Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಸೇರಿದಂತೆ 10 ದೇಶಗಳಿಂದ ಜಾಗತಿಕ...

ಭಾರತ ಸೇರಿದಂತೆ 10 ದೇಶಗಳಿಂದ ಜಾಗತಿಕ ತಾಪಮಾನ ಒಪ್ಪಂದ ಉಲ್ಲಂಘನೆ

ವಿಶ್ವಸಂಸ್ಥೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ20 Nov 2019 8:37 PM IST
share
ಭಾರತ ಸೇರಿದಂತೆ 10 ದೇಶಗಳಿಂದ ಜಾಗತಿಕ ತಾಪಮಾನ ಒಪ್ಪಂದ ಉಲ್ಲಂಘನೆ

ಲಂಡನ್, ನ. 20: ಜಗತ್ತಿನ ಪ್ರಮುಖ ಭೂಗತ ಇಂಧನ ಉತ್ಪಾದಕ ದೇಶಗಳು ಮುಂದಿನ ದಶಕದಲ್ಲಿ ಅಧಿಕ ಪ್ರಮಾಣದಲ್ಲಿ ಕಲ್ಲಿದ್ದಲು, ತೈಲ ಮತ್ತು ಅನಿಲವನ್ನು ಉತ್ಪಾದಿಸುವ ಮೂಲಕ ಜಾಗತಿಕ ಪರಿಸರ ಗುರಿಗಳನ್ನು ಉಲ್ಲಂಘಿಸಲಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಸಂಶೋಧನಾ ಗುಂಪುಗಳು ಬುಧವಾರ ಎಚ್ಚರಿಕೆ ನೀಡಿವೆ.

ಸೂಪರ್ ‌ಪವರ್‌ಗಳಾದ ಚೀನಾ ಮತ್ತು ಅಮೆರಿಕ ಸೇರಿದಂತೆ, ಮುಖ್ಯವಾಗಿ 10 ದೇಶಗಳು 2030ರ ವೇಳೆಗೆ ಉತ್ಪಾದಿಸುವ ಇಂಧನ ಪ್ರಮಾಣವು ಪ್ಯಾರಿಸ್ ಹವಾಮಾನ ಒಪ್ಪಂದ ನಿಗದಿಪಡಿಸಿದ ಮಿತಿಗಿಂತ 50ರಿಮದ 120 ಶೇಕಡದಷ್ಟು ಹೆಚ್ಚಾಗಿರುತ್ತದೆ ಎಂದು ಅಧ್ಯಯನ ತಿಳಿಸಿದೆ.

2015ರ ಜಾಗತಿಕ ಪರಿಸರ ಒಪ್ಪಂದದ ಪ್ರಕಾರ, ಸರಾಸರಿ ತಾಪಮಾನ ಹೆಚ್ಚಳವನ್ನು ಕೈಗಾರಿಕಾ ಪೂರ್ವ ಮಟ್ಟಕ್ಕಿಂತ 1.5-2 ಡಿಗ್ರಿ ಸೆಲ್ಸಿಯಸ್‌ಗೆ ಮಿತಿಗೊಳಿಸಲು ದೇಶಗಳು ಬದ್ಧತೆ ಹೊಂದಿವೆ.

ಆದರೆ, 2030ರ ವೇಳೆಗೆ 10 ದೇಶಗಳು ಉದ್ದೇಶಿಸಿರುವ ಇಂಧನ ಉತ್ಪಾದನೆಯು 39 ಗಿಗಾ ಟನ್ ಇಂಗಾಲದ ಡೈ ಆಕ್ಸೈಡ್ ಅನಿಲವನ್ನು ಸೃಷ್ಟಿಸುತ್ತದೆ. ಇದು ತಾಪಮಾನ ಹೆಚ್ಚಳವನ್ನು 2 ಡಿಗ್ರಿ ಸೆಲ್ಸಿಯಸ್‌ಗೆ ಮಿತಿಗೊಳಿಸಲು ಅಗತ್ಯವಾದ 21 ಗಿಗಾ ಟನ್‌ಗಿಂತ 53 ಶೇಕಡ ಅಧಿಕವಾಗಿದೆ ಅಥವಾ ತಾಪಮಾನ ಹೆಚ್ಚಳವನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಮಿತಿಗೊಳಿಸಲು ಅಗತ್ಯವಾದ ಪ್ರಮಾಣಕ್ಕಿಂತ 120 ಶೇಕಡ ಅಧಿಕವಾಗಿದೆ.

ಬೃಹತ್ ಪ್ರಮಾಣದಲ್ಲಿ ಭೂಗತ ಇಂಧನ ಉತ್ಪಾದಿಸುವ ಇತರ ದೇಶಗಳೆಂದರೆ ರಶ್ಯ, ಭಾರತ, ಆಸ್ಟ್ರೇಲಿಯ, ಇಂಡೋನೇಶ್ಯ, ಕೆನಡ, ಜರ್ಮನಿ, ನಾರ್ವೆ ಮತ್ತು ಬ್ರಿಟನ್.

2050ರ ವೇಳೆಗೆ ಜಾಗತಿಕ ಆರ್ಥಿಕತೆಗೆ 560 ಲಕ್ಷ ಕೋಟಿ ರೂ. ನಷ್ಟ

ಪ್ಯಾರಿಸ್, ನ. 20: ಹವಾಮಾನ ಬದಲಾವಣೆಯು ಈ ಶತಮಾನದ ಮಧ್ಯ ಭಾಗದ ಹೊತ್ತಿಗೆ ಜಾಗತಿಕ ಆರ್ಥಿಕತೆಗೆ 7.9 ಟ್ರಿಲಿಯ ಡಾಲರ್ (ಸುಮಾರು 560 ಲಕ್ಷ ಕೋಟಿ ರೂಪಾಯಿ)ನಷ್ಟು ಹೊಡೆತ ನೀಡುತ್ತದೆ ಎಂದು ಹೊಸ ಅಧ್ಯಯನವೊಂದು ಬುಧವಾರ ತಿಳಿಸಿದೆ.

ಬರ ಮತ್ತು ಪ್ರವಾಹದಲ್ಲಿನ ಹೆಚ್ಚಳ ಹಾಗೂ ಇದರ ಪರಿಣಾಮವಾಗಿ ಉಂಟಾಗುವ ಬೆಳೆ ವೈಫಲ್ಯವು ಆರ್ಥಿಕ ಬೆಳವಣಿಗೆಗೆ ಅಡ್ಡಿಯಾಗುತ್ತದೆ ಹಾಗೂ ಮೂಲಸೌಕರ್ಯಗಳಿಗೆ ಅಡಚಣೆಯುಂಟು ಮಾಡುತ್ತದೆ ಎಂದು ಎಕನಾಮಿಸ್ಟ್ ಇಂಟಲಿಜನ್ಸ್ ಯೂನಿಟ್‌ನ ಕ್ಲೈಮೇಟ್ ಚೇಂಜ್ ರೆಸಿಲಿಯನ್ಸ್ ಇಂಡೆಕ್ಸ್ ಪತ್ತೆಹಚ್ಚಿದೆ.

ಜಗತ್ತಿನ ಅತಿ ದೊಡ್ಡ 82 ಆರ್ಥಿಕತೆಗಳ ಸಿದ್ಧತೆಯನ್ನು ಇಂಡೆಕ್ಸ್ ಅಂದಾಜಿಸಿದೆ ಹಾಗೂ ಪ್ರಸಕ್ತ ಪ್ರವೃತ್ತಿಗಳಂತೆ, ಹೆಚ್ಚುತ್ತಿರುವ ಉಷ್ಣತೆಯು 2050ರ ವೇಳೆಗೆ ಜಾಗತಿಕ ಒಟ್ಟು ದೇಶಿ ಉತ್ಪನ್ನ (ಜಿಡಿಪಿ)ದ 3 ಶೇಕಡವನ್ನು ನಾಶಪಡಿಸುತ್ತದೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X