Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಪೈವೇರ್‌ ಬೇಹುಗಾರಿಕೆ ಪ್ರಕರಣದ ಮಾಹಿತಿ...

ಸ್ಪೈವೇರ್‌ ಬೇಹುಗಾರಿಕೆ ಪ್ರಕರಣದ ಮಾಹಿತಿ ಬಹಿರಂಗಪಡಿಸಿ

ಕೇಂದ್ರಕ್ಕೆ ಪತ್ರಕರ್ತರು, ಮಾನವಹಕ್ಕು ಹೋರಾಟಗಾರರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Nov 2019 9:55 PM IST
share
ಸ್ಪೈವೇರ್‌ ಬೇಹುಗಾರಿಕೆ ಪ್ರಕರಣದ ಮಾಹಿತಿ ಬಹಿರಂಗಪಡಿಸಿ

ಹೊಸದಿಲ್ಲಿ, ನ.8: ಇಸ್ರೇಲ್‌ನ ಸ್ಪೈವೇರ್‌ನ ಸೈಬರ್ ದಾಳಿ ಕುರಿತು ಲಭ್ಯ ಮಾಹಿತಿಯನ್ನು ಹೊರಗೆಡಹುವಂತೆ ಸೈಬರ್ ದಾಳಿಗೆ ಗುರಿಯಾಗಿರುವ 19 ಮಂದಿ ಭಾರತೀಯರು ಕೇಂದ್ರ ಸರಕಾರಕ್ಕೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಸೈಬರ್ ದಾಳಿ, ಸಾಮೂಹಿಕ ನಿಗಾ ಪ್ರಕ್ರಿಯೆಯ ಇತರ ಮಾದರಿ ಹಾಗೂ ಶಂಕಿತರ ಗುರುತಿನ ಕುರಿತು ಲಭ್ಯ ಮಾಹಿತಿಯನ್ನು ಬಹಿರಂಗೊಳಿಸುವಂತೆ ಪತ್ರದಲ್ಲಿ ಒತ್ತಾಯಿಸಲಾಗಿದೆ. ಅಜ್ಞಾತ ಸಂಸ್ಥೆಯೊಂದು ನಮ್ಮ ಮೇಲೆ ನಿಕಟ ನಿಗಾ ಇರಿಸಿದೆ ಮತ್ತು ನಮ್ಮ ಸಮಗ್ರ ವಿವರ, ವೈಯಕ್ತಿಕ ಸಂಭಾಷಣೆ, ಆರ್ಥಿಕ ವ್ಯವಹಾರ ಇತ್ಯಾದಿಗಳ ಕುರಿತು ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ವಿಷಯದಿಂದ ತೀವ್ರ ಆತಂಕವಾಗಿದೆ ಎಂದು ಸ್ವೈವೇರ್‌ನ ಸೈಬರ್ ದಾಳಿಗೆ ಒಳಗಾಗಿರುವ ಪತ್ರಕರ್ತರು, ಮಾನವಹಕ್ಕು ಹೋರಾಟಗಾರರು ಹಾಗೂ ಸಾಹಿತಿಗಳನ್ನೊಳಗೊಂಡ 19 ಭಾರತೀಯರ ತಂಡ ಬರೆದಿರುವ ಪತ್ರದಲ್ಲಿ ಹೇಳಲಾಗಿದೆ.

“ಇದು ನಮ್ಮ ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದ್ದು ನಮ್ಮ ಭದ್ರತೆ ಮಾತ್ರವಲ್ಲ, ನಮ್ಮ ಕುಟುಂಬದವರು, ಸ್ನೇಹಿತರು, ಸಹೋದ್ಯೋಗಿಗಳು, ಗ್ರಾಹಕರು ಮುಂತಾದವರ  ಖಾಸಗಿ ಮಾಹಿತಿಯನ್ನು ಕದಿಯಲಾಗಿದೆ . ಈ ರೀತಿಯ ನಿಗಾ ವ್ಯವಸ್ಥೆಗೆ ಕೋಟ್ಯಾಂತರ ರೂಪಾಯಿ ಹಣದ ಜೊತೆಗೆ ಮಾಹಿತಿ ತಂತ್ರಜ್ಞಾನದ ಅಗಾಧ ಮೂಲಸೌಕರ್ಯದ ಅಗತ್ಯವಿದ್ದು, ಭಾರತೀಯರು ಪಾವತಿಸುವ ತೆರಿಗೆ ಹಣವನ್ನು ಇದಕ್ಕೆ ಬಳಸಲಾಗಿದೆಯೇ” ಎಂಬ ಪ್ರಶ್ನೆ ಜನಮನದಲ್ಲಿ ಮೂಡಿದೆ.

ಅಂತರಾಷ್ಟ್ರೀಯ ಖಾಸಗಿ ಸಂಸ್ಥೆಗಳು ಹಾಗೂ ಇತರ ಕೆಲವು ವಿದೇಶಿ ಸಂಸ್ಥೆಗಳು ಭಾರತದ ಎಲ್ಲಾ ಹಂತದ  ದೂರಸಂಪರ್ಕ ಮಾಧ್ಯಮವನ್ನು ಭೇದಿಸಿದ್ದು ಹಲವು ಭಾರತೀಯರ ಪೌರರ ಗೌಪ್ಯ ವಿವರಗಳನ್ನು ಕೈವಶ ಮಾಡಿಕೊಳ್ಳಲು ಸಮರ್ಥವಾಗಿವೆ. ಇದರಿಂದ ನಮ್ಮ ರಾಷ್ಟ್ರೀಯ ಸಾರ್ವಭೌಮತ್ವಕ್ಕೆ ಬೆದರಿಕೆ ಎದುರಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

“ಭಾರತದಲ್ಲಿ ಕಾರ್ಯಾಚರಿಸಲು ಸ್ಪೈವೇರ್ ಅಥವಾ ಇತರ ಮಾಲ್‌ವೇರ್ ಸಂಸ್ಥೆಯನ್ನು ನಿಯೋಜಿಸುವ ಬಗ್ಗೆ ವಿವಿಧ ಸಚಿವಾಲಯ, ಇಲಾಖೆಗಳು, ಏಜೆನ್ಸಿಗಳು ಅಥವಾ ಯಾವುದೇ ರಾಜ್ಯ ಸರಕಾರ, ಎನ್‌ಎಸ್‌ಒ ಸಮೂಹದ ಮಧ್ಯೆ ಯಾವುದಾದರೂ ಒಪ್ಪಂದ ಏರ್ಪಟ್ಟಿರುವ ಬಗ್ಗೆ ಸರಕಾರಕ್ಕೆ ಅರಿವು ಇದೆಯೇ.? ಒಂದು ವೇಳೆ ಒಪ್ಪಂದ ಏರ್ಪಟ್ಟಿದ್ದರೆ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಒಪ್ಪಂದದ ವಿವರ( ಒಟ್ಟು ಮೊತ್ತ ಮತ್ತು ಒಪ್ಪಂದದ ವ್ಯವಸ್ಥೆ ಮಾಡಿರುವ ಏಜೆನ್ಸಿ)ವನ್ನು ಬಹಿರಂಗಗೊಳಿಸಬೇಕು. ಒಂದು ವೇಳೆ ಸರಕಾರದ ಬಳಿ ಈ ಮಾಹಿತಿ ಇಲ್ಲದಿದ್ದರೆ ಈ ಸೈಬರ್ ದಾಳಿಯ ಹಿಂದಿರುವ ಅಪರಾಧಿಗಳನ್ನು ಗುರುತಿಸಲು ಮತ್ತು ದೂರಸಂಪರ್ಕ ವ್ಯವಸ್ಥೆಯ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪೂರ್ಣ ಮಾಹಿತಿ ನೀಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಜವಾಬ್ದಾರಿಯುತ ಸರಕಾರ ತನ್ನ ಪ್ರಜೆಗಳ ಸುರಕ್ಷತೆಯನ್ನು ಖಾತರಿಗೊಳಿಸಬೇಕು ಎಂದು ಆಗ್ರಹಿಸಿರುವ ಪತ್ರಕ್ಕೆ ಬೇಲಾ ಭಾಟಿಯಾ, ಡಿಗ್ರೀಪ್ರಸಾದ್ ಚೌಹಾಣ್, ಶಾಲಿನಿ ಗೇರ, ಸೀಮಾ ಆಝಾದ್ ಮುಂತಾದ ಮಾನವಹಕ್ಕು ಹೋರಾಟಗಾರರ ಸಹಿತ 19 ಮಂದಿ ಸಹಿ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X