Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ತೀರ್ಪಿನಿಂದ ಬಿಜೆಪಿಯ ‘ಆಪರೇಶನ್...

ಸುಪ್ರೀಂ ತೀರ್ಪಿನಿಂದ ಬಿಜೆಪಿಯ ‘ಆಪರೇಶನ್ ಕಮಲ’ ಬಹಿರಂಗ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ13 Nov 2019 9:00 PM IST
share
ಸುಪ್ರೀಂ ತೀರ್ಪಿನಿಂದ ಬಿಜೆಪಿಯ ‘ಆಪರೇಶನ್ ಕಮಲ’ ಬಹಿರಂಗ: ಕಾಂಗ್ರೆಸ್

ಹೊಸದಿಲ್ಲಿ, ನ. 13: ಕರ್ನಾಟಕದಲ್ಲಿರುವ ಯಡಿಯೂರಪ್ಪ ಸರಕಾರವನ್ನು ವಜಾಗೊಳಿಸುವಂತೆ ಬುಧವಾರ ಆಗ್ರಹಿಸಿರುವ ಕಾಂಗ್ರೆಸ್, 17 ಕಾಂಗ್ರೆಸ್, ಜೆಡಿಎಸ್ ಶಾಸಕರ ಅನರ್ಹತೆ ಎತ್ತಿ ಹಿಡಿದಿರುವ ಹಾಗೂ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವ ಸುಪ್ರೀಂ ಕೋರ್ಟ್‌ನ ನಿರ್ಧಾರ ರಾಜ್ಯದಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ವನ್ನು ಬಹಿರಂಗಪಡಿಸಿದೆ ಎಂದಿದೆ.

ಕರ್ನಾಟಕದ 15ನೇ ವಿಧಾನ ಸಭೆಯ ಅಂತ್ಯದ ವರೆಗೆ ಶಾಸಕರನ್ನು ಅನರ್ಹಗೊಳಿಸಿದ ಆಗಿನ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ನೀಡಿದ ಆದೇಶದ ಒಂದು ಭಾಗವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ, ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಅವರು ಆಯ್ಕೆಯಾದರೆ ಮತ್ತೆ ಶಾಸಕರಾಗಬಹುದು ಎಂದು ಹೇಳಿದೆ.

 ‘‘ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕದಲ್ಲಿ ಬಿಜೆಪಿಯ ಆಪರೇಷನ್ ಕಮಲವನ್ನು ಬಹಿರಂಗಗೊಳಿಸಿದೆ. ಸಂವಿಧಾನ ಹಾಗೂ ಕಾನೂನು ವಿಚಾರದಲ್ಲಿ ಯಡಿಯೂರಪ್ಪ ಅವರದ್ದು ಕಾನೂನುಬಾಹಿರ ಸರಕಾರ. ಆದುದರಿಂದ ಆ ಸರಕಾರವನ್ನು ಕೂಡಲೇ ವಜಾಗೊಳಿಸಬೇಕು’’ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.

ಸಾರ್ವಜನಿಕ ಅಭಿಪ್ರಾಯಗಳು ಹಾಗೂ ಪ್ರಜಾಸತ್ತಾತ್ಮಕ ವೌಲ್ಯಗಳು ಯಡಿಯೂರಪ್ಪ ಅವರ ಕಾನೂನುಬಾಹಿರ ಸರಕಾರವನ್ನು ವಜಾಗೊಳಿಸಬೇಕು ಎಂದು ಮಾತ್ರ ಆಗ್ರಹಿಸುತ್ತಿಲ್ಲ. ಬದಲಾಗಿ ಶಾಸಕರ ಹಣ ಬಲದ ಆಧಾರದಲ್ಲಿ ಚುನಾಯಿತ ಸರಕಾರವನ್ನು ಕೇಳಗಿಳಿಸುವಲ್ಲಿನ ಬಿಜೆಪಿ ಪಿತೂರಿಯ ಬಗ್ಗೆ ಕೂಡ ತನಿಖೆ ನಡೆಸಬೇಕು ಎಂದು ಬೇಡಿಕೆ ಇರಿಸಿದೆ ಎಂದು ಸುರ್ಜೇವಾಲ ಹೇಳಿದರು.

 “ಯಡಿಯೂರಪ್ಪ ಅವರ ಅಡಿಯೊದ ತನಿಖೆ ನಡೆಸಬೇಕಾದ ಅಗತ್ಯ ಇದೆ. ಈ ಎಲ್ಲ ಕಪ್ಪು ಹಣ ಎಲ್ಲಿಂದ ಬಂತು ? ಇದರಲ್ಲಿ ಬಿಜೆಪಿ ನಾಯಕತ್ವದ ಪಾತ್ರ ಏನು ?” ಎಂದು ಅವರು ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಹಣ ಬಲದಿಂದ ನಾಚಿಕೆಯಿಲ್ಲದ ಆಟದ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಜೆಪಿ ನಾಶಪಡಿಸುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಸ್ಪೀಕರ್ ಅವರ ನಿಲುವನ್ನು ಶೇ. 95ರಷ್ಟು ಸಮರ್ಥಿಸುತ್ತದೆ. ಆಪರೇಶನ್ ಕಮಲ ದೇಶದ ಎಲ್ಲೆಡೆ ಪ್ರತಿ ದಿನ ನಡೆಯುತ್ತದೆ ಎಂಬುದನ್ನು ಇದು ತೋರಿಸಿಕೊಟ್ಟಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X