Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಜಾ, ಡ್ರಗ್ಸ್ ವ್ಯಸನದ ವಿರುದ್ಧ...

ಗಾಂಜಾ, ಡ್ರಗ್ಸ್ ವ್ಯಸನದ ವಿರುದ್ಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ

ದ.ಕ. ಪ್ರಧಾನ ಜಿಲ್ಲಾ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣ ಆಚಾರ್ಯ

ವಾರ್ತಾಭಾರತಿವಾರ್ತಾಭಾರತಿ20 Nov 2019 11:01 PM IST
share

ಮಂಗಳೂರು, ನ.20: ಗಾಂಜಾ, ಡ್ರಗ್ಸ್ ಸಹಿತ ಮಾದಕ ವಸ್ತುಗಳ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗದಂತೆ ಜಿಲ್ಲೆಯ ವೃತ್ತಿಪರ ಶಿಕ್ಷಣ ಸಂಸ್ಥೆಗಳು, ಕಾಲೇಜುಗಳಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು ಮೂಡಿಸುವ ಕಾರ್ಯವನ್ನು ನಡೆಸಲಾಗುವುದು ಎಂದು ದ.ಕ. ಪ್ರಧಾನ ಜಿಲ್ಲಾ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯ ತಿಳಿಸಿದ್ದಾರೆ.

ಕಾನೂನು ಸೇವಾ ಪ್ರಾಧಿಕಾರದ ಕ್ರಿಯಾಯೋಜನೆ ಅನುಷ್ಠಾನ ಕುರಿತು ಮಂಗಳವಾರ ದ.ಕ. ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಯುವಜನರು ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಿರುವ ಪ್ರಕರಣಗಳು ಹೆಚ್ಚುತಿರುವುದು ಕಳವಳಕಾರಿಯಾಗಿದೆ. ಇದರಿಂದ ಜಿಲ್ಲೆಯ ಶೈಕ್ಷಣಿಕ ಖ್ಯಾತಿಗೆ ಕಳಂಕ ಬರಲಿದೆ. ಹೊರ ಜಿಲ್ಲೆ, ರಾಜ್ಯಗಳಿಂದ ಪಾಲಕರು ತಮ್ಮ ಮಕ್ಕಳನ್ನು ಜಿಲ್ಲೆಗೆ ಶಿಕ್ಷಣಕ್ಕೆ ಕಳುಹಿಸಲು ಹಿಂದೇಟು ಹಾಕುವ ಸಾಧ್ಯತೆಯೂ ಇದೆ. ಈ ನಿಟ್ಟಿನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ಶಿಕ್ಷಣ ಸಂಸ್ಥೆಗಳು, ಪಾಲಕರು, ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಿದೆ ಎಂದು ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣ ಆಚಾರ್ಯ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್, ಗಾಂಜಾ ಪ್ರಕರಣಗಳನ್ನು ಪೊಲೀಸ್ ಇಲಾಖೆಯು ಪತ್ತೆ ಹಚ್ಚುತ್ತಿರುವುದು ಶ್ಲಾಘನೀಯ. ಇದರೊಂದಿಗೆ ಇಂತಹ ಪ್ರಕರಣಗಳ ಆರೋಪಿಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಒಮ್ಮೆ ಸಿಕ್ಕಿಬಿದ್ದವರು ಮತ್ತೆ ಅದೇ ಚಟ ಅಥವಾ ದಂಧೆಗೆ ಬೀಳುವಂತಾಗಬಾರದು. ಅವರ ಪಾಲಕರನ್ನು ಠಾಣೆಗೆ ಕರೆಸಿ ಹಿತವಚನ ನೀಡಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ಸೂಚಿಸಿದರು.

ಖಾಸಗಿ ಬಸ್ ಸಿಬ್ಬಂದಿಗಳಿಗೆ ಕಾನೂನು ಅರಿವು : ಜಿಲ್ಲೆಯಲ್ಲಿ ವಿಶೇಷವಾಗಿ ನಗರದಲ್ಲಿ ಖಾಸಗಿ ಬಸ್ ಚಾಲಕ-ನಿರ್ವಾಹಕರ ವರ್ತನೆ ಹಾಗೂ ಸಂಚಾರ ಸಮಸ್ಯೆಗಳಿಗೆ ಕಾರಣವಾಗುತ್ತಿರುವ ಬಗ್ಗೆ ಸಾರ್ವಜನಿರಿಂದ ವ್ಯಾಪಕ ದೂರುಗಳು ಬರುತ್ತಿವೆ. ಖಾಸಗಿ ಬಸ್‌ಗಳು ಸಂಚಾರ ನಿಯಮಗಳ ಉಲ್ಲಂಘಿಸಿ ಸಂಚರಿಸುವುದು ಪ್ರಮುಖ ಕಾರಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಖಾಸಗಿ ಬಸ್ ಸಿಬ್ಬಂದಿಗಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ಆಯೋಜಿಸಲಾಗುವುದು ಎಂದು ಕಡ್ಲೂರು ಸತ್ಯಾನಾರಾಯಣಾಚಾರ್ಯ ತಿಳಿಸಿದರು.

ನವೆಂಬರ್-ಡಿಸೆಂಬರ್‌ನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜೀತಪದ್ಧತಿ, ಮಗಳನ್ನು ಓದಿಸಿ ಮಗಳನ್ನು ರಕ್ಷಿಸಿ, ಎಚ್‌ಐವಿ ದಿನಾಚರಣೆ, ವಿಕಲಚೇತನರ ದಿನಾಚರಣೆ, ಮಾನವ ಹಕ್ಕುಗಳ ದಿನಾಚರಣೆ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಬಾಲ ಕಾರ್ಮಿಕ ಪದ್ಧತಿ ಸಹಿತ ಪ್ರಮುಖ ಕಾನೂನು ಅಂಶಗಳ ಬಗ್ಗೆ ನಗರದ ಅಪಾರ್ಟ್‌ಮೆಂಟ್, ಫ್ಲಾಟ್‌ಗಳಲ್ಲೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು. ಅದೇ ರೀತಿ ಮಂಗಳೂರು ಮಹಾನಗರಪಾಲಿಕೆಗೆ ಚುನಾಯಿತರಾದ ನೂತನ ಸದಸ್ಯರಿಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಮಕ್ಕಳಿಗೆ ಪ್ರತ್ಯೇಕ ವ್ಯಸನ ಮುಕ್ತ ಕೇಂದ್ರ: ಪ್ರಜ್ಞಾ ಸಲಹಾ ಕೇಂದ್ರದ ಮುಖ್ಯಸ್ಥೆ ಡಾ.ಹಿಲ್ಡಾ ರಾಯಪ್ಪನ್ ಮಾತನಾಡಿ, ಮಾದಕ ವಸ್ತುಗಳಿಗೆ ದಾಸರಾದವರನ್ನು ವ್ಯಸನಮುಕ್ತಗೊಳಿಸಲು ಮಂಗಳೂರಿನಲ್ಲಿ ಪ್ರಸಕ್ತ ಪ್ರತ್ಯೇಕ ವ್ಯಸನ ಮುಕ್ತ ಕೇಂದ್ರವಿಲ್ಲ. ಕುಡಿತ ವ್ಯಸನ ಮುಕ್ತ ಕೇಂದ್ರದಲ್ಲಿಯೇ ಡ್ರಗ್ಸ್ ವ್ಯಸನಿಗಳನ್ನು ಸೇರಿಸಲಾಗುತ್ತದೆ. ಮದ್ಯಪಾನ ಹಾಗೂ ಮಾದಕ ವಸ್ತು ಎರಡೂ ಪ್ರತ್ಯೇಕ ವ್ಯಸನಗಳಾಗಿರುವುದರಿಂದ ಎರಡಕ್ಕೂ ಪ್ರತ್ಯೇಕ ವ್ಯಸನ ಮುಕ್ತ ಕೇಂದ್ರ ಸ್ಥಾಪಿಸಬೇಕು. ಅದರಲ್ಲೂ ಮಾದಕ ವಸ್ತುಗಳ ಚಟಕ್ಕೆ ಬಿದ್ದ ಹದಿಹರೆಯದವರನ್ನು, ಮಕ್ಕಳನ್ನು ವ್ಯಸನಮುಕ್ತಗೊಳಿಸಲು ಪ್ರತ್ಯೇಕವಾಗಿಯೇ ಮಕ್ಕಳ ಕೇಂದ್ರ ತೆರೆಯಬೇಕಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಗಂಗಾಧರ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X