Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ತಾನ: 1,500ಕ್ಕೂ ಹೆಚ್ಚು ವಲಸೆ...

ರಾಜಸ್ತಾನ: 1,500ಕ್ಕೂ ಹೆಚ್ಚು ವಲಸೆ ಹಕ್ಕಿಗಳ ಸಾವು

ವಾರ್ತಾಭಾರತಿವಾರ್ತಾಭಾರತಿ12 Nov 2019 8:02 PM IST
share
ರಾಜಸ್ತಾನ: 1,500ಕ್ಕೂ ಹೆಚ್ಚು ವಲಸೆ ಹಕ್ಕಿಗಳ ಸಾವು

ಜೈಪುರ, ನ.12: ಜೈಪುರದ ಬಳಿಯಿರುವ ವಿಶ್ವದ ಅತೀ ದೊಡ್ಡ ಒಳನಾಡಿನ ಉಪ್ಪುನೀರಿನ ಜಲಾಶಯ ಸಂಭಾರ್ ಜಲಾಶಯದ ಸುತ್ತಮುತ್ತ ಸಾವಿರಾರು ವಲಸೆ ಹಕ್ಕಿಗಳ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಲಮಾಲಿನ್ಯ ಈ ಘಟನೆಗೆ ಮುಖ್ಯ ಕಾರಣವಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದು ಮೃತಹಕ್ಕಿಗಳ ಕರುಳಿನ ಪರೀಕ್ಷೆಯ ವರದಿಯಲ್ಲಿ ಕಾರಣ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ ಸುಮಾರು 5000 ಹಕ್ಕಿಗಳು ಸಾವನ್ನಪ್ಪಿವೆ. ಜಲಾಶಯದ 13 ಕಿ.ಮೀ ಉದ್ದದ ದಂಡೆಯುದ್ದಕ್ಕೂ ವಿವಿಧ ವಲಸೆ ಹಕ್ಕಿಗಳ ಮೃತದೇಹ ರಾಶಿಬಿದ್ದಿವೆ. ನನ್ನ ಅಂದಾಜಿನಂತೆ ಸುಮಾರು 5000 ಹಕ್ಕಿಗಳು ಮೃತಪಟ್ಟಿವೆ ಎಂದು ಸ್ಥಳೀಯ ಪಕ್ಷಿ ವೀಕ್ಷಕರಾದ ಅಭಿನವ್ ವೈಶ್ಣವ್, ಕಿಶನ್ ಮೀನಾ ಮತ್ತು ಪವನ್ ಮೋದಿ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಈ ಪ್ರದೇಶದಲ್ಲಿ ಭಾರೀ ಗಾಳೆಮಳೆಯಾಗಿದ್ದು ಇದರಿಂದ ಹಕ್ಕಿಗಳು ಸತ್ತಿರಬಹುದು. 10 ಜಾತಿಯ ಸುಮಾರು 1,500 ಹಕ್ಕಿಗಳು ಮೃತಪಟ್ಟಿವೆ ಎಂದು ಅಂದಾಜಿಸಲಾಗಿದೆ. ವೈರಲ್ ಸೋಂಕು ಅಥವಾ ಜಲಮಾಲಿನ್ಯ ಸೇರಿದಂತೆ ಇತರ ಸಾಧ್ಯತೆಗಳನ್ನೂ ಪರಿಶೀಲಿಸಲಾಗುತ್ತಿದೆ .ಈ ಜಲಾಶಯಕ್ಕೆ ಪ್ರತಿ ವರ್ಷ ಸುಮಾರು 2ರಿಂದ 3 ಲಕ್ಷದಷ್ಟು ಹಕ್ಕಿಗಳು ವಲಸೆ ಬರುತ್ತಿದ್ದು ಇದರಲ್ಲಿ ಸುಮಾರು 50000 ಫ್ಲೆಮಿಂಗೊ, 1 ಲಕ್ಷದಷ್ಟು ವೇಡರ್ ಹಕ್ಕಿಗಳಾಗಿವೆ ಎಂದು ಅರಣ್ಯ ಪ್ರದೇಶಾಧಿಕಾರಿ ರಾಜೇಂದ್ರ ಜಾಖಡ್‌ಹೇಳಿದ್ದಾರೆ. ಹಕ್ಕಿಗಳ ಮೃತದೇಹವನ್ನು ಮತ್ತು ನೀರಿನ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಭೋಪಾಲಕ್ಕೆ ರವಾನಿಸಲಾಗಿದೆ.

ಹಕ್ಕಿಜ್ವರದ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ ಎಂದು ಪಶುವೈದ್ಯ ಅಶೋಕ್ ರಾವ್ ಅಭಿಪ್ರಾಯಪಟ್ಟಿದ್ದಾರೆ. ಸೋಂಕು ರೋಗದಿಂದ ಹಕ್ಕಿಗಳು ಸಾವನ್ನಪ್ಪಿರುವ ಸಾಧ್ಯತೆ ಕಡಿಮೆ. ಪ್ರಯೋಗಾಲಯದ ವರದಿಯಿಂದ ಕಾರಣ ಸ್ಪಷ್ಟವಾಗಲಿದೆ. ಬಳಿಕ ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯದ ರೋಗನಿರ್ಣಯ ಕೇಂದ್ರದ ಜಂಟಿ ನಿರ್ದೇಶಕ ಅಶೋಕ್ ಶರ್ಮ ಹೇಳಿದ್ದಾರೆ. ಸುಮಾರು 700 ಹಕ್ಕಿಗಳ ಮೃತದೇಹವನ್ನು ಹಳ್ಳತೋಡಿ ಹುಗಿಯಲಾಗಿದೆ. ಇನ್ನಷ್ಟು ಮೃತದೇಹ ಜಲಾಶಯದ ದಂಡೆಯುದ್ದಕ್ಕೂ ಬಿದ್ದಿದ್ದು ಕೆಸರು ಇರುವ ಕಾರಣ ಅವುಗಳನ್ನು ಅಲ್ಲಿಂದ ಮೇಲೆತ್ತಲು ಅರಣ್ಯ ಇಲಾಖೆಯ ಸಿಬಂದಿಗಳು ಹಿಂಜರಿಯುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X