Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಹೊಸಕೆರೆಹಳ್ಳಿ ಕೆರೆ ಕೋಡಿ...

ಬೆಂಗಳೂರು: ಹೊಸಕೆರೆಹಳ್ಳಿ ಕೆರೆ ಕೋಡಿ ಒಡೆದು ಮನೆಗಳಿಗೆ ನುಗ್ಗಿದ ನೀರು

ಕೆರೆಗಳ ಸಮಗ್ರ ಅಭಿವೃದ್ಧಿಗೆ ರೂಪುರೇಷೆ: ಮೇಯರ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ10 Nov 2019 11:05 PM IST
share

ಬೆಂಗಳೂರು, ನ.10: ನಗರದಲ್ಲಿ ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹೊಸಕೆರೆಹಳ್ಳಿ ಕೆರೆ ಕೋಡಿ ಒಡೆದ ಪರಿಣಾಮ ಸಮೀಪದ ರಸ್ತೆಗಳು ಹಾಗೂ ಮನೆಗಳಿಗೆ ನೀರು ನುಗ್ಗಿದೆ.

ಮಳೆಯಿಂದಾಗಿ ಹೊಸಕೆರೆಹಳ್ಳಿ ಒಂದು ಬದಿ ದಿಢೀರನೆ ಕುಸಿದಿದ್ದು, ಇದರಿಂದಾಗಿ ಸುಮೀಪದ ಪ್ರಮೋದ್ ಲೇಔಟ್, ಪುಷ್ಪಗಿರಿ ಲೇಔಟ್, ಬಡಾವಣೆಗಳ ಬಹಳಷ್ಟು ಮನೆಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ರಾತ್ರಿಯಿಡೀ ಜನರು ಜಾಗರಣೆ ಮಾಡಬೇಕಾದ ಸನ್ನಿವೇಶ ಎದುರಾಗಿತ್ತು. ಬಿಬಿಎಂಪಿ ಸಿಬ್ಬಂದಿಗಳು ಮನೆಗಳಲ್ಲಿ ತುಂಬಿದ್ದ ನೀರನ್ನು ತೆಗೆಯಲು ಶ್ರಮಿಸಿದರು.

ಮಳೆ ಅನಾಹುತ ಪ್ರದೇಶಗಳಿಗೆ ಶನಿವಾರ ರಾತ್ರಿಯೇ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ ಆಯುಕ್ತ ಅನಿಲ್‌ಕುಮಾರ್ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು. ನೈಸ್ ರಸ್ತೆ ನಿರ್ಮಾಣ ಸಂಬಂಧ ಬಿಡಿಎ ಹೊಸಕೆರೆಹಳ್ಳಿ ಬಳಿ ಕಾಂಪೌಂಡ್ ಹಾಕಿರುವುದರಿಂದ ಕೆರೆಯ ನೀರು ಹೊರಹೋಗಲಾಗದೆ ಕೋಡಿ ಒಡೆದು ಬಡಾವಣೆಗಳು ಜಲಾವೃತವಾಗಿವೆ. ಕೂಡಲೇ ಕಾಂಪೌಂಡ್ ತೆರವುಗೊಳಿಸುವಂತೆ ಬಿಡಿಎ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಮೇಯರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಹೊಸಕೆರೆ ಹಳ್ಳಿ ಕೆರೆ ಬದಿ ಕುಸಿದು ಕೆರೆ ನೀರು ಸಮೀಪದ ಬಡಾವಣೆಗಳಿಗೆ ನುಗ್ಗಲು ಕಾರಣವಾದ ಘಟನೆ ಮತ್ತು ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸೋಮವಾರ ಬಿಡಿಎ, ಬಿಬಿಎಂಪಿ, ಜಲಮಂಡಳಿ ಅಧಿಕಾರಿಗಳ ಸಭೆ ನಡೆಸಿ, ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು. ಕೆರೆ ನೀರು ಮತ್ತೇ ಪುಷ್ಪಗಿರಿ ಬಡಾವಣೆ, ಪ್ರಮೋದ್ ಲೇಔಟ್ ಪ್ರದೇಶಗಳಿಗೆ ಹರಿದು ಹೋಗ ದಂತೆ ತಾತ್ಕಾಲಿಕವಾಗಿ ತಡೆಗೋಡೆಯನ್ನು ನಿರ್ಮಿಸುವಂತೆ ಬಿಡಿಎ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಕರೆದ ಸಭೆಯಲ್ಲಿ ಬಿಡಿಎ ಸ್ವಾಧೀನದಲ್ಲಿರುವ ಕೆಲ ಕೆರೆಗಳನ್ನು ಬಿಬಿಎಂಪಿಗೆ ಹಸ್ತಾಂತರಗೊಳಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ಈ ಕೆರೆಯನ್ನು ಬಿಬಿಎಂಪಿಗೆ ವಶಕ್ಕೆ ಪಡೆದು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಮೇಯರ್ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ನಾಗರೀಕರು ಸಮಸ್ಯೆ ಮಹಾಪೂರವನ್ನೇ ಅವರ ಮುಂದಿಟ್ಟರು. ಕೆರೆ ಪ್ರದೇಶದಲ್ಲಿ ಜಲಾಮಂಡಳಿ ಸಿಬ್ಬಂದಿಗಳು ಪೈಪುಗಳನ್ನು ಅಳವಡಿಸುವಾಗ ಅಗೆದ ಪರಿಣಾಮವಾಗಿ ಕೆರೆಯ ಬದಿ ಕುಸಿದಿದೆ. ಹಾಗಾಗಿ ಮಳೆಯ ನೀರು, ರಸ್ತೆಗಳಿಗೆ, ಮನೆಗಳಿಗೆ ನುಗ್ಗಿದೆ ಎಂದು ಆರೋಪಿಸಿದರು. ಕೆರೆಯಲ್ಲಿ ಅನಗತ್ಯವಾಗಿ ಹೂಳು ತುಂಬಿದ್ದು, ಕೂಡಲೇ ಹೂಳನ್ನು ತೆರವುಗೊಳಿಸಿ, ಕೆರೆಯನ್ನು ಸ್ವಚ್ಛವಾಗಿರುವಂತೆ ಮಾಡಬೇಕು ಎಂದು ಮೇಯರ್ ಅವರನ್ನು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X