Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 250ನೇ ಅಧಿವೇಶನ ಆರಂಭ:...

250ನೇ ಅಧಿವೇಶನ ಆರಂಭ: ಪ್ರಜಾಪ್ರಭುತ್ವದಲ್ಲಿ ರಾಜ್ಯಸಭೆಯ ಪಾತ್ರಕ್ಕೆ ಮೋದಿ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ18 Nov 2019 10:34 PM IST
share
250ನೇ ಅಧಿವೇಶನ ಆರಂಭ: ಪ್ರಜಾಪ್ರಭುತ್ವದಲ್ಲಿ ರಾಜ್ಯಸಭೆಯ ಪಾತ್ರಕ್ಕೆ ಮೋದಿ ಪ್ರಶಂಸೆ

ಹೊಸದಿಲ್ಲಿ, ನ.18: ರಾಜ್ಯಸಭೆಯು ಭಾರತೀಯ ಪ್ರಜಾಪ್ರಭುತ್ವದಲ್ಲಿ ನಿಗಾ ಮತ್ತು ಸಮತೋಲನವನ್ನು ಒದಗಿಸುವ ಸಂಸ್ಥೆಯಾಗಿದೆ ಎಂದು ಸಂಸತ್ತಿನ ಚಳಿಗಾಲದ ಮೊದಲ ದಿನವಾದ ಸೋಮವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು,ಆದರೆ ನಿಗಾಕ್ಕೂ ಅಡಚಣೆಗೂ ವ್ಯತ್ಯಾಸವಿದೆ ಎಂದು ಹಿಂದಿನ ಅಧಿವೇಶನಗಳಲ್ಲಿಯ ವ್ಯತ್ಯಯಗಳನ್ನು ಪ್ರಸ್ತಾಪಿಸಿ ಹೇಳಿದರು.

ಇದೇ ವೇಳೆ ಅತ್ತ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರು ನ್ಯಾಷನಲ್ ಕಾನ್‌ಫರೆನ್ಸ್ ನಾಯಕ ಹಾಗೂ ಶ್ರೀನಗರದ ಸಂಸದ ಫಾರೂಕ್ ಅಬ್ದುಲ್ಲಾರ ಬಂಧನಕ್ಕಾಗಿ ಕೇಂದ್ರವನ್ನು ಟೀಕಿಸಿದರು.

ರಾಜ್ಯಸಭೆಯ 250ನೇ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಮೋದಿ,ರಾಜ್ಯಸಭೆಯು ಎರಡನೇ ಸದನವಾಗಿರಬಹುದು,ಆದರೆ ಅದು ಅಧೀನ ಸದನವಲ್ಲ ಎಂಬ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೇಳಿಕೆಯನ್ನು ನೆನಪಿಸಿಕೊಂಡರು. ಇಂದು ತಾನೂ ವಾಜಪೇಯಿಯವರ ಭಾವನೆಯನ್ನು ಪ್ರತಿಧ್ವನಿಸುತ್ತಿದ್ದೇನೆ ಎಂದ ಅವರು,ರಾಜ್ಯಸಭೆಯು ರಾಷ್ಟ್ರೀಯ ಪ್ರಗತಿಗಾಗಿ ಮಿಡಿಯುವ ಪೂರಕ ಸದನವಾಗಬೇಕಿದೆ ಎಂದರು.

ಎನ್‌ಸಿಪಿ ಮತ್ತು ಬಿಜೆಡಿ ಪಕ್ಷಗಳನ್ನು ಪ್ರಶಂಸಿಸಿದ ಮೋದಿ,ಈ ಪಕ್ಷಗಳು ಎಂದೂ ಸದನದ ಬಾವಿಗೆ ನುಗ್ಗದೆ ಸಂಸದೀಯ ನಿಯಮಗಳನ್ನು ಪಾಲಿಸುತ್ತಿವೆ,ಆದರೂ ತಮ್ಮ ಅಭಿಪ್ರಾಯಗಳನ್ನು ಪರಿಣಾಮಕಾರಿಯಾಗಿ ಮಂಡಿಸುತ್ತಿವೆ ಎಂದು ಹೇಳಿದರು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಂತಹ ದಿಗ್ಗಜರು ರಾಜ್ಯಸಭೆಯ ಮೂಲಕ ರಾಷ್ಟ್ರದ ಪ್ರಗತಿಗೆ ಹೆಚ್ಚಿನ ಕೊಡುಗೆ ಸಲ್ಲಿಸಿದ್ದನ್ನು ಯಾರೂ ಮರೆಯುವಂತಿಲ್ಲ ಎಂದರು.

ಲೋಕಸಭೆಯಲ್ಲಿ ಗದ್ದಲ

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧನದಲ್ಲಿರಿಸಿರುವ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು ಬಂಧನವು ಅಕ್ರಮವಾಗಿದೆ ಎಂದು ಬಣ್ಣಿಸಿದರು. ಅವರು ಸಂಸತ್ತಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಅಬ್ದುಲ್ಲಾ ಅವರು ಶ್ರೀನಗರವನ್ನು ಪ್ರತಿನಿಧಿಸುತ್ತಿದ್ದಾರೆ. ತಮ್ಮ ಧ್ವನಿ ಸದನದಲ್ಲಿ ಆಲಿಸಲ್ಪಡಬೇಕು ಎನ್ನುವುದು ಅಲ್ಲಿಯ 20 ಲಕ್ಷ ಜನರ ಹಕ್ಕು ಆಗಿದೆ ಎಂದ ಎನ್‌ಸಿ ಸಂಸದ ಹಸ್ನೈನ್ ಮಸೂದಿ ಅವರು,ಅಬ್ದುಲ್ಲಾ ನ್ಯಾಯಾಂಗ ಬಂಧನದಲ್ಲಿಲ್ಲ,ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕಸ್ಟಡಿಯಲ್ಲಿಡಲಾಗಿದೆ ಎನ್ನುವುದಕ್ಕೆ ತನ್ನ ಬಳಿ ಆಧಾರಗಳಿವೆ ಎಂದರು.

ಕಾಶ್ಮೀರ ಕಣಿವೆಯ ಭೇಟಿಗೆ ಭಾರತೀಯ ನಾಯಕರಿಗೆ ಅನುಮತಿ ನಿರಾಕರಿಸಿ ಐರೋಪ್ಯ ಒಕ್ಕೂಟದ ಸಂಸದರಿಗೆ ಅವಕಾಶ ನೀಡಿದ್ದನ್ನು ಕಾಂಗ್ರೆಸ್ ನಾಯಕ ಆಧಿರ ರಂಜನ್ ಚೌಧರಿ ಟೀಕಿಸಿದರು. ಇತರ ಪ್ರತಿಪಕ್ಷ ಸಂಸದರೂ ಅವರೊಂದಿಗೆ ಧ್ವನಿಗೂಡಿಸಿದಾಗ ಕೋಲಾಹಲ ಸೃಷ್ಟಿಯಾಗಿತ್ತು. ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದ ಶಿವಸೇನೆಯ ಸದಸ್ಯರು ಸಭಾತ್ಯಾಗ ನಡೆಸಿದರು.

ಶ್ರದ್ಧಾಂಜಲಿ ಸಲ್ಲಿಕೆ

ರಾಜ್ಯಸಭೆಯು ಬೆಳಿಗ್ಗೆ ಇತ್ತೀಚಿಗೆ ನಿಧನರಾದ ಸದಸ್ಯರಾದ ಅರುಣ ಜೇಟ್ಲಿ,ರಾಮ ಜೇಠ್ಮಲಾನಿ,ಮಾಜಿ ಸದಸ್ಯರಾದ ಜಗನ್ನಾಥ ಮಿಶ್ರಾ,ಗುರುದಾಸ ದಾಸಗುಪ್ತಾ ಮತ್ತು ಸುಖದೇವ ಸಿಂಗ್ ಲಿಬ್ರಾ ಅವರಿಗೆ ಶ್ರದ್ಧಾಂಜಲಿಗಳನ್ನು ಸಲ್ಲಿಸಿತು.

ಮಾರ್ಷಲ್‌ಗಳ ಹೊಸವೇಷ

ರಾಜ್ಯಸಭೆಯ 250ನೇ ಅಧಿವೇಶನದ ಅಂಗವಾಗಿ ಮಾರ್ಷಲ್‌ಗಳು ಹೊಸ ಸಮವಸ್ತ್ರ ಪಡೆದಿದ್ದಾರೆ. ಅವರೀಗ ಸಾಂಪ್ರದಾಯಿಕ ಕುರ್ತಾ ಮತ್ತು ಪಗಡಿಯ ಬದಲು ಮಿಲಿಟರಿ ಮಾದರಿಯ ಸಮವಸ್ತ್ರ ಮತ್ತು ಕ್ಯಾಪ್‌ಗಳಲ್ಲಿ ಮಿಂಚಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X