Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಡ್ರಗ್ಸ್ ಚಟಕ್ಕೆ ಪ್ರಾಣ...

ಬೆಂಗಳೂರು: ಡ್ರಗ್ಸ್ ಚಟಕ್ಕೆ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು

ವಾರ್ತಾಭಾರತಿವಾರ್ತಾಭಾರತಿ20 Nov 2019 7:06 PM IST
share
ಬೆಂಗಳೂರು: ಡ್ರಗ್ಸ್ ಚಟಕ್ಕೆ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು

ಬೆಂಗಳೂರು, ನ.20: ಕೆಲ ಕ್ಷಣಗಳ ನಶೆಯ ಚಟಕ್ಕೆ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಇಲ್ಲಿನ ಮಲ್ಲೇಶ್ವರಂನ ಕೋದಂಡರಾಮ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕೋದಂಡರಾಮ ನಗರದ ಅಭಿಲಾಷ್(23), ಗೋಪಿ(30) ಮೃತ ಯುವಕರು ಎಂದು ತಿಳಿದುಬಂದಿದೆ.

ಪ್ರಕರಣದ ವಿವರ: ನ.18ರ ರಾತ್ರಿ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಯುವತಿಯರಿಬ್ಬರು ಸೇರಿ ಒಟ್ಟು 10ಕ್ಕೂ ಅಧಿಕ ಮಂದಿ ಮಲ್ಲೇಶ್ವರಂನ ಫ್ಲೈವರ್ ಮಾರ್ಕೆಟ್ ಬಳಿಯ ಬಿಬಿಎಂಪಿ ಮೈದಾನದಲ್ಲಿ ಜಮಾಯಿಸಿ ಟೈಡಾಲ್ ಎಂಬ ಮಾತ್ರೆಯನ್ನು ಪುಡಿ ಮಾಡಿ ಇಂಜೆಕ್ಷನ್ ಮೂಲಕ ದೇಹಕ್ಕೆ ಸೇರಿಸಿದ್ದಾರೆ ಎನ್ನಲಾಗಿದೆ.

ಇದರ ಪರಿಣಾಮ ಓವರ್ ಡೋಸ್ ಆಗಿದ್ದು, ಎಲ್ಲರಿಗೂ ತೀವ್ರ ಜ್ವರ, ತಲೆ ಸುತ್ತು ಹಾಗೂ ಹೊಟ್ಟೆ ನೋವು ಶುರುವಾಗಿದೆ. ಬಳಿಕ ಆಸ್ಪತ್ರೆಗೆ ದಾಖಲಿಸಿದರೂ, ಅಭಿಲಾಷ್ ಹಾಗೂ ಗೋಪಿ ಮೃತಪಟ್ಟರೆ, ಮತ್ತೊಬ್ಬ ಸುಮನ್ ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಪೊಲೀಸರು ಹೇಳುವುದೇನು?: ಘಟನೆ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮಾಹಿತಿಯಂತೆ ಟೈಡಾಲ್ ಎಂಬ ಮಾತ್ರೆಯನ್ನು ತೆಗೆದುಕೊಂಡು ಅಸ್ವಸ್ಥರಾಗಿದ್ದಾರೆ. ಅಲ್ಲದೆ, ಈ ಮಾತ್ರೆಯನ್ನು ವೈದ್ಯರ ಅನುಮತಿ ಇಲ್ಲದೆ ನೀಡುವಂತಿಲ್ಲ. ಎಲ್ಲಿಂದ ಮಾತ್ರೆ ಖರೀದಿಸಿದ್ದಾರೆ ಎನ್ನುವುದು ಮುಖ್ಯವಾಗಿದ್ದು, ಇದನ್ನು ನೇರವಾಗಿ ಸಿರಿಂಜ್ ಮೂಲಕ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ಮರಣೋತ್ತರ ವರದಿಗಾಗಿ ಕಾಯುತ್ತಿದ್ದೇವೆಂದು ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿಸಿದರು.

ಕಠಿಣ ಕ್ರಮಕ್ಕೆ ಆಯುಕ್ತರ ಸೂಚನೆ
ಡ್ರಗ್ಸ್ ಚಟಕ್ಕೆ ಯುವಕರಿಬ್ಬರು ಮೃತಪಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಸಿಸಿಬಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದರು.
ಮಾದಕ ವಸ್ತು ಮಾರಾಟಗಾರರು ಯುವಕರನ್ನೇ ಗುರಿಯಾಗಿಸಿಕೊಂಡು ದಂಧೆ ನಡೆಸುತ್ತಿದ್ದು, ಅವರ ಮೇಲೆ ತೀವ್ರ ನಿಗಾವನ್ನಿಟ್ಟು ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X