Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಸಂಭ್ರಮ, ಸಡಗರದ...

ಚಿಕ್ಕಮಗಳೂರು: ಸಂಭ್ರಮ, ಸಡಗರದ ಮೀಲಾದುನ್ನಬಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ10 Nov 2019 11:41 PM IST
share
ಚಿಕ್ಕಮಗಳೂರು: ಸಂಭ್ರಮ, ಸಡಗರದ ಮೀಲಾದುನ್ನಬಿ ಆಚರಣೆ

ಚಿಕ್ಕಮಗಳೂರು, ನ.10: ಜಿಲ್ಲಾದ್ಯಂತ ಮೀಲಾದುನ್ನಬಿಯನ್ನು ಮುಸ್ಲಿಮರು ಸಂಭ್ರಮ ಸಡಗರದಿಂದ ಆಚರಿಸಿದ್ದು, ರವಿವಾರ ನಗರದಲ್ಲಿ ಸಾವಿರಾರು ಮಂದಿ ಅದ್ದೂರಿ ಮೆರವಣಿಗೆ ನಡೆಸುವ ಮೂಲಕ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಹಬ್ಬದ ಅಂಗವಾಗಿ ಬೆಳಗ್ಗೆ ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ಬಳಿಕ ವಯೋವೃದ್ಧರಾದಿಯಾಗಿ ಪುಟಾಣಿ ಮಕ್ಕಳು, ಯುವಕರು ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ವೇಳೆ ಕೆಲವೆಡೆ ಹಿಂದು ಸಮುದಾಯದ ಜನರು ಶುಭಾಶಗಳನ್ನು ಕೋರುತ್ತಿದ್ದ ದೃಶ್ಯಗಳು ಕಂಡು ಬಂದವು.

ಹಬ್ಬದ ಅಂಗವಾಗಿ ನಗರದ ಎಂ.ಜಿ ರಸ್ತೆಯಲ್ಲಿ ಮೀಲಾದುನ್ನಬಿ ಮೆರವಣಿಗೆ ಹಿನ್ನೆಲೆಯಲ್ಲಿ ಎಂಜಿ, ರಸ್ತೆ ಹಾಗೂ ಅಂಡಛತ್ರದ ಬಡಾವಣೆಯ ಬೀದಿಗಳನ್ನು ಶನಿವಾರ ಸಂಜೆಯಿಂದಲೇ ಹಸಿರು ತೋರಣಗಳಿಂದ ಸಿಂಗರಿಸಿದ್ದು, ಸಾರ್ವಜನಿಕರ ಆಕರ್ಷಣೆಯಾಗಿತ್ತು. ರವಿವಾರ ಬೆಳಗ್ಗೆ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಮುಂಗಟ್ಟುಗಳು ನಗರದಲ್ಲಿ ಮುಚ್ಚಲ್ಪಟ್ಟು, ಎಲ್ಲರೂ ಹಬ್ಬದ ಸಡಗರದಲ್ಲಿ ಮುಳುಗಿದ್ದರು.

ಮಧ್ಯಾಹ್ನದ ನಂತರ ಅಂಡೆಛತ್ರದ ಮಸೀದಿಯಿಂದ ಮೀಲಾದುನ್ನಬಿ ಮೆರವಣಿಗೆ ಹೊರಡಲು ಸಿದ್ಧತೆ ಕೈಗೊಂಡಿದ್ದರಿಂದ ಜಿಲ್ಲಾಡಳಿತ ನಗರದ ಎಂ.ಜಿ ರಸ್ತೆ, ಐಜಿ ರಸ್ತೆ, ಹನುಮಂತಪ್ಪ ಸರ್ಕಲ್, ತೊಗರಿಹಂಕಲ್ ಸರ್ಕಲ್ ಮತ್ತಿತರ ರಸ್ತೆಗಳಲ್ಲಿ ಮಧ್ಯಾಹ್ನ 12ರಿಂದ ರಾತ್ರಿ 7ರವರೆಗೆ ವಾಹನ ಸಂಚಾರ ಹಾಗೂ ವಾಹನಗಳ ಪಾರ್ಕಿಂಗ್ ನಿಷೇಧಿಸಿತ್ತು. ಮಧ್ಯಾಹ್ನದ ನಗರದ ಅಂಡೆಛತ್ರದಿಂದ ಹೊರಟ ಮೀಲಾದುನ್ನಬಿ ಮೆರವಣಿಗೆ ಐಜಿ ರಸ್ತೆ, ಎಂಜಿ ರಸ್ತೆ ಮಾರ್ಗವಾಗಿ, ಬಸವನಹಳ್ಳಿ ರಸ್ತೆ, ಹನುಮಂತಪ್ಪ ಸರ್ಕಲ್‍ನಲ್ಲಿ ಅದ್ದೂರಿಯಾಗಿ ಸಾಗಿತು. ಮೆರವಣಿಗೆಯಲ್ಲಿ ನಗರದ ಸಾವಿರಾರು ಮುಸ್ಲಿಮರು ಭಾಗವಹಿಸುವ ಮೂಲಕ ಹಬ್ಬವನ್ನು ಸಂಭ್ರಮಿಸಿದರು. 

ಮೆರವಣಿಗೆಯಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರವಿದ್ದ ಬಾವುಟಗಳು ರಾರಾಜಿಸಿದ್ದವು. ಅಲ್ಲದೇ ಟಿಪ್ಪು ಸುಲ್ತಾನ್ ಪರ ಘೋಷಣೆಗಳು ಮುಗಿಲು ಮುಟ್ಟಿದ್ದವು. ಬಿಳಿ ಬಟ್ಟೆಯಲ್ಲಿ ರಚಿಸಲಾಗಿದ್ದ ಟಿಪ್ಪು ಸುಲ್ತಾನನ ಭಾವಚಿತ್ರ ಸಾರ್ವಜನಿಕರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಕೇಸರಿ, ಹಸಿರು, ಬಿಳಿ ಬಣ್ಣದ ತ್ರಿವರ್ಣ ಧ್ವಜಗಳು ಮೆರವಣಿಯಲ್ಲಿ ರಾರಾಜಿಸಿದವು. ಮೆರವಣಿಗೆ ಸಾಗಿದ ರಸ್ತೆಗಳ ಅಲ್ಲಲ್ಲಿ ಕೆಲವರು ಮೆರವಣಿಯಲ್ಲಿ ಭಾಗವಹಿಸಿದ್ದವರಿಗೆ ಹಾಗೂ ಸಾರ್ವಜನಿಕರಿಗೆ ತಂಪು ಪಾನೀಯ, ಹಣ್ಣು ಹಂಪಲನ್ನು ವಿತರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ಶ್ವೇತ ವಸ್ತ್ರಧಾರಿಗಳು, ಯುವಕರ ನೃತ್ಯ, ಟಿಪ್ಪು ಭಾವಚಿತ್ರ ಮೆರವಣಿಯ ಮೆರುಗನ್ನು ಹೆಚ್ಚಿಸಿದ್ದವು. ಸಂಘಟಕರು ಮೆರವಣಿಯನ್ನು ನಿಯಂತ್ರಿಸುತ್ತಿದ್ದರೆ, ನಗರದ ಸಾರ್ವಜನಿಕರು ಹಾಗೂ ಮುಸ್ಲಿಂ ಸಮುದಾಯದ ಮಹಿಳೆಯರು ರಸ್ತೆಯ ಇಕ್ಕೆಲಗಳಲ್ಲಿ, ಕಟ್ಟಡಗಳ ಮೇಲೆ ನಿಂತು ಮೆರವಣಿಗೆಯ ನೋಟವನ್ನು ಕಣ್ತುಂಬಿಕೊಳ್ಳುತ್ತಿದ್ದ ದೃಶ್ಯಗಳೂ ಸಾಮಾನ್ಯವಾಗಿದ್ದವು.

ಮೀಲಾದುನ್ನಬಿ ಮೆರವಣಿಗೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಾವಿರಾರು ಪೊಲೀಸರನ್ನು ಸೂಕ್ಷ್ಮ ಪ್ರದೇಶಗಳು ಹಾಗೂ ರಸ್ತೆಯುದ್ದಕ್ಕೂ ಭದ್ರತೆಗೆ ನಿಯೋಜಿಸಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X