Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಬಿಸಿ:‘ಛತ್ರಪತಿ ಶಿವಾಜಿ ಮಹಾರಾಜ...

ಕೆಬಿಸಿ:‘ಛತ್ರಪತಿ ಶಿವಾಜಿ ಮಹಾರಾಜ ’ವಿವಾದಕ್ಕಾಗಿ ಬಿಗ್ ಬಿ, ಸೋನಿ ಟಿವಿಯಿಂದ ಕ್ಷಮೆಯಾಚನೆ

ವಾರ್ತಾಭಾರತಿವಾರ್ತಾಭಾರತಿ10 Nov 2019 8:11 PM IST
share
ಕೆಬಿಸಿ:‘ಛತ್ರಪತಿ ಶಿವಾಜಿ ಮಹಾರಾಜ ’ವಿವಾದಕ್ಕಾಗಿ ಬಿಗ್ ಬಿ, ಸೋನಿ ಟಿವಿಯಿಂದ ಕ್ಷಮೆಯಾಚನೆ

ಮುಂಬೈ,ನ.10: ಸೋನಿ ಟಿವಿಯ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್‌ಪತಿ (ಕೆಬಿಸಿ) 11ರ ಬುಧವಾರದ ಸಂಚಿಕೆಯಲ್ಲಿ ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜರನ್ನು ಕೇವಲ ‘ಶಿವಾಜಿ’ಎಂದು ಉಲ್ಲೇಖಿಸಿದ್ದಕ್ಕಾಗಿ ವಾಹಿನಿಯ ಆಡಳಿತ ಮತ್ತು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

‘ ಬುಧವಾರದ ಕೆಬಿಸಿ ಕಾರ್ಯಕ್ರಮದಲ್ಲಿ ಅಜಾಗರೂಕತೆಯಿಂದಾಗಿ ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ಸರಿಯಾಗಿ ಪ್ರಸ್ತಾಪಿಸಿರಲಿಲ್ಲ. ಇದಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ. ನಮ್ಮ ವೀಕ್ಷಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಗುರುವಾರದ ಕಾರ್ಯಕ್ರಮದಲ್ಲಿ ವಿಷಾದವನ್ನು ಸೂಚಿಸಿದ್ದೇವೆ ’ಎಂದು ಸೋನಿ ಟಿವಿ ಟ್ವೀಟಿಸಿದೆ.

ಬುಧವಾರದ ಕೆಬಿಸಿ ಕಾರ್ಯಕ್ರಮದಲ್ಲಿ ಸ್ಪರ್ಧಿಯೋರ್ವರಿಗೆ ಮೊಘಲ್ ಚಕ್ರವರ್ತಿ ಔರಂಗಝೇಬ್ ಸಮಕಾಲೀನರ ಬಗ್ಗೆ ಕೇಳಲಾಗಿತ್ತು. ಉತ್ತರವಾಗಿ ನಾಲ್ಕು ಆಯ್ಕೆಗಳನ್ನು ನೀಡಲಾಗಿದ್ದು,ಛತ್ರಪತಿ ಶಿವಾಜಿ ಮಹಾರಾಜರನ್ನು ಕೇವಲ ‘ಶಿವಾಜಿ’ ಎಂದು ಉಲ್ಲೇಖಿಸಲಾಗಿತ್ತು. ಮಹಾರಾಣಾ ಪ್ರತಾಪ,ರಾಣಾ ಸಾಂಗಾ ಮತ್ತು ಮಹಾರಾಜ ರಣಜಿತ್ ಸಿಂಗ್ ಇತರ ಮೂರು ಆಯ್ಕೆಗಳಾಗಿದ್ದವು.

ಇದರಿಂದ ಆಕ್ರೋಶಗೊಂಡಿದ್ದ ಹಲವಾರು ಟ್ವಿಟ್ಟಿಗರು ಕಾರ್ಯಕ್ರಮದ ನಿಷೇಧಕ್ಕಾಗಿ ಆಗ್ರಹಿಸಿದ್ದರು.

‘ ಕೆಬಿಸಿ,ಸೋನಿ ಟಿವಿ ಬಹಿಷ್ಕರಿಸಿ ’ಎಂಬ ಹ್ಯಾಷ್‌ಟ್ಯಾಗ್ ಶುಕ್ರವಾರ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿತ್ತು.

ಸೋನಿ ಟಿವಿಯು ಛತ್ರಪತಿ ಶಿವಾಜಿ ಮಹಾರಾಜರನ್ನು ‘ಶಿವಾಜಿ’ ಎಂದು ಏಕವಚನದಲ್ಲಿ ಕರೆದು ಅವಮಾನಿಸಿದೆ. ಅದು ತಕ್ಷಣ ಕ್ಷಮೆ ಕೇಳಬೇಕು. ವಿಳಂಬಿಸಿದರೆ ಕಾರ್ಯಕ್ರಮ ಮುಂದುವರಿಯಲು ಯಾವುದೇ ‘ಲೈಫ್ ಲೈನ್’ ಇರುವುದಿಲ್ಲ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ನಿತೇಶ ರಾಣೆ ಅವರೂ ಆಗ್ರಹಿಸಿದ್ದರು.

‘ಅಗೌರವವನ್ನು ತೋರಿಸುವ ಯಾವುದೇ ಉದ್ದೇಶವಿರಲಿಲ್ಲ. ಅದು ಭಾವನೆಗಳಿಗೆ ನೋವುಂಟು ಮಾಡಿದ್ದರೆ ಅದಕ್ಕಾಗಿ ಕ್ಷಮೆ ಯಾಚಿಸುತ್ತೇನೆ ’ಎಂದು ಬಚ್ಚನ್ ಟ್ವೀಟಿಸಿದ್ದರೆ,ಕಾರ್ಯಕ್ರಮದ ನಿರ್ಮಾಪಕ-ನಿರ್ದೇಶಕ ಸಿದ್ಧಾರ್ಥ ಬಸು ಅವರು,ಅವಮಾನ ಅಥವಾ ಗೌರವ ಉದ್ದೇಶಪೂರ್ವಕವಾಗಿರಲಿಲ್ಲ. ಅಜಾಗರೂಕತೆಗಾಗಿ ಕ್ಷಮೆ ಯಾಚಿಸುತ್ತಿರುವುದಾಗಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X