Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ಯಾಜ್ಯ ನಿಗ್ರಹ ಅಭಿಯಾನಕ್ಕೆ ಹಳೆಯ...

ತ್ಯಾಜ್ಯ ನಿಗ್ರಹ ಅಭಿಯಾನಕ್ಕೆ ಹಳೆಯ ಹಾಡುಗಳನ್ನು ಮರುಸೃಷ್ಟಿಸುತ್ತಿರುವ ಪುಣೆಯ ಸ್ವಚ್ಛತಾ ಕಾರ್ಮಿಕ

ವಾರ್ತಾಭಾರತಿವಾರ್ತಾಭಾರತಿ18 Nov 2019 9:07 PM IST
share

ಪುಣೆ, ನ.18: ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆಯುವ ಜನರನ್ನು ನಿರುತ್ತೇಜಿಸಲು ಪುಣೆ ಮಹಾನಗರ ಪಾಲಿಕೆ (ಪಿಎಂಸಿ)ಯ ಸ್ವಚ್ಛತಾ ಕಾರ್ಮಿಕ ಮಹಾದೇವ ಜಾಧವ್ (57) ಅವರು ಹಳೆಯ ಬಾಲಿವುಡ್ ಹಾಡುಗಳನ್ನು ಬಳಸಿಕೊಳ್ಳುತ್ತಿರುವ ವಿಶಿಷ್ಟ ಶೈಲಿಯು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

ಪುಣೆಯ ಪಾರ್ವತಿ ನಗರ ಪ್ರದೇಶದಲ್ಲಿ ಬೆಳಗಿನ ವಾಯುವಿಹಾರಕ್ಕೆ ಬಂದಿದ್ದ ಕೆಲವು ಸುಶಿಕ್ಷಿತರು ತ್ಯಾಜ್ಯಗಳಿದ್ದ ಪ್ಲಾಸ್ಟಿಕ್ ಚೀಲಗಳನ್ನು ರಸ್ತೆಗಳಲ್ಲಿ ಎಸೆಯುತ್ತಿರುವುದನ್ನು ಕಂಡಾಗ ವಿಡಂಬನೆಗೆ ಹಳೆಯ ಹಿಂದಿ ಹಾಡುಗಳನ್ನು ಬಳಸುವ ವಿಚಾರ ಜಾಧವ್ ತಲೆಗೆ ಹೊಳೆದಿತ್ತು.

‘ ನನಗೆ ಹಾಡುವಿಕೆ ಮತ್ತು ಕವನ ರಚನೆಯ ಆಸಕ್ತಿಯಿದ್ದು,ತ್ಯಾಜ್ಯ ನಿರ್ವಹಣೆ ಹಾಗೂ ಒಣ ಮತ್ತು ಹಸಿ ತ್ಯಾಜ್ಯಗಳ ವಿಂಗಡಣೆ ಬಗ್ಗೆ ಅರಿವು ಮೂಡಿಸಲು ಹಾಗೂ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯಗಳನ್ನು ಎಸೆಯದಂತೆ ಜನರನ್ನ್ನು ನಿರುತ್ತೇಜಿಸಲು ನಾನು ಈ ಆಸಕ್ತಿಯನ್ನು ಬಳಸಿಕೊಳ್ಳುತ್ತಿದ್ದೇನೆ ’ಎಂದು ಜಾಧವ್ ಹೇಳಿದರು.

ಬೀದಿಗಳಲ್ಲಿ ಕಸಗುಡಿಸುತ್ತಿರುವಾಗ ತನ್ನದೇ ರಚನೆಗಳನ್ನು ಹಳೆಯ ಜನಪ್ರಿಯ ಹಿಂದಿ ಹಾಡುಗಳ ಧಾಟಿಯಲ್ಲಿ ಹಾಡುವ ಮೂಲಕ ಜನರ ಗಮನವನ್ನು ಸೆಳೆಯುತ್ತಿರುವ ಜಾಧವ್ ಅವರ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಉದಾಹರಣೆಗೆ ‘ಕಜರಾ ಮುಹಬ್ಬತ್ ವಾಲಾ,ಅಂಖಿಯೋಮೆ ಐಸಾ ಡಾಲಾ, ಕಜರೇನೆ ಲೇ ಲೀ ಮೇರಿ ಜಾನ್,ಹಾಯ್ ರೆ ಮೈ ತೇರಿ ಕುರ್ಬಾನ್’ ಎಂಬ ಪ್ರಸಿದ್ಧ ಹಾಡನ್ನು ಜಾಧವ್ ‘ಕಚರಾ ಸೂಖಾ ಔರ್ ಗೀಲಾ,ಸಬ್‌ನೆ ಮಿಲಾಕರ್ ಡಾಲಾ,ಕಚರೇನೆ ಲೇ ಲೀ ಸಬ್‌ಕೆ ಜಾನ್,ಗೌರ್ ಸೆ ಸುನಿಯೆ ಮೆಹರಬಾನ್......’ಎಂದು ಪುನರ್‌ರಚಿಸಿ ಅದೇ ಧಾಟಿಯಲ್ಲಿ ಹಾಡುತ್ತಾರೆ. ಇಂತಹ ಕೆಲವು ಹಾಡುಗಳು ಅವರ ಬತ್ತಳಿಕೆಯಲ್ಲಿವೆ.

ಪಿಎಂಸಿ ಸಾಂಸ್ಕೃತಿಕ ತಂಡದ ಮುಖ್ಯ ಸದಸ್ಯರಾಗಿರುವ ಜಾಧವ್ ತನ್ನ ಸಮಾನ ಮನಸ್ಕ ಸಹೊದ್ಯೋಗಿಗಳೊಂದಿಗೆ ಶಾಲಾಕಾಲೇಜುಗಳು ಮತ್ತು ಹೌಸಿಂಗ್ ಸೊಸೈಟಿಗಳಿಗೆ ಭೇಟಿ ನೀಡಿ ತನ್ನ ವಿಶಿಷ್ಟ ಶೈಲಿಯ ಮೂಲಕ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದಾರೆ.

ಕೇಂದ್ರ ಸರಕಾರದ ಸ್ವಚ್ಛತಾ ಸಮೀಕ್ಷೆಗಾಗಿ ಪಿಎಂಸಿ ನಡೆಸಲಿರುವ ಸ್ವಚ್ಛತಾ ಅಭಿಯಾನಕ್ಕೆ ಜಾಧವ್ ಅವರನ್ನು ಬ್ರಾಂಡ್ ರಾಯಭಾರಿಯನ್ನಾಗಿಸಲು ನಾವು ಉದ್ದೇಶಿಸಿದ್ದೇವೆ ಎಂದು ಸ್ವಚ್ಛತಾ ವಿಭಾಗದ ಮುಖ್ಯಸ್ಥ ಜ್ಞಾನೇಶ್ವರ ಮೋಲಕ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X