ಮಲ್ಲಂದೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ
![ಮಲ್ಲಂದೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಮಲ್ಲಂದೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ](https://www.varthabharati.in/sites/default/files/images/articles/2019/11/12/218941-1573543718.gif)
ಚಿಕ್ಕಮಗಳೂರು, ನ.12: ದನ ಮೇಯಿಸಲು ಕಾಡಿಗೆ ತೆರಳಿದ್ದ ವ್ಯಕ್ತಿಯೋರ್ವ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ತಾಲೂಕಿನ ನಿಡಗೋಡು ಸಮೀಪದ ಮಲ್ಲಂದೂರು ಅರಣ್ಯ ವಲಯದಲ್ಲಿ ನಡೆದಿದೆ
ಮೃತರನ್ನು ರಂಗಯ್ಯ (60) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story