Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಖ್ಖರಿಗೆ ತೆರೆದ ಹೃದಯ ಬಾಗಿಲು:...

ಸಿಖ್ಖರಿಗೆ ತೆರೆದ ಹೃದಯ ಬಾಗಿಲು: ಇಮ್ರಾನ್ ಖಾನ್

ಕರ್ತಾರ್‌ಪುರ ಕಾರಿಡಾರ್ ಆರಂಭ

ವಾರ್ತಾಭಾರತಿವಾರ್ತಾಭಾರತಿ9 Nov 2019 10:04 PM IST
share
ಸಿಖ್ಖರಿಗೆ ತೆರೆದ ಹೃದಯ ಬಾಗಿಲು: ಇಮ್ರಾನ್ ಖಾನ್

ಇಸ್ಲಮಾಬಾದ್, ನ.9: ಐತಿಹಾಸಿಕ ಕರ್ತಾರ್‌ಪುರ ಸಾಹಿಬ್ ಕಾರಿಡಾರ್‌ನ ಆರಂಭ ಪ್ರಾದೇಶಿಕ ಶಾಂತಿಗೆ ಪಾಕಿಸ್ತಾನದ ಬದ್ಧತೆಯನ್ನು ಪ್ರಮಾಣೀಕರಿಸುತ್ತದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

 ಸಿಖ್ ಧರ್ಮದ ಸಂಸ್ಥಾಪಕ ಬಾಬಾ ಗುರುನಾನಕ್ ದೇವ್ ಅವರ 550ನೇ ಜನ್ಮದಿನಾಚರಣೆ ಸಂದರ್ಭ ಸಿಖ್ ಸಮುದಾಯದವರನ್ನು ಅಭಿನಂದಿಸಿದ ಇಮ್ರಾನ್ ಖಾನ್, “ಇಂದು ನಾವು ಕೇವಲ ಗಡಿಯನ್ನು ಮಾತ್ರ ತೆರೆಯುತ್ತಿಲ್ಲ, ಸಿಖ್ ಸಮುದಾಯದವರಿಗೆ ನಮ್ಮ ಹೃದಯದ ಬಾಗಿಲನ್ನೂ ತೆರೆಯುತ್ತಿದ್ದೇವೆ” ಎಂದು ಹೇಳಿದರು.

ಕರ್ತಾರ್‌ಪುರ ಸಾಹಿಬ್ ಕಾರಿಡಾರ್‌ನ ಉದ್ಘಾಟನೆಯ ಈ ಐತಿಹಾಸಿಕ ಸಂದರ್ಭದಲ್ಲಿ ಗಡಿಯ ಎರಡೂ ಭಾಗದಲ್ಲಿರುವ ಮತ್ತು ವಿಶ್ವದಾದ್ಯಂತದ ಸಿಖ್ ಸಮುದಾಯಕ್ಕೆ ಅಭಿನಂದನೆಗಳು. ಈ ಪ್ರದೇಶದ ಸಮೃದ್ಧಿಯ ಹಾದಿ ಮತ್ತು ನಮ್ಮ ಮುಂದಿನ ಪೀಳಿಗೆಯ ಉಜ್ವಲ ಭವಿಷ್ಯ ಶಾಂತಿಯನ್ನು ಆಧರಿಸಿದೆ. ಪಾಕಿಸ್ತಾನ ಸರಕಾರ ತೋರಿದ ಅಭೂತಪೂರ್ವ ಸದ್ಭಾವನೆಯ ಸಂಕೇತವು ಬಾಬಾ ಗುರುನಾನಕರ ಕುರಿತು ಇರುವ ಗೌರವದ ಪ್ರತಿಫಲನವಾಗಿದೆ ಮತ್ತು ಸಿಖ್ ಸಮುದಾಯದ ಬಗ್ಗೆ ಸರಕಾರ ಹೊಂದಿರುವ ಧಾರ್ಮಿಕ ಭಾವನೆಯ ಸೂಚಕವಾಗಿದೆ. ಧರ್ಮಗಳ ನಡುವಿನ ಸಾಮರಸ್ಯ ಮತ್ತು ಶಾಂತಿಯುತ ಸಹಬಾಳ್ವೆಯು ಉಪಖಂಡದ ಜನತೆಯ ಹಿತಾಸಕ್ತಿಗೆ ಪೂರಕವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡುತ್ತದೆ ಎಂಬ ವಿಶ್ವಾಸವನ್ನು ಪಾಕಿಸ್ತಾನ ಹೊಂದಿದೆ . ಧಾರ್ಮಿಕ ಸ್ಥಳ ಹಾಗೂ ಪ್ರಾರ್ಥನಾ ಸ್ಥಳಗಳ ಪಾವಿತ್ರತೆ ಮತ್ತು ಘನತೆಯ ಕುರಿತು ಮುಸ್ಲಿಮರಿಗೆ ಅಪಾರ ವಿವೇಚನೆಯಿದೆ ಎಂದು ಇಮ್ರಾನ್ ಖಾನ್ ಹೇಳಿದರು.

ಪಾಕಿಸ್ತಾನದ ರಾವಿ ನದಿ ದಂಡೆಯಲ್ಲಿರುವ ಕರ್ತಾರ್‌ಪುರ ಸಾಹಿಬ್ ಗುರುದ್ವಾರವು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿರುವ ಡೇರಾ ಬಾಬಾ ನಾನಕ್ ಮಂದಿರದಿಂದ ಸುಮಾರು 4 ಕಿ.ಮೀ. ದೂರದಲ್ಲಿದೆ. ಈ ಎರಡೂ ಕೇಂದ್ರಗಳನ್ನು ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಸಂಪರ್ಕಿಸುತ್ತದೆ.

ಬಹು ನಿರೀಕ್ಷಿತ ಕರ್ತಾರ್‌ಪುರ ಕಾರಿಡಾರ್‌ನ ಉದ್ಘಾಟನೆಯ ಅಂಗವಾಗಿ ಭಾರತ ಹಾಗೂ ಪಾಕಿಸ್ತಾನ ಗಡಿಪ್ರದೇಶದ ಎರಡೂ ಬದಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಘಾಟನೆಯ ದಿನವಾದ ಶನಿವಾರ(ನವೆಂಬರ್ 9) ಹಾಗೂ ಗುರುನಾನಕರ 550ನೇ ಜನ್ಮದಿನವಾದ ನವೆಂಬರ್ 12ರಂದು ಕರ್ತಾರ್‌ಪುರ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಪಾಸ್‌ಪೋರ್ಟ್‌ನ ಅಗತ್ಯವಿಲ್ಲ ಹಾಗೂ 20 ಡಾಲರ್ ಸೇವಾಶುಲ್ಕವನ್ನು ಈ ಎರಡು ದಿನ ಮನ್ನಾ ಮಾಡಲಾಗಿದೆ ಎಂದು ಪಾಕಿಸ್ತಾನ ಸರಕಾರ ತಿಳಿಸಿದೆ.

ಕರ್ತಾರ್‌ಪುರ ಕಾರಿಡಾರ್ ಕುರಿತು ಭಾರತ-ಪಾಕಿಸ್ತಾನ ಮಧ್ಯೆ ನಡೆದಿರುವ ಒಪ್ಪಂದದಿಂದ ಭಾರತದಿಂದ ಪ್ರತೀದಿನ 5000 ಯಾತ್ರಿಗಳು ಗುರುದ್ವಾರ ದರ್ಬಾರ್ ಸಾಹಿಬ್‌ಗೆ ಭೇಟಿ ನೀಡಲು ಅವಕಾಶ ದೊರಕಿದೆ.

ಕಾರಿಡಾರ್ ಉದ್ಘಾಟನೆಯಂದೇ ಅಯೋಧ್ಯೆ ತೀರ್ಪು

ಪಾಕ್ ಆಕ್ಷೇಪ ಇಸ್ಲಾಮಾಬಾದ್, ನ.9: ಅಯೋಧ್ಯೆ ವಿವಾದದ ತೀರ್ಪು ಪ್ರಕಟಿಸಿರುವ ದಿನಾಂಕದ ಬಗ್ಗೆ ಆಕ್ಷೇಪ ಎತ್ತಿರುವ ಪಾಕಿಸ್ತಾನದ ವಿದೇಶ ಸಚಿವ ಶಾ ಮಹ್ಮೂದ್ ಖುರೇಶಿ, ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಯಂತಹ ಸಂಭ್ರಮದ ದಿನದಂದು ತೋರಿರುವ ಇಂತಹ ಅಸಂವೇದನಾಶೀಲತೆಯ ವರ್ತನೆಯಿಂದ ತೀವ್ರ ದುಃಖಿತನಾಗಿದ್ದೇನೆ ಎಂದಿದ್ದಾರೆ.

ಕೆಲ ದಿನ ಕಾದು ಈ ತೀರ್ಪು ಪ್ರಕಟಿಸಬಹುದಿತ್ತಲ್ಲವೇ? ಅಯೋಧ್ಯೆ ವಿವಾದ ಸೂಕ್ಷ್ಮ ವಿಷಯವಾಗಿದ್ದು ಇದರ ತೀರ್ಪನ್ನು ಕಾರಿಡಾರ್ ಉದ್ಘಾಟನೆಯ ಸಂಭ್ರಮದ ದಿನದಂದೇ ಪ್ರಕಟಿಸುವ ತುರ್ತು ಏನಿತ್ತು ? ಭಾರತದಲ್ಲಿ ಮುಸ್ಲಿಮರು ಈಗಾಗಲೇ ಸಾಕಷ್ಟು ಒತ್ತಡದಲ್ಲಿದ್ದು ಭಾರತದ ಸುಪ್ರೀಂಕೋರ್ಟ್‌ನ ಈ ನಿರ್ಧಾರ ಅವರ ಮೇಲೆ ಮತ್ತಷ್ಟು ಒತ್ತಡಕ್ಕೆ ಕಾರಣವಾಗಲಿದೆ . ಈ ತೀರ್ಪನ್ನು ವಿವರವಾಗಿ ಪರಿಶೀಲಿಸಿದ ಬಳಿಕ ಪಾಕಿಸ್ತಾನ ಪ್ರತಿಕ್ರಿಯಿಸಲಿದೆ ಎಂದು ಖುರೇಶಿ ಹೇಳಿರುವುದಾಗಿ ವರದಿಯಾಗಿದೆ.

ಇದು ಅತ್ಯಂತ ಅವಮಾನಕರ, ಅಸಹ್ಯಕರ, ಅಕ್ರಮ, ಅನೈತಿಕ ತೀರ್ಪು ಎಂದು ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಫಾವದ್ ಹುಸೈನ್ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X