ಮನಪಾ ಚುನಾವಣೆ: ಶಾಂತಿಯುತ ಮತದಾನ; ಡಿಸಿ ಕೃತಜ್ಞತೆ
ಮಂಗಳೂರು, ನ.12: ಯಾವುದೇ ಗೊಂದಲಗಳಿಲ್ಲದೆ, ಶಾಂತಿಯುತ, ಮುಕ್ತ ಹಾಗೂ ನ್ಯಾಯಸಮ್ಮತ ಮತ್ತು ಪರಿಸರ ಸ್ನೇಹಿ ಚುನಾವಣೆ ನಡೆಯಲು ಸಹಕರಿಸಿದ ಮತದಾರರಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಸಿಂಧೂ ಬಿ. ರೂಪೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.
ಚುನಾವಣಾ ಸಿದ್ಧತೆಗಳಿಗೆ ಕಾಲಾವಕಾಶ ಕಡಿಮೆ ಇದ್ದರೂ, ಯಾವುದೇ ಲೋಪಗಳಿಲ್ಲದೆ ಚುನಾವಣೆ ನಡೆದಿದೆ. ಇದಕ್ಕಾಗಿ ತೊಡಗಿಸಿಕೊಂಡ ಎಲ್ಲ ಅಧಿಕಾರಿ, ಸಿಬ್ಬಂದಿ, ಪೊಲೀಸರಿಗೆ ಧನ್ಯವಾದ ಸಲ್ಲಿಸಿರುವ ಅವರು, ಚುನಾವಣೆ ಸುಗಮವಾಗಲು ಸಹಕರಿಸಿದ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
Next Story