Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರದಲ್ಲಿ ನಾವು ಸರಕಾರ...

ಮಹಾರಾಷ್ಟ್ರದಲ್ಲಿ ನಾವು ಸರಕಾರ ರಚಿಸುವುದಿಲ್ಲ: ಬಿಜೆಪಿ

ಶಿವಸೇನೆಯೊಂದಿಗೆ ಹಗ್ಗ-ಜಗ್ಗಾಟಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ10 Nov 2019 6:40 PM IST
share
ಮಹಾರಾಷ್ಟ್ರದಲ್ಲಿ ನಾವು ಸರಕಾರ ರಚಿಸುವುದಿಲ್ಲ: ಬಿಜೆಪಿ

 ಮುಂಬೈ,ನ.11: ಶಿವಸೇನೆಯ ಜೊತೆ ದಶಕಗಳ ಮೈತ್ರಿಯನ್ನು ಕಡಿದುಕೊಂಡಿರುವ ಬಿಜೆಪಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆಯ ಪ್ರಯತ್ನವನ್ನು ಬಿಜೆಪಿ ಕೈಬಿಟ್ಟಿದೆ. ಸರಕಾರ ರಚನೆಗೆ ಅಗತ್ಯವಿರುವಷ್ಟು ಶಾಸಕರ ಸಂಖ್ಯಾಬಲವನ್ನು ತನ್ನಲ್ಲಿ ಇಲ್ಲವೆಂದು ಅದು ಹೇಳಿದೆ.

  ಸರಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್ ಕೋಶಿಯಾರಿ ಅವರು ಶನಿವಾರ ಬಿಜೆಪಿಯನ್ನು ಆಹ್ವಾನಿಸಿದ್ದರು. ಇಂದು ಫಡ್ನವೀಸ್ ಅವರು ರಾಜ್ಯಪಾಲರನ್ನು ಭೇಟಿಯಾಗಿ, ಸರಕಾರ ರಚನೆಗೆ ತನ್ನ ಪಕ್ಷವು ಹಕ್ಕು ಮಂಡಿಸುವುದಿಲ್ಲವೆಂದು ತಿಳಿಸಿದರು.

ಸರಕಾರ ರಚನೆ ಬಗ್ಗೆ ನಿರ್ಧರಿಸಲು ಬಿಜೆಪಿಯು ರವಿವಾರ ಒಂದರ ಹಿಂದೆ ಒಂದರಂತೆ ಎರಡು ಪ್ರಮುಖ ಸಮಿತಿ ಸಭೆಗಳನ್ನು ನಡೆಸಿತ್ತು. ಆದರೆ ಮೊದಲ ಸಭೆಯು ಯಾವುದೇ ನಿರ್ಧಾರಕ್ಕೆ ಬಾರದೆ ಕೊನೆಗೊಂಡಿತ್ತು.

 ಈ ಮಧ್ಯೆ ಬಿಜೆಪಿ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಕೂಡಾ ಸರಕಾರ ರಚನೆಗೆ ಬೇಕಾದ ಸದಸ್ಯ ಬಲ ತಮ್ಮ ಪಕ್ಷಕ್ಕಿಲ್ಲವೆಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಸರಕಾರ ರಚನೆಗಾಗಿ ಕಾಂಗ್ರೆಸ್ ಹಾಗೂ ಎನ್‌ಸಿಪಿ ಜೊತೆ ಕೈಜೋಡಿಸಲು ಶಿವಸೇನೆ ಈಗ ಮುಕ್ತವಾಗಿದೆಯೆಂದು ಅವರು ಹೇಳಿದ್ದಾರೆ.

 ‘‘ಕಾಂಗ್ರೆಸ್ ಹಾಗೂ ಎನ್‌ಸಿಪಿ ಬೆಂಬಲದೊಂದಿಗೆ ಸರಕಾರ ರಚಿಸಲು ಶಿವಸೇನೆ ಬಯಸುವುದಾದರೆ, ಅದಕ್ಕೆ ಶುಭವಾಗಲಿ’’ ಎಂದು ಪಾಟೀಲ್ ಹೇಳಿದ್ದಾರೆ.

  ಮಹಾರಾಷ್ಟ್ರದ ಜನತೆ ನೀಡಿದ ತೀರ್ಪಿಗೆ ಶಿವಸೇನೆಯು ಅಗೌರವ ತೋರಿದೆಯೆಂದು ಅವರು ಹೇಳಿದ್ದಾರೆ.

ಸರಕಾರ ರಚನೆಯಾಗಿ 15 ದಿನಗಳಾದರೂ ಅಧಿಕಾರ ಹಂಚಿಕೆಯ ಬಗ್ಗೆ ಬಿಜೆಪಿ ಹಾಗೂ ಶಿವಸೇನೆ ನಡುವೆ ಉಂಟಾಗಿರುವ ಬಿಕ್ಕಟ್ಟು ಕೊನೆಗೊಂಡಿರಲಿಲ್ಲ. ಈ ಮಧ್ಯೆ ಬಿಜೆಪಿಯು ತಮ್ಮ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗದಂತೆ ಖಾತರಿಪಡಿಸಲು ಶಿವಸೇನಾ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಶಾಸಕರನ್ನು ವಿವಿಧ ಹೊಟೇಲ್‌ಗಳಲ್ಲಿ ಕೂಡಿ ಹಾಕಿವೆ.

  ಮುಖ್ಯಮಂತ್ರಿ ಹುದ್ದೆಯನ್ನು 50:50 ಸೂತ್ರ ಆಧಾರದಲ್ಲಿ ಹಂಚಿಕೊಳ್ಳುವುದು ಸೇರಿದಂತೆ ಸರಕಾರದಲ್ಲಿ ಅಧಿಕಾರದ ಸಮಾನ ಪಾಲು ತನಗೂ ನೀಡಬೇಕೆಂದು ಶಿವಸೇನೆ ಆಗ್ರಹಿಸುತ್ತಿದೆ. ಆದರೆ ಬಿಜೆಪಿಯು ಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳಲು ನಿರಾಕರಿಸುತ್ತಲೇ ಬಂದಿರುವುದು, ಉಭಯ ಪಕ್ಷಗಳ ನಡುವೆ ಬಿಕ್ಕಟ್ಟು ಬಿಗಡಾಯಿಸಲು ಕಾರಣವಾಗಿದೆ.

 ಬಿಜೆಪಿ-ಶಿವಸೇನಾ ಮೈತ್ರಿಕೂಟವು ಸರಕಾರ ರಚನೆಗೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಎನ್‌ಸಿಪಿ- ಕಾಂಗ್ರೆಸ್ ಮೈತ್ರಿಕೂಟವನ್ನು ರಾಜ್ಯಪಾಲ ಭಗತ್‌ಸಿಂಗ್ ಕೋಶಿಯಾರಿ ಆಹ್ವಾನಿಸಬೇಕೆಂದು ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಆಗ್ರಹಿಸಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿಯು 105 ಸ್ಥಾನಗಳನ್ನು, ಶಿವಸೇನೆಯು 56 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ ಪಕ್ಷ 44 ಹಾಗೂ ಎನ್‌ಸಿಪಿ 54 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಸರಕಾರ ರಚನೆಗೆ ಬೇಕಾದ 145 ಸದಸ್ಯರ ಬೆಂಬಲದ ಅಗತ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X