Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಪ.ಜಾತಿ, ಪ.ಪಂಗಡದ...

ಬೆಳ್ತಂಗಡಿ: ಪ.ಜಾತಿ, ಪ.ಪಂಗಡದ ಕುಂದುಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ12 Nov 2019 9:39 PM IST
share

ಬೆಳ್ತಂಗಡಿ: ವೀಲ್ ನಾಮೆಯ ಮೂಲಕವಾಗಿ ಹಾಗೂ ಸಾಮನ್ಯ ಜಿ.ಪಿ.ಎ ಮೂಲಕವಾಗಿ ದಲಿರ ಜಮೀನನ್ನು ಕಬಳಿಸುವ ಕಾರ್ಯ ತಲೂಕಿನಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದು ಇದರ ಬಗ್ಗೆ ಸಮಗ್ರವಾದ ತನಿಖೆ ನಡಸಿ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಒತ್ತಯಿಸಲಾಯಿತು. 

ಬೆಳ್ತಂಗಡಿನ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಸಂಜೀವ ಆರ್ ಇದೊಂದು ವ್ಯವಸ್ಥಿತ ಧಾಳವಾಗಿದೆ. ತಾಲೂಕಿನಲ್ಲಿ ಇಂತಹ  ಪ್ರಕರಣಗಳು ಸಾಕಷ್ಟು ಇದೆ. ಅತ್ಯಂತ ವ್ಯವಸ್ಥಿತವಾಗಿ ದಲಿತರ ಜಮೀನನ್ನು ಕಬಳಿಸುವ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಸಭೆಯಲ್ಲಿದ್ದ ಚಂದು ಎಲ್, ಬಿ ಕೆ ವಸಂತ ಹಾಗೂ ಇತರೆ ಹೆಚ್ಚಿನ ಸದಸ್ಯರು ಧ್ವನಿಗೂಡಿಸಿ ತಾಲೂಕಿನಲ್ಲಿ ನಡೆದಿರುವ ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಧ್ವನಿಗೂಡಿಸಿ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ್ ಅವರು ತಾಲೂಕಿನ ಕಲ್ಲೇರಿಯಲ್ಲಿ ದಲಿತರ ಜಮೀನನ್ನು ಅತ್ಯಂತ ವ್ಯವಸ್ಥಿತವಾಗಿ ಕಬಳಿಸಲಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿ ತಹಶೀಲ್ದಾರರು ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಹಾಗೂ ಬೆಳ್ತಂಗಡಿ ಸಬ್ ರಿಜಿಸ್ಟಾರ್ ಕಚೇರಿಗೆ ದಲಿರ ಭೂಮಿಯ ಪರಾಬಾರೆಯ ಸಂದರ್ಭದಲ್ಲಿ ಸೂಕ್ತವಾದ ಕ್ರಮಗಳನ್ನು ವಹಿಸುವಂತೆ ಸೂಚಿಸುವದಾಗಿ ತಿಳಿಸಿದರು.

ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನು ನೀಡಿಕೆಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಶೇಖರ ಲಾಯಿಲ ಗಮನ ಸೆಳೆದರು. ಎಲ್ಲೆಡೆ ದಲಿತರಿಗೆ ಮೀಸಲಿರಿಸಲಾಗಿರುವ ಜಮೀನು ಅತಿಕ್ರಮಣವಾಗಿದೆ. ಆದರೆ ಅದರ ತೆರವಿಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದರು. ಡಿಸಿ ಮನ್ನಾ  ಜಾಗ ವಿತರಣೆಗಾಗಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆಯಾದರೂ ಈ ವರೆಗೆ ಅದರ ಸಭೆಯೇ ನಡೆದಿಲ್ಲ. ದಲಿತರಿಗೆ ಜಾಗ ನೀಡುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಜಿ.ಪಂ ಸದಸ್ಯ ಶೇಖರ ಕುಕ್ಕೇಡಿ ಆರೋಪಿಸಿದರು. ಈ ಬಗ್ಗೆ ಸಭೆಯಲ್ಲಿ ಎಲ್ಲರೂ ಧ್ವನಿಗೂಡಿಸಿದರು ಇದಕ್ಕುತ್ತರಿಸಿದ ಅಧಿಕಾರಿಗಳು ಇದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ಅಂಗಡಿ ಕೋಣೆಗಳ ಏಲಂ ಪ್ರಕ್ರಿಯೆಯಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ. ದಲಿತರಿಗೆ ಮೀಸಲಿರಿಸಲಾಗಿರುವ ಅಂಗಡಿಗಳು ಇತರರ ಪಾಲಾಗುತ್ತಿದೆ ಇದು ನಿಲ್ಲಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಈ ಬಗ್ಗೆ ಮಾತನಾಡಿದ ಶೇಖರ ಕುಕ್ಕೇಡಿ, ಬಿಕೆ ವಸಂತ ಹಾಗೂ ಇತರರು ಸಾಮಾನ್ಯರಿಗಿರುವ ಇಎಂಡಿ ಯನ್ನು ದಲಿತರಿಗೂ ವಿಧಿಸಿ ಯಾರೂ ಅಂಗಡಿಗಳನ್ನು ಪಡೆಯದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಶಿರ್ಲಾಲಿನಿಂದ ಬರುವ ಸರಕಾರಿ ಬಸ್ಸುಗಳು ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಾರದಿರುವುದರಿಂದ ಸಮಸ್ಯೆಗಳಾಗುತ್ತಿದೆ. ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. 

ಸಭೆಯಲ್ಲಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾ. ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಂ, ತಾಲೂಕು ಸಮಾಜಕಲ್ಯಾಣಾಧಿಕಾರಿ ಹೇಮಚಂದ್ರ, ಜಿ.ಪಂ ಸದಸ್ಯರುಗಳಾದ ಶೇಖರ ಕುಕ್ಕೇಡಿ, ಕೊರಗಪ್ಪ ನಾಯ್ಕ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

ಕುದುರೇಮುಖ ರಾಷ್ಟ್ರೀಯ ಉದ್ಯಾನವನದ ಒಳಗಿರುವ ನಿವಾಸಿಗಳಿಗೆ ಇನ್ನೂ ವಿಧ್ಯುತ್ ಸಂಪರ್ಕ ಸರಿಯಾಗಿ ತಲುಪಿಲ್ಲ. ಅವರು ಇನ್ನೂ ಸೀಮೆ ಎಣ್ಣೆ ದೀಪದ ಅಡಿಯಲ್ಲಿ ಬದುಕನ್ನು ನಡೆಸುತ್ತಿದ್ದಾರೆ. ಆದರೆ ಇದೀಗ ಸರಕಾರದ ನೀತಿಯಿಂದಾಗಿ ಅವರಿಗೆ ಸೀಮೆ ಎಣ್ಣೆಯೂ ಇಲ್ಲವಾಗಿದ, ಇದರಿಂದಾಗಿ ಈ ಕುಟುಂಬಗಳು ಕತ್ತಲೆಯಲ್ಲಿ ವಾಸಿಸುವಂತಾಗಿದೆ. ಸರಕಾರ ಕೂಡಲೇ ಇವರಿಗೆ ಸೀಮೆ ಎಣ್ಣೆಯ ವ್ಯವಸ್ಥೆಯನ್ನು ಮಾಡಬೇಕು 
ಶೇಖರ ಲಾಯಿಲ, ದಲಿತ ಮುಖಂಡರು   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X