Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕವಿ ಕಾಳಿದಾಸನ ಹೆಸರನ್ನು ಶಾಶ್ವತಗೊಳಿಸುವ...

ಕವಿ ಕಾಳಿದಾಸನ ಹೆಸರನ್ನು ಶಾಶ್ವತಗೊಳಿಸುವ ಕಾರ್ಯವಾಗಲಿ: ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ9 Nov 2019 10:20 PM IST
share
ಕವಿ ಕಾಳಿದಾಸನ ಹೆಸರನ್ನು ಶಾಶ್ವತಗೊಳಿಸುವ ಕಾರ್ಯವಾಗಲಿ: ಎಚ್.ವಿಶ್ವನಾಥ್

ಬೆಂಗಳೂರು, ನ.9: ಕವಿ ಕಾಳಿದಾಸನ ಹೆಸರನ್ನು ಮುಂದಿನ ತಲೆಮಾರುಗಳಿಗೂ ಜೀವಂತವಾಗಿಡುವ ನಿಟ್ಟಿನಲ್ಲಿ ಸಂಘ, ಸಂಸ್ಥೆಗಳು ಕಾರ್ಯಯೋಜನೆಯೊಂದನ್ನು ರೂಪಿಸಬೇಕಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ಶನಿವಾರ ಕಾಳಿದಾಸ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಂಘಟನೆ ನಗರದ ಯವನಿಕದಲ್ಲಿ ಆಯೋಜಿಸಿದ್ದ ಲೇಖಕ ಪುರುಷೋತ್ತಮ ದಾಸ್ ಹೆಗ್ಗಡೆ ಅವರ ‘ಕಾಳಿದಾಸನ ಮೇಘದೂತ’ ವಿಭಿನ್ನ ಕೋನಗಳ ಅವಲೋಕನ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕವಿ ಕಾಳಿದಾಸನ ಸಾಹಿತ್ಯವು ಜಗತ್‌ಪ್ರಸಿದ್ಧ ನಾಟಕಕಾರ ಶೇಕ್ಸ್‌ಪಿಯರ್ ಕಾವ್ಯಕ್ಕೆ ಸರಿಸಾಟಿಯಾಗಿ ನಿಲ್ಲುವಂತಹದ್ದಾಗಿದೆ. ಆದರೆ, ಕಾಳಿದಾಸನ ಕಾವ್ಯವನ್ನು ಜನಸಾಮಾನ್ಯರಿಗೆ ಪರಿಚಯಿಸುವಲ್ಲಿ ನಾವು ವಿಫಲರಾಗಿದ್ದೇವೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಳಿದಾಸನ ಕುರಿತು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆತನನ್ನು ಜನತೆಗೆ ಪರಿಚಯಿಸಬೇಕಿದೆ ಎಂದು ಅವರು ಹೇಳಿದರು.

ಇಂಗ್ಲೆಂಡ್‌ನ ಸಣ್ಣ ಹಳ್ಳಿಯಲ್ಲಿ 450 ವರ್ಷಗಳ ಹಿಂದೆ ಹುಟ್ಟಿದ ಶೇಕ್ಸ್‌ಪಿಯರ್‌ನನ್ನು ಅಲ್ಲಿನ ಜನತೆ ಇಂದಿಗೂ ಜೀವಂತವಾಗಿಟ್ಟಿದ್ದಾರೆ. ಪ್ರತಿ ದಿನ ಆತ ಬರೆದಿರುವ ನಾಟಕಗಳು ಪ್ರದರ್ಶನವಾಗುತ್ತವೆ. ವರ್ಷದಲ್ಲಿ ಒಂದು ತಿಂಗಳು ಶೇಕ್ಸ್‌ಪಿಯರ್ ವೇಷ ಧರಿಸಿ ಸಂಭ್ರಮಿಸುತ್ತಾರೆ. ನಾವು ಸಹ ಇದೇ ಮಾದರಿಯಲ್ಲಿ ಕಾಳಿದಾಸನ ದಿನವನ್ನು ಆಚರಿಸಬೇಕು. ಆತನ ವೇಷ ಹಾಕಿ ಸಂಭ್ರಮಿಸಬೇಕು ಎಂದು ಅವರು ತಿಳಿಸಿದರು.

ಕಾಳಿದಾಸ ತಮ್ಮ ಕಾವ್ಯಗಳಲ್ಲಿ ಪುರುಷ-ಮಹಿಳೆಯ ಪ್ರೀತಿ-ಪ್ರಣಯಗಳ ಕುರಿತ ಸಂಬಂಧವನ್ನು ನವಿರಾಗಿ ದಾಖಲಿಸಿದ್ದಾನೆ. ಇದು ಪಾಶ್ಚಿಮಾತ್ಯ ಸಾಹಿತ್ಯದಲ್ಲಿ ಕಾಣಲು ಸಾಧ್ಯವಿಲ್ಲ. ಅತ್ಯಂತ ಮೌಲ್ಯಯುತ ಹಾಗೂ ಪ್ರಸ್ತುತ ಕಾಲಮಾನಕ್ಕೆ ಒಗ್ಗುವಂತ ಶ್ರೇಷ್ಠ ಸಾಹಿತ್ಯವನ್ನು ಕಾಳಿದಾಸ ನೀಡಿದ್ದು, ಈ ಕುರಿತು ಯುವ ಸಮುದಾಯಕ್ಕೆ ತಲುಪಿಸಬೇಕಿದೆ ಎಂದು ಅವರು ಹೇಳಿದರು.

ಡಾ.ರಾಜ್‌ಕುಮಾರ್ ತಮ್ಮ ಸಿನೆಮಾಗಳಲ್ಲಿ ಕಾಳಿದಾಸ, ಕನಕದಾಸ, ಪುರಂದರ ದಾಸ, ಭಕ್ತ ಕುಂಬಾರ ಪಾತ್ರದಲ್ಲಿ ಅಭಿನಯಿಸುವ ಮೂಲಕ ಅವರನ್ನು ಜನಸಾಮಾನ್ಯರಿಗೆ ಪರಿಚಯಿಸುವಂತಹ ಕೆಲಸ ಮಾಡಿದ್ದಾರೆ. ಈಗ ನಾವು ಆ ಮಹಾನ್ ಸಾಧಕರನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಕೆಲಸಕ್ಕೆ ಮುಂದಾಗೋಣವೆಂದು ಅವರು ಹೇಳಿದರು.

ಸಂಸ್ಕೃತದಲ್ಲಿರುವ ಕಾಳಿದಾಸನ ಕಾವ್ಯವನ್ನು ಕನ್ನಡಕ್ಕೆ ಅನುವಾದ ಮಾಡುವುದು ಸವಾಲಿನ ಕೆಲಸ. ಇದನ್ನು ಲೇಖಕ ಪುರುಷೋತ್ತಮ ದಾಸ್ ಹೆಗ್ಗಡೆ ಯಶಸ್ವಿಯಾಗಿ ಮುಗಿಸಿ, ಕನ್ನಡಕ್ಕೊಂದು ಅಪರೂಪದ ಕೃತಿಯೊಂದನ್ನು ನೀಡಿದ್ದಾರೆ. ಪ್ರೀತಿ, ಪ್ರೇಮದ ಪ್ರತೀಕವಾಗಿರುವ ಕಾಳಿದಾಸನ ಕಾವ್ಯಗಳು ಎಲ್ಲರೂ ಓದುವಂತಾಗಲಿ ಎಂದು ಅವರು ಆಶಿಸಿದರು.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಸಿದ್ಧರಾಮಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಲೇಖಕ ಪುರುಷೋತ್ತಮ ದಾಸ್ ಹೆಗ್ಗಡೆ, ಬಿ. ದೇವರಾಜ, ಪ್ರೊ. ನಾರಾಯಣ ಘಟ್ಟ, ಆಚಾರ್ಯ ನಾಗರಾಜ್ ರಂಗಸ್ವಾಮಿಗೌಡ, ಲಿಂಗಪ್ಪ, ಗುರುಪಾದಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X