ಸುಪ್ರೀಂ ಕೋರ್ಟ್ ತೀರ್ಪುನ್ನು ಎಲ್ಲರೂ ಸ್ವಾಗತಿಸಿದ್ದಾರೆ: ಶಾಸಕಿ ಖನೀಝ್ ಫಾತಿಮಾ
ಕಲಬುರಗಿ, ನ.9: ರಾಮಜನ್ಮ ಭೂಮಿ ಮತ್ತು ಬಾಬರಿ ಮಸೀದಿ ಭೂ ವಿವಾದ ಸಂಬಂಧ ತೀರ್ಪು ಪ್ರಕಟವಾಗಿದ್ದು, ಈ ಸಂಬಂಧ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಜತೆಗಿದ್ದು, ಅವರ ಅಭಿಪ್ರಾಯಕ್ಕೆ ಸಹಮತವಿದೆ ಎಂದು ಕಾಂಗ್ರೆಸ್ ಶಾಸಕಿ ಖನೀಝ್ ಫಾತಿಮಾ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪುನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಈ ವೇಳೆ ಸಂಯಮದಿಂದ ನಡೆದುಕೊಳ್ಳಬೇಕು, ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡಿದರು.
ತೀರ್ಪು ಸಂಬಂಧ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಸಹ ಬದ್ಧವಾಗಿದ್ದೇವೆ ಎಂದ ಅವರು, ತೀರ್ಪು ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂದು ಅವರು ಹೇಳಿದರು.
Next Story