ಸುಪ್ರೀಂ ತೀರ್ಪಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸ್ವಾಗತ
ಉಡುಪಿ, ನ.9: ಬಹು ದಶಕಗಳ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದಕ್ಕೆ ಸುಪ್ರೀಂ ಕೋರ್ಟ್ನ ಇಂದಿನ ತೀರ್ಪಿನಿಂದ ತೆರೆ ಬಿದ್ದಂತಾಗಿದೆ. ದೇಶದ ಸಂವಿಧಾನದ ಮೇಲೆ ಭರವಸೆ ಇರುವ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರಕಾರವೇ 3 ತಿಂಗಳ ಒಳಗೆ ಮಂದಿರ ನಿರ್ಮಾಣಕ್ಕೆ ಟ್ರಸ್ಟನ್ನು ರಚಿಸಿ ಕ್ರಮ ಕೈಗೊಳ್ಳಬೇಕು, ಮುಸ್ಲಿಮರಿಗೂ 5 ಎಕರೆ ಭೂಮಿ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ಪ್ರಕಟಿಸಿರುವ ಐತಿಹಾಸಿಕ ತೀರ್ಪು ಹಿಂದೂ ಮುಸ್ಲಿಮರಲ್ಲಿ ಭಾಂಧವ್ಯ ಬೆಸೆಯಲು ಸಹಕಾರಿಯಾಗಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ದೇಶದ ಪ್ರಜೆಗಳಾದ ಹಿಂದೂ-ಮುಸ್ಲಿಮರ ನಡುವಿನ ಶಾಂತಿ ಸೌಹಾರ್ದ ತೆಗಳನ್ನು ನಾವು ಕಾಪಾಡಬೇಾಗಿದೆ. ಸುಪ್ರೀಂ ಕೋರ್ಟಿನ ಈ ತೀರ್ಪು ಸರ್ವ ಧರ್ಮಕ್ಕೂ ಸಂದ ಗೆಲುವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





