Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿವಾಜಿನಗರದಲ್ಲಿ 'ನೋಟಾ ಚಲಾವಣೆ'...

ಶಿವಾಜಿನಗರದಲ್ಲಿ 'ನೋಟಾ ಚಲಾವಣೆ' ಅಭಿಯಾನ: ಅಭ್ಯರ್ಥಿಗಳ ವಿರುದ್ಧ ಆನ್ ಲೈನ್ ಸಮರ ಸಾರಿದ ಜನತೆ

ಐಎಂಎ ವಂಚನೆ ಪ್ರಕರಣ

ಸಮೀರ್ ದಳಸನೂರುಸಮೀರ್ ದಳಸನೂರು18 Nov 2019 6:00 PM IST
share
ಶಿವಾಜಿನಗರದಲ್ಲಿ ನೋಟಾ ಚಲಾವಣೆ ಅಭಿಯಾನ: ಅಭ್ಯರ್ಥಿಗಳ ವಿರುದ್ಧ ಆನ್ ಲೈನ್ ಸಮರ ಸಾರಿದ ಜನತೆ

ಬೆಂಗಳೂರು, ನ.18: ಐಎಂಎ ವಂಚನೆ ಪ್ರಕರಣ ಸಂಬಂಧ ಯಾವುದೇ ನ್ಯಾಯ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ನೂರಾರು ಹೂಡಿಕೆದಾರರು, ಶಿವಾಜಿನಗರ ವಿಧಾನಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ವಿರುದ್ಧ ಮತದಾರರು ನೋಟಾ ಚಲಾಯಿಸುವ ಮೂಲಕ ತಿರಸ್ಕರಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಐಎಂಎ ಕಂಪೆನಿಯಲ್ಲಿ ಸ್ಥಳೀಯ ನಿವಾಸಿಗಳೇ ಹೆಚ್ಚಿನ ಹಣವನ್ನು ಹೂಡಿಕೆ ಮಾಡಿದ್ದರು. ಜೂನ್ ತಿಂಗದಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದರೂ, ಗ್ರಾಹಕರಿಗೆ ಹಣ ವಾಪಸ್ಸು ನೀಡುವ ಯಾವುದೇ ಪ್ರಕ್ರಿಯೆಯನ್ನು ಸರಕಾರ ಆಗಲಿ, ಇಲ್ಲಿನ ಜನಪ್ರತಿನಿಧಿಗಳಾಗಲಿ ಕೈಗೊಂಡಿಲ್ಲ. ಇದರ ಜೊತೆಗೆ, ಅನಗತ್ಯವಾಗಿ ಉಪ ಚುನಾವಣೆ ಬಂದಿದೆ. ಹಾಗಾಗಿ, ನೋಟಾಕ್ಕೆ ಮತಚಲಾಯಿಸುವುದಾಗಿ ಕೆಲ ಹೂಡಿಕೆದಾರರು ವಾಟ್ಸ್ ಆ್ಯಪ್, ಫೇಸ್‌ಬುಕ್, ಯೂಟ್ಯೂಬ್‌ನಲ್ಲಿ ಹೇಳಿಕೊಂಡಿದ್ದಾರೆ.

ಈಗಾಗಲೇ ಕೆಲವರು ವಾಟ್ಸ್ ಆ್ಯಪ್ ಗ್ರೂಪ್‌ಗಳನ್ನು ರಚಿಸಿಕೊಂಡಿದ್ದು, ಡಿ.5ರಂದು ಚುನಾವಣೆವರೆಗೆ ಕನಿಷ್ಠ 1 ಲಕ್ಷ ಜನರನ್ನು ನೋಟಾ ಜಾಗೃತಿ ಅಭಿಯಾನದಲ್ಲಿ ತೊಡಗಿಸಿಕೊಳ್ಳುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಲಾಗುತ್ತಿದೆ.

ಆಕ್ರೋಶದ ವಿಡಿಯೋ ವೈರಲ್: ಫರ್ಹಾನ್ ರಶೀದ್ ಎಂಬುವರು ‘ಮುಸ್ಲಿಮ್ ಬ್ಲಾಗರ್’ ಹೆಸರಿನ ಫೇಸ್‌ಬುಕ್ ಪುಟ ರಚಿಸಿಕೊಂಡಿದ್ದು, ಇಲ್ಲಿನ ಸ್ಥಳೀಯ ರಾಜಕೀಯ ಮುಖಂಡರ ಹಾಗೂ ಐಎಂಎ ವಂಚನೆ ಪ್ರಕರಣದ ಆರೋಪಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋಗಳು ವೈರಲ್ ಆಗಿದ್ದು, ನೋಟಾಕ್ಕೆ ಮತ ಚಲಾಯಿಸುವ ಮೂಲಕ ರಾಜಕೀಯ ನಾಯಕರಿಗೆ ಬುದ್ಧಿ ಕಲಿಸುವಂತೆ ತಮ್ಮ ಸಂದೇಶಗಳಲ್ಲಿ ಹೇಳಿಕೊಂಡಿದ್ದಾರೆ.

ಹೂಡಿಕೆದಾರರ ಸಭೆ: ಸಾಮಾಜಿಕ ಜಾಲತಾಣಗಳ ಸಂದೇಶಗಳನ್ನು ಆಧರಿಸಿಯೇ ಸಭೆ ನಡೆಸುತ್ತಿರುವ ಅನೇಕ ಹೂಡಿಕೆದಾರರು, ಶಿವಾಜಿನಗರದ ಮತದಾರರಾಗಿದ್ದಾರೆ. ವಂಚನೆಗೊಳಗಾದ ಮಂದಿಗೆ ನ್ಯಾಯ ಒದಗಿಸಲು ಪ್ರತಿಭಟನೆ ನಡೆಸಿದರು, ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಚುನಾವಣೆಯಲ್ಲಿ ನೋಟಾಕ್ಕೆ ಮತಚಲಾಯಿಸಲು ಒಮ್ಮತದಿಂದ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ, ನೋಟಾಕ್ಕೆ ಮತಚಲಾಯಿಸುವ ಮೂಲಕ ಜನತೆಯ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ನೀಡುವ ಜತೆಗೆ ಇಲ್ಲಿನ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೆಸರು ಹೇಳಲು ಇಚ್ಛಿಸದ ಹೂಡಿಕೆದಾರರು ಮಾಹಿತಿ ನೀಡಿದರು.

‘ಕ್ರಮ ಕೈಗೊಳ್ಳುತ್ತೇವೆ’

ಮತದಾನ ಪ್ರತಿಯೋರ್ವರ ಹಕ್ಕು. ಒಂದು ವೇಳೆ ಯಾರೊಬ್ಬ ಅಭ್ಯರ್ಥಿಗೂ ಮತದಾನ ಮಾಡಲು ಇಚ್ಛೆ ಇಲ್ಲದವರು ನೋಟಾ ಚಲಾಯಿಸಬಹುದು. ಆದರೆ ನೋಟಾ ಚಲಾಯಿಸಬೇಕೆಂದು ಯಾವುದೇ ವ್ಯಕ್ತಿ-ಸಂಘಟನೆಗಳು ಅಭಿಯಾನ ನಡೆಸಿದರೆ ಅದು ಇನ್ನೋರ್ವನ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದರು.

ಐಎಂಎ ಆರೋಪಿ ಸ್ಪರ್ಧೆಯಲ್ಲಿ?

ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಕೆಲವರು ಸ್ಪರ್ಧೆಯಲ್ಲಿರುವುದೇ ದುರಂತ ಸಂಗತಿ. ಅವರಿಂದ ನಮಗೆ ನ್ಯಾಯ ದೊರೆಯುವ ವಿಶ್ವಾಸವೇ ಇಲ್ಲ. ಹೀಗಾಗಿಯೇ, ಮತದಾರರ ಶಕ್ತಿಯನ್ನು ನೋಟಾದ ಮೂಲದ ತಿಳಿುತ್ತೇವೆ ಎಂದು ಹೂಡಿಕೆದಾರರು ಸಾಮಾಜಿಕ ಜಾಲತಾಣದ ಸಂದೇಶಗಳಲ್ಲಿ ಹೇಳಿಕೊಂಡಿದ್ದಾರೆ.

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X