Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಗ ಒಲಿಂಪಿಕ್ಸ್ ಕ್ರೀಡೆಯಾಗಿ ಪರಿಚಯಿಸಲು...

ಯೋಗ ಒಲಿಂಪಿಕ್ಸ್ ಕ್ರೀಡೆಯಾಗಿ ಪರಿಚಯಿಸಲು ಚಿಂತನೆ: ಕೇಂದ್ರ ಸಚಿವ ಶ್ರೀಪಾದ್ ನಾಯಕ್

ಮೈಸೂರು: 2 ದಿನಗಳ ಅಂತರಾಷ್ಟ್ರೀಯ ಯೋಗ ಸಮ್ಮೇಳನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ15 Nov 2019 11:42 PM IST
share
ಯೋಗ ಒಲಿಂಪಿಕ್ಸ್ ಕ್ರೀಡೆಯಾಗಿ ಪರಿಚಯಿಸಲು ಚಿಂತನೆ: ಕೇಂದ್ರ ಸಚಿವ ಶ್ರೀಪಾದ್ ನಾಯಕ್

ಮೈಸೂರು,ನ.15: ಆಯುಷ್ ಇಲಾಖೆಯಿಂದ ಯೋಗವನ್ನು ಒಲಿಂಪಿಕ್ಸ್ ಕ್ರೀಡೆಯಾಗಿ ಪರಿಚಯಿಸಲು ಚಿಂತಿಸಲಾಗುತ್ತಿದೆ ಎಂದು ಕೇಂದ್ರ ಆಯುಷ್ ಸಚಿವ ಹಾಗೂ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ಯಶೋ ನಾಯಕ್ ತಿಳಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿವಿ ಆವರಣದಲ್ಲಿರುವ ಸಭಾಂಗಣದಲ್ಲಿ ಶುಕ್ರವಾರ, ಭಾರತ ಆಯುಷ್ ಇಲಾಖೆಯು ಆಯೋಜಿಸಿರುವ ಯೋಗ ಫಾರ್ ಹಾರ್ಟ್ ಕೇರ್ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಆಯುಷ್ ಇಲಾಖೆಗೆ ಪ್ರತ್ಯೇಕ ಸಚಿವಾಲಯ ನೀಡಿದ ಬಳಿಕ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಮುಖ್ಯವಾಗಿ ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಯೋಗ ತೆರೆಯಲಾಗಿದೆ. ಶಾಲೆಗಳಿಲ್ಲಿ ಯೋಗವನ್ನು ಕ್ರೀಡೆಯ ಮೂಲಕ ಪರಿಚಯಿಸುವ ಉದ್ದೇಶವಿದ್ದು, ಅದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಯೋಗವನ್ನು ಒಲಿಂಪಿಕ್ಸ್ ನಲ್ಲಿ ಕ್ರೀಡೆಯಾಗಿ ಪರಿಚಯಿಸಲು ತೀರ್ಮಾನಿಸಲಾಗಿದೆ. ಆ ಮೂಲಕ ಯೋಗ ಪದ್ಧತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಮತ್ತು ಜನರ ಆರೋಗ್ಯ ರಕ್ಷಣೆಯ ಉದ್ದೇಶ ಹೊಂದಲಾಗಿದೆ ಎಂದರು.

ಪ್ರಸ್ತುತ ಆಪ್ ಬಿಡುಗಡೆಗೊಳಿಸುತ್ತಿದ್ದು, ಇದರ ಮೂಲಕ ಎಲ್ಲಿ ಯೋಗ ತರಬೇತಿ ನೀಡಲಾಗುತ್ತಿದೆ ಮತ್ತು ಎಲ್ಲಿ ಯೋಗ ಸ್ಪರ್ಧೆಗಳು ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಲಿದೆ. ಮೈಸೂರಿನಲ್ಲಿ 2020ರ ವೇಳೆಗೆ ಆಯೋಜಿಸುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿ, ಅವರನ್ನು ಕರೆತರುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಪತಂಜಲಿ ಸಂಸ್ಥೆ ಸಂಸ್ಥಾಪಕ ಬಾಬಾ ರಾಮದೇವ್ ಮಾತನಾಡಿ, ಯೋಗ ಫಾರ್ ಹಾರ್ಟ್ ಕೇರ್ ಎಂಬ ಹೆಸರಿನಲ್ಲಿ ಈ ಸಮ್ಮೇಳನ ಆಯೋಜಿಸಲಾಗಿದೆ. ಆದರೆ ಯೋಗ ಫಾ ಹಾರ್ಟ್ ಕ್ಯೂರ್ ಎಂದಾಗಬೇಕು. ನಾವು ಪರಿಸರವನ್ನು ಸ್ವಚ್ಛಗೊಳಿಸುತ್ತಿದ್ದೇವೆ. ನಾವು ಬಾಹ್ಯ ಪ್ರಪಂಚ ಸ್ವಚ್ಛವಾಗಿರುವಂತೆಯೇ ನಮ್ಮ ಅಂತರಂಗವೂ ಸ್ವಚ್ಛವಾಗಿರಬೇಕು. ದುರಾಲೋಚನೆ, ದುರಾಸೆ, ದುರ್ಬುದ್ಧಿ ಮುಂತಾದವುಗಳಿಂದ ಮುಕ್ತವಾಗಬೇಕು. ಯೋಗವು ಮನುಷ್ಯನನ್ನು ರೋಗಮುಕ್ತಗೊಳಿಸುವ ಜೊತೆಗೆ ಸ್ವಸ್ಥ ಮನಸ್ಸನ್ನು ನೀಡುತ್ತದೆ ಎಂದರು.

ವ್ಯಕ್ತಿಯೊಬ್ಬರು ಅತಿಯಾದ ರಕ್ತದೊತ್ತಡದಿಂದ ಬಳಲುತ್ತಿದ್ದರು. ಅವರಿಗೆ ಬೈಪಾಸ್ ಸರ್ಜರಿ ಮಾಡಬೇಕಾದ ಅಗತ್ಯವಿತ್ತು. ಅವರಿಗೆ ಸರಳವಾಗಿ ಉಸಿರಾಡುವ ಕ್ರಿಯೆಯನ್ನು ಹೇಳಿಕೊಡುವ ಮೂಲಕ ಕೇವಲ 20 ದಿನದಲ್ಲಿ ಅವರ ರಕ್ತದೊತ್ತಡವನ್ನು ಶೇ.100ರಷ್ಟು ನಿವಾರಿಸಿದೆ. ಇದೊಂದು ನೈಸರ್ಗಿಕ ಬೈಪಾಸ್. ಆದ್ದರಿಂದ ಹೃದಯ ರೋಗ, ಮದುಮೇಹ, ಹೈಪರ್ ಟೆನ್ಷನ್, ಕೊಲೆಸ್ಟ್ರಾಲ್ ಮುಂತಾದ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರು ಯೋಗದ ಮೂಲಕ ಗುಣಪಡಿಸಬುದು. ಕೇವಲ 2 ಗಂಟೆಯಲ್ಲಿ ಸುಮಾರು 2 ಕೆಜಿಯಷ್ಟು ತೂಕ ಇಳಿಸುವ ಶಕ್ತಿ ಯೋಗಕ್ಕಿದೆ ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಹೈದರಾಬಾದ್‍ನ ರಾಮಚಂದ್ರ ಮಿಷನ್‍ನ ಅಧ್ಯಕ್ಷ ಕಮಲೇಶ್ ಡಿ. ಪಾಟೀಲ್ ಮಾತನಾಡಿದರು. ಆಯುಷ್ ಇಲಾಖೆ ಕಾರ್ಯದರ್ಶಿ ವಿದ್ಯಾರಾಜೇಶ್ ಕೋಟೆಚ ಪ್ರಾಸ್ತಾವಿಕ ಭಾಷಣ ಮಾಡಿದರು. ಬೆಂಗಳೂರಿನ ಎಸ್‍ವಿವೈಎಎಸ್‍ಎ ವಿವಿ ಕುಲಪತಿ ಡಾ.ಎಚ್.ಆರ್. ನಾಗೇಂದ್ರ, ಹೆಚ್ಚುವರಿ ಕಾರ್ಯದರ್ಶಿ ಪಿ.ಕೆ. ಪಾಟಕ್, ಡಾ. ಮೀನಾಕ್ಷಿದೇವಿ, ಸಮ್ಮೇಳನದ ಮುಖ್ಯಸ್ಥ ಡಾ. ಬಸವರೆಡ್ಡಿ ಉಪಸ್ಥಿತರಿದ್ದರು.

ಮೈಸೂರು ಆಯುರ್ವೇದ ಕಾಲೇಜಿನ ನಿರ್ದೇಶ ಡಾ.ಲಕ್ಷ್ಮಿನಾರಾಯಣ ಶಣೈ, ಮೈಸೂರು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮಿ ಸೇರಿದಂತೆ ಹಲವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X