್ರ ಗರ್ಗ್ ಗುರುವಾರ ಪ್ರಕಟಗೊಂಡ ತಮ್ಮ 72 ಪುಟಗಳ ಟಿಪ್ಪಣಿಯಲ್ಲಿ ಹೇಳಿದ್ದಾರೆ.

ವಿತ್ತ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆಗೊಂಡು ಇಂಧನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಗರ್ಗ್ ಅಕ್ಟೋಬರ್ 31ರಂದು ವಿಆರ್‍ಎಸ್ ಪಡೆದುಕೊಂಡಿದ್ದರು

2000 ರೂ. ನೋಟು ಅಮಾನ್ಯೀಕರಣ ಹೊರತಾಗಿ ಸಾರ್ವಜನಿಕ ರಂಗದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವುದು, ಸರಕಾರದ ಸಾಲವನ್ನು ಆರ್‍ ಬಿಐ ಬದಲು ಸರಕಾರವೇ ನಿರ್ವಹಿಸುವುದು, ಬಜೆಟ್ ಹೊರತಾಗಿ ಸಾಲ ಪಡೆಯುವುದನ್ನು  ನಿಲ್ಲಿಸುವುದು, ಇವೇ ಮುಂತಾದ ಸಲಹೆಗಳನ್ನೂ ಅವರು ನೀಡಿದ್ದಾರೆ.

ಹೆಚ್ಚಾಗಿರುವ ದೇಶದ ಸಾಲದ ಪ್ರಮಾಣವು ಕ್ರೆಡಿಟ್ ರೇಟಿಂಗ್ ಅನ್ನು ಬಾಧಿಸುತ್ತಿದೆ ಎಂದು ಹೇಳಿದ ಅವರು ಆದಾಯದ ಹೆಚ್ಚಿನ ಭಾಗ ಈ ಸಾಲದ ಪ್ರಮಾಣ ಇಳಿಸಲು ಬಳಸುವ ಅನಿವಾರ್ಯತೆಯಿದೆ ಎಂದರು.

ಲ್ಯಾಂಡ್ ಮ್ಯಾನೇಜ್ಮೆಂಟ್ ಕಾರ್ಪೊರೇಶನ್ ಸ್ಥಾಪನೆಗೂ ಸಲಹೆ ನೀಡಿರುವ ಅವರು ನಷ್ಟದಲ್ಲಿರುವ ಸಾರ್ವಜನಿಕ ರಂಗದ ಸಂಸ್ಥೆಗಳ ಜಮೀನು ಹಾಗೂ ಕಟ್ಟಡಗಳನ್ನು  ಈ ನಿಗಮಕ್ಕೆ ವರ್ಗಾಯಿಸಬೇಕೆಂದು ಸಲಹೆ ನೀಡಿದ್ದಾರೆ. ವಿದೇಶಿ ಕರೆನ್ಸಿಗಳಲ್ಲಿ ಸಾವರಿನ್ ಬಾಂಡ್ ಗಳಿಗೂ ಅವರು ಸಲಹೆ ನೀಡಿದ್ದಾರೆ.

ತಾವು ನಿವೃತ್ತರಾಗುವ ಮುನ್ನ  ಕಚೇರಿಯಲ್ಲಿ ತಮ್ಮ 72 ಪುಟಗಳ ಟಿಪ್ಪಣಿಯ ಒಂದು ಪ್ರತಿಯನ್ನು  ಸರಕಾರದ ಹಿರಿಯ ಅಧಿಕಾರಿಗಳಿಗೆ ನೀಡಿದ್ದಾಗಿಯೂ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X