Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಶಂಕರ್ ನಾಗ್ ನೆನಪಿನಲ್ಲಿ ಮಾಲ್ಗುಡಿ ಡೇಸ್...

ಶಂಕರ್ ನಾಗ್ ನೆನಪಿನಲ್ಲಿ ಮಾಲ್ಗುಡಿ ಡೇಸ್ ಚಿತ್ರತಂಡ

ವಾರ್ತಾಭಾರತಿವಾರ್ತಾಭಾರತಿ11 Nov 2019 10:05 PM IST
share
ಶಂಕರ್ ನಾಗ್ ನೆನಪಿನಲ್ಲಿ ಮಾಲ್ಗುಡಿ ಡೇಸ್ ಚಿತ್ರತಂಡ

ಈ ಸಂದರ್ಭದಲ್ಲಿ ಶಂಕರ್ ನಾಗ್ ಬದುಕಿ ಇರುತ್ತಿದ್ದರೆ 65ವರ್ಷ ತುಂಬುತ್ತಿತ್ತು. ಆದರೆ ಅವರಿಲ್ಲ, ಅವರ ಚಿತ್ರಗಳಿವೆ, ಅವರ ಕನಸುಗಳಿವೆ. ಜೊತೆಗೆ ಅವರ ನೆನಪುಗಳು ನಮ್ಮ ನಡುವೆ ಇದೆ. ಶಂಕರ್ ನಾಗ್ ಅಂದಾಗ ನೂರಾರು ವಿಷಯಗಳು ಕಣ್ಣ ಮುಂದೆ ಬರುತ್ತದೆ. ಆದರೆ ಅದರಲ್ಲಿ ಪ್ರಮುಖವಾಗಿ ಕಾಣ ಸಿಗುವುದು ಮಾಲ್ಗುಡಿ ಡೇಸ್ ಅನ್ನುವ ಕೃತಿ. ಕೃತಿ ಆಗಿದ್ದರೆ ಇವತ್ತಿಗೆ ಇಷ್ಟು ಜನಜನಿತವಾಗಿರುತ್ತಿರಲಿಲ್ಲ. ಆ ಕೃತಿಗೆ ಒಂದು ದೃಶ್ಯ ರೂಪ ಕೊಟ್ಟು ಅದನ್ನು ಈಡೀ ಜಗತ್ತು ನೋಡುವಂತೆ ಮಾಡಿದವರು ಶಂಕರ್‍ನಾಗ್. ಧಾರವಾಹಿ ಬಿಡುಗಡೆ ಆಗಿ 32 ವರುಷ ಸಂದರೂ ಜನ ಅದನ್ನು ಸ್ಮರಿಸುತ್ತಾರೆ. ಅಂದರೆ ಅದು ಶಂಕರ್‍ನಾಗ್ ಅನ್ನುವ ದೃಶ್ಯ ನಿರ್ದೇಶಕನೊಳಗಿದ್ದ ತಾಂತ್ರಿಕ ಶಕ್ತಿ.

ಇದೀಗ ಅದೇ ಶೀರ್ಷಿಕೆಯಿಂದ ವಿಜಯ ರಾಘವೇಂದ್ರರವರು ಮುಖ್ಯ ಭೂಮಿಕೆಯಲ್ಲಿ ಇರುವ ಸಿನಿಮಾ ಬರುತ್ತಿರುವುದು ನಮಗೆಲ್ಲಾ ತಿಳಿದಿದೆ. ಕಳೆದ ಬಾರಿ ಚಿತ್ರತಂಡ ಚಿತ್ರೀಕರಣ ಮುಗಿಸಿ ಮೊದಲ ಪೋಸ್ಟರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡ ಕೊಂಡಾಡುವಂತೆ ಮಾಡಿತ್ತು. ಮೊದಲ ಪೋಸ್ಟರ್ ನಲ್ಲಿ ವಿಜಯ ರಾಘವೇಂದ್ರರವರ ಗೆಟಪ್ ವಿಭಿನ್ನವಾಗಿದ್ದು 65-70 ಆಸುಪಾಸಿನ ಸಾಹಿತಿ ಲಕ್ಷ್ಮೀನಾರಾಯಣ ಮಾಲ್ಗಡಿ ಆಗಿ ಕಾಣಿಸಿಕೊಂಡಿದ್ದಾರೆ. ಥೇಟ್ ವಯೋವೃದ್ಧನಂತೆ ಕಾಣುತ್ತಿದ್ದು ವಿಜಯ ರಾಘವೇಂದ್ರರವರ ಸಿನಿ ಜೀವನದಲ್ಲಿ ದೊಡ್ಡ ತಿರುವು ನೀಡುವ ಚಿತ್ರ ಇದಾಗಲಿದೆ, ಅನ್ನುವ ಮಾತುಗಳು ಹರಿದಾಡಲು ಶುರುವಾದವು. ಇದೀಗ ಮಾಲ್ಗಡಿ ಡೇಸ್ ಚಿತ್ರ ತಂಡ ಅವರ ಹುಟ್ಟು ಹಬ್ಬದ ಈ ಸಂದರ್ಭದಲ್ಲಿ ಸಿನಿಮಾವನ್ನು ಶಂಕರ್ ನಾಗ್ ವರಿಗೆ ಅರ್ಪಿಸಿದೆ. ಈ ಮೂಲಕ ಶಂಕರ್ ನಾಗ್‍ ರವರಿಗೆ ಅವರ 65ನೇ ಹುಟ್ಟು ಹಬ್ಬದ ಈ ಸಂದರ್ಭದಲ್ಲಿ ಗೌರವವನ್ನು ಸೂಚಿಸಿದೆ.

ಮಾಲ್ಗುಡಿ ಡೇಸ್ ಜನಜನಿತವಾಗಲು ಶಂಕರ್‍ನಾಗ್ ಕಾರಣ ಹಾಗಾಗಿ ಈ ಸಿನಿಮಾದ ಮೂಲಕ ನಾವು ಅವರನ್ನು ನೆನೆಯುತ್ತಿದ್ದೇವೆ ಎಂದಿದೆ ಚಿತ್ರ ತಂಡ.

ಹೊಸ ಭರವಸೆ ಮೂಡಿಸಿರುವ ಈ ಚಿತ್ರ ಗೆಲುವಿನ ಪತಾಕೆಯನ್ನು ಹಾರಿಸಿ ಆ ಮೂಲಕ ಶಂಕರ್‍ನಾಗ್‍ರವರ ಕನಸು ಮತ್ತೆ ಜೀವಂತ ಇರುವಂತೆ ಆಗಲಿ ಎನ್ನುವುದೇ ನಮ್ಮ ಆಶಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X