Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಎಫ್ಐ ವಿರುದ್ಧದ ಎಎನ್‍ಐ ಸುದ್ದಿ...

ಪಿಎಫ್ಐ ವಿರುದ್ಧದ ಎಎನ್‍ಐ ಸುದ್ದಿ ಸಂಸ್ಥೆಯ ವರದಿ ಆಧಾರ ರಹಿತ, ಆಕ್ಷೇಪಾರ್ಹ: ಮುಹಮ್ಮದ್ ಅಲಿ ಜಿನ್ನಾ

ವಾರ್ತಾಭಾರತಿವಾರ್ತಾಭಾರತಿ18 Nov 2019 1:31 PM IST
share
ಪಿಎಫ್ಐ ವಿರುದ್ಧದ ಎಎನ್‍ಐ ಸುದ್ದಿ ಸಂಸ್ಥೆಯ ವರದಿ ಆಧಾರ ರಹಿತ, ಆಕ್ಷೇಪಾರ್ಹ: ಮುಹಮ್ಮದ್ ಅಲಿ ಜಿನ್ನಾ

ಹೊಸದಿಲ್ಲಿ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಮತ್ತು ಅವರ ಕುಟುಂಬ ಸದಸ್ಯರ ಜೀವಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ ಬೆದರಿಕೆ ಇದೆ ಎಂಬ ಕಾಲ್ಪನಿಕ ಹಾಗೂ ಮಾನ ಹಾನಿಕರ ಸುದ್ದಿಯನ್ನು ಎಎನ್‍ಐ ಪ್ರಸಾರ ಮಾಡಿದ್ದು, ಈ ಆರೋಪವನ್ನು ಪಿಎಫ್ಐ ಪ್ರಧಾನ ಕಾರ್ಯದರ್ಶಿ ಎಂ.ಮುಹಮ್ಮದ್ ಅಲಿ ಜಿನ್ನಾ ನಿರಾಕರಿಸಿದ್ದು, ಇದು ಸಂಘಟನೆಯ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನವಾಗಿದ್ದು, ಇಂತಹ ಅಪ ಪ್ರಚಾರ ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂತಹ ಗಂಭೀರ ಆರೋಪದ ಸುದ್ದಿ ಪ್ರಕಟಿಸುವ ಮೊದಲು, ಸಂಘಟನೆಯ ನಿಲುವನ್ನು ತಿಳಿದುಕೊಳ್ಳಲು ಎಎನ್‍ಐ ವರದಿಗಾರರು ಅಥವಾ ಸಂಪಾದಕೀಯ ಸಿಬ್ಬಂದಿ, ನಮ್ಮ ಸಂಘಟನೆಯ ಪ್ರತಿನಿಧಿಗಳನ್ನು ಸಂಪರ್ಕಿಸದಿರುವುದು ದುರದೃಷ್ಟಕರ. ನಾವು ತಕ್ಷಣ ಸುದ್ದಿಸಂಸ್ಥೆಯನ್ನು ಸಂಪರ್ಕಿಸಿದ್ದರೂ ಅದು ಸುದ್ದಿಯನ್ನು ಸರಿಪಡಿಸುವ ಅಥವಾ ಹಿಂಪಡೆಯುವ ಕೆಲಸ ಮಾಡಿಲ್ಲ. ಮತ್ತೊಂದೆಡೆ, ಇತರ ಕೆಲವು ಪೋರ್ಟಲ್‍ಗಳು ಮತ್ತು ಪತ್ರಿಕೆಗಳು ಕೂಡ ಇದೇ ಸುದ್ದಿಯನ್ನು ನಮ್ಮ ಯಾವುದೇ ಅಭಿಪ್ರಾಯವನ್ನೂ ಕೇಳದೆಯೇ ಪ್ರಕಟಿಸಿವೆ.

ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು, ಕರ್ನಾಟಕ ಮತ್ತು ಇತರ ಭಾಗಗಳಲ್ಲಿನ ನ್ಯಾಯಮೂರ್ತಿ ನಝೀರ್ ಮತ್ತು ಅವರ ಕುಟುಂಬದ ಸದಸ್ಯರಿಗೆ ಪಿಎಫ್‍ಐ ಮತ್ತು ಇತರ ಕಡೆಗಳಿಂದ ಬೆದರಿಕೆ ಇರುವ ಹಿನ್ನೆಲೆಯಲ್ಲಿ ತಕ್ಷಣ ಝಡ್ 'ಕೆಟಗರಿಯ’ ಭದ್ರತೆಯನ್ನು ಒದಗಿಸಲಿದ್ದಾರೆ ಎಂದು ಎಎನ್‍ಐ ಸುದ್ದಿಸಂಸ್ಥೆ, ಭದ್ರತಾ ಸಂಸ್ಥೆಗಳ ವರದಿಯನ್ನು ಪ್ರಸ್ತಾಪಿಸಿ ಪ್ರಕಟಿಸಿತ್ತು.

ಆದರೆ, ವರದಿಯು ಯಾವುದೇ ನಿರ್ದಿಷ್ಟ ಸರ್ಕಾರಿ ಸಂಸ್ಥೆ ಅಥವಾ ಅಧಿಕಾರಿಯ ಹೇಳಿಕೆಯ "ಅಧಿಕೃತ ಹೇಳಿಕೆಯನ್ನು"  ಸುದ್ದಿಯ ಮೂಲವೆಂದು ಹೆಸರಿಸದ ಕಾರಣ, ವರದಿಯ ಹೊಣೆಗಾರಿಕೆಯು ಸಂಪೂರ್ಣವಾಗಿ ಎಎನ್‍ಐ ಮತ್ತು ಅದರ ಸುದ್ದಿಯನ್ನು ನಕಲು ಮಾಡಿ ಪ್ರಕಟಿಸಿದ ಇತರ ಮಾಧ್ಯಮಗಳ ಮೇಲೂ ಇದೆ ಎಂದು ಅವರು ಹೇಳಿದ್ದಾರೆ.

ಬೇಷರತ್ ಕ್ಷಮೆ ಯಾಚನೆಯೊಂದಿಗೆ ಆರೋಪವನ್ನು ತಕ್ಷಣ ಹಿಂಪಡೆದುಕೊಳ್ಳಬೇಕೆಂದು ಮುಹಮ್ಮದ್ ಅಲಿ ಜಿನ್ನಾ ಅವರು ಒತ್ತಾಯಿಸಿದ್ದಾರೆ. ಈ ಗಂಭೀರ ವಿಷಯದಲ್ಲಿ ಸಂಬಂಧಪಟ್ಟ ಮಾಧ್ಯಮಗಳು ಬೇಜವಾಬ್ದಾರಿಯಾಗಿ ಮುಂದುವರಿದರೆ ಸಾರ್ವಜನಿಕ ಹಿತಾಸಕ್ತಿ, ಶಾಂತಿ ಮತ್ತು ಸಾಮರಸ್ಯ ಸ್ಥಾಪನೆ ಉದ್ದೇಶದಿಂದ ಇಂತಹ ಮಾಧ್ಯಮಗಳ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟನೆಯ ಮೂಲಕ ಅವರು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X