Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡ ಕಲಿಸದ 90 ಶಾಲೆಗಳಿಗೆ ನೋಟಿಸ್...

ಕನ್ನಡ ಕಲಿಸದ 90 ಶಾಲೆಗಳಿಗೆ ನೋಟಿಸ್ ಜಾರಿ: ಶಿಕ್ಷಣ ಸಚಿವ ಸುರೇಶ್‌ ಕುಮಾರ್

ವಾರ್ತಾಭಾರತಿವಾರ್ತಾಭಾರತಿ13 Nov 2019 7:42 PM IST
share
ಕನ್ನಡ ಕಲಿಸದ 90 ಶಾಲೆಗಳಿಗೆ ನೋಟಿಸ್ ಜಾರಿ: ಶಿಕ್ಷಣ ಸಚಿವ ಸುರೇಶ್‌ ಕುಮಾರ್

ಬೆಂಗಳೂರು, ನ.13: ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೆ ದ್ವಿತೀಯ ಭಾಷೆಯಾಗಿ ಕಲಿಸದ ಸುಮಾರು 90 ಶಾಲೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಪರಿಶೀಲಿಸಿ ಆ ಶಾಲೆಗಳ ಮಾನ್ಯತೆ ರದ್ದು ಪಡಿಸುವುದರ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್ ತಿಳಿಸಿದ್ದಾರೆ.

ಬುಧವಾರ ಸಮಗ್ರ ಶಿಕ್ಷಣ ಅಭಿಯಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಕಲಿಕಾ ಕಾಯ್ದೆಯ ಪ್ರಕಾರ ಸಿಬಿಎಸ್ಸಿ, ಐಸಿಎಸ್ಸಿ ಸೇರಿದಂತೆ ಎಲ್ಲ ರೀತಿಯ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದು ಕಡ್ಡಾಯವಾಗಿದೆ. ಇದರಲ್ಲಿ ಯಾವುದೇ ರಾಜಿಯಿಲ್ಲವೆಂದು ತಿಳಿಸಿದರು.

ಬೆಂಗಳೂರಿನಲ್ಲಿ ಕನ್ನಡ ಭಾಷೆಯನ್ನು ಕಲಿಸುವುದಕ್ಕೆ ವಿಫಲವಾಗಿರುವ 44 ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ಹಾಗೂ ಈ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಕೊಡುವಂತೆ ಡಿಡಿಪಿಐಗಳಿಗೆ ಸೂಚಿಸಲಾಗಿದೆ. ಈ ವರದಿಯನ್ನು ನೋಡಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿರುವ ಎಲ್ಲ ವಿಧದ ಶಾಲೆಗಳಲ್ಲೂ ಕನ್ನಡವನ್ನು ಕಲಿಸಲಾಗುತ್ತಿದೆಯೇ, ಯಾವ ಸ್ವರೂಪದಲ್ಲಿ ಕಲಿಸಲಾಗುತ್ತಿದೆ ಎಂಬುದರ ಕುರಿತು ಪರಿಶೀಲನೆ ನಡೆಸುವುದಕ್ಕಾಗಿ ನನ್ನ ಅಧ್ಯಕ್ಷತೆಯಲ್ಲಿ ಉನ್ನತ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಇಲಾಖೆಯ ಆಯುಕ್ತರು, ಅಧಿಕಾರಿಗಳು ಇರುತ್ತಾರೆ. ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಕೆಲವು ಶಾಲೆಗಳಲ್ಲಿ ಕೇವಲ ನೆಪಕ್ಕೆ ಮಾತ್ರ ಕನ್ನಡ ಕಲಿಸುವುದರ ಬಗ್ಗೆ ಮಾಹಿತಿ ಇದೆ. ಇತಿಹಾಸ ಶಿಕ್ಷಕರೇ ಕನ್ನಡವನ್ನು ಕಲಿಸಲಾಗುತ್ತಿದೆ. ಇದು ಶಿಕ್ಷಣ ಕಾಯ್ದೆಯ ಪ್ರಕಾರ ಅಪರಾಧವಾಗಿದೆ. ಹೀಗಾಗಿ ಉನ್ನತ ಪರಿಶೀಲನಾ ಸಮಿತಿ ಪರಿಶೀಲನೆ ನಡೆಸಲಿದೆ. ಎಲ್ಲ ಜಿಲ್ಲೆಗಳಲ್ಲಿರುವ ಕೇಂದ್ರಾಡಳಿತ ಶಾಲೆಗಳಲ್ಲಿ ಕನ್ನಡವನ್ನು ಕಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ಅವರು ಹೇಳಿದರು.

ಸಂವಿಧಾನ ದಿನಾಚರಣೆ: ಸರಕಾರದ ಎಲ್ಲ ಶಾಲೆಗಳಲ್ಲೂ ನ.26ರಂದು ಸಂವಿಧಾನದ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಪ್ರತಿ ಶಾಲೆಯಲ್ಲಿ ಬೆಳಗ್ಗೆ ಪ್ರಾರ್ಥನೆಯ ವೇಳೆ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಬೇಕು. ಹಾಗೂ ಅದರ ಒಂದು ಪ್ರತಿಯನ್ನು ಶಾಲೆ ಆವರಣದಲ್ಲಿ ಎಲ್ಲರಿಗೂ ಕಾಣುವಂತೆ ಅಂಟಿಸಲಾಗುವುದು ಎಂದು ಅವರು ಹೇಳಿದರು.

ನ.20ರಿಂದ ಶಾಲೆಗಳ ಗಣತಿ ಆರಂಭ

ಕೇಂದ್ರ ಸರಕಾರ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಸಬಲೀಕರಣಕ್ಕಾಗಿ ನ.20ರಿಂದ ಡಿ.20ರವರೆಗೆ ದೇಶದ ಒಟ್ಟು 11.71ಲಕ್ಷ ಶಾಲೆಗಳ ಗಣತಿ ಕಾರ್ಯವನ್ನು ಆರಂಭಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 55,965 ಶಾಲೆಗಳ ಗಣತಿಕಾರ್ಯ ಆರಂಭವಾಗಲಿದೆ. ಸದ್ಯ ಶಾಲೆಗಳ ಮಾಹಿತಿ ಇಲಾಖೆಯ ಬಳಿಯಿದೆ. ಆದರೆ, ಅದು ಅರ್ಧ ಸತ್ಯದಿಂದ ಕೂಡಿದೆ. ಒಂದು ಶಾಲೆಯಲ್ಲಿ ಶೌಚಾಲಯ ಇದ್ದರೆ ಸಾಲದು, ಅದು ಹುಡುಗ-ಹುಡುಗಿಯರಿಗೆ ಪ್ರತ್ಯೇಕವಾಗಿ ಇದೆಯೇ, ನೀರಿನ ಸೌಲಭ್ಯ ಹೇಗಿದೆ. ಹೀಗೆ ಶಾಲೆಗಳ ಮೂಲಭೂತ ಅಗತ್ಯಗಳನ್ನು ಒಳಗೊಂಡ ಸುಮಾರು 65 ಪ್ರಶ್ನೆಗಳ ಅರ್ಜಿಯನ್ನು ಸಿದ್ದಪಡಿಸಲಾಗಿದೆ. ಶಾಲೆಗಳ ಗಣತಿ ಕಾರ್ಯಕ್ಕೆ ಶಾಲೆಯ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ, ಡಯಟ್ ಸಿಬ್ಬಂದಿಗಳು ಹಾಗೂ ಅಲ್ಲಿ ಕಲಿಯುತ್ತಿರುವ ತರಬೇತಿ ನಿರತ ಶಿಕ್ಷಕರು, ಬಿಆರ್‌ಪಿ, ಸಿಆರ್‌ಪಿ ಅಧಿಕಾರಿಗಳನ್ನು ಒಳಗೊಂಡ 3,731 ತಂಡವನ್ನು ರಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X