Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್, 'ಕೈ' ಅಭ್ಯರ್ಥಿಗಳ ನಾಮಪತ್ರ...

ಜೆಡಿಎಸ್, 'ಕೈ' ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಬಿಎಸ್‌ವೈ ಒತ್ತಡ: ವಿ.ಎಸ್.ಉಗ್ರಪ್ಪ

ವಾರ್ತಾಭಾರತಿವಾರ್ತಾಭಾರತಿ21 Nov 2019 6:21 PM IST
share
ಜೆಡಿಎಸ್, ಕೈ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಬಿಎಸ್‌ವೈ ಒತ್ತಡ: ವಿ.ಎಸ್.ಉಗ್ರಪ್ಪ

ಬೆಂಗಳೂರು, ನ. 21: ಜೆಡಿಎಸ್, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಡ ಹೇರುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣಾ ಆಯೋಗ ಜೀವಂತವಾಗಿದೆಯೇ ಎಂದು ಪ್ರಶ್ನೆ ಉದ್ಭವಿಸಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್‌ವೈ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಅಭ್ಯರ್ಥಿಯೊಬ್ಬರ ನಾಮಪತ್ರ ಹಿಂಪಡೆಯಲು ಒತ್ತಡ ಹೇರಿರುವುದು ಬಹಿರಂಗವಾಗಿದೆ. ಈ ಬಗ್ಗೆ ಆಯೋಗ ಏನು ಕ್ರಮ ಕೈಗೊಳ್ಳಲಿದೆ ಎಂದು ಪ್ರಶ್ನಿಸಿದರು.

ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾಲ್ಕೈದು ಕ್ಷೇತ್ರಗಳಲ್ಲಿ ಒತ್ತಡ ತಂತ್ರವನ್ನು ಬಿಜೆಪಿ ಅನುಸರಿಸುತ್ತಿದೆ. ಆದರೆ, ಚುನಾವಣಾ ಆಯೋಗ ಜೀವಂತ ಇದೆಯೋ, ಸತ್ತು ಹೋಗಿದೆಯೋ ಅಥವಾ ಬಿಜೆಪಿಯೊಂದಿಗೆ ಶಾಮೀಲಾಗಿದೆಯೋ ಎಂಬ ಸಂಶಯ ಸೃಷ್ಟಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಈ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಆಯೋಗ ನಿರ್ಜೀವವಾಗಿದ್ದು, ಬಿಜೆಪಿ ಪರ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಉಗ್ರಪ್ಪ, ಚುನಾವಣಾ ಆಯೋಗ ಕೂಡಲೇ ಬಿಎಸ್‌ವೈ ಮತ್ತವರ ತಂಡದ ವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿದರು.

ಹಾವೇರಿ ಜಿಲ್ಲೆ ಹಿರೇಕೆರೂರು, ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ಬೆಳಗಾವಿ ಜಿಲ್ಲೆಯ ಗೋಕಾಕ್ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯಲು ಅಭ್ಯರ್ಥಿಗಳಿಗೆ ಒತ್ತಡ ಹೇರಿದ್ದಾರೆ. ಆಯೋಗ ಮೌನವಾಗಿರುವುದು ಏಕೆ ಎಂದು ಕೇಳಿದರು.

‘ಸಾಲ’ ಅಫಿಡವಿಟ್‌ನಲ್ಲಿ ನಮೂದಿಸಿಲ್ಲ ಏಕೆ: ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್ ಪಕ್ಷದ ಮುಖಂಡರಿಗೆ ‘ಸಾಲ’ ನೀಡಿರುವ ಬಗ್ಗೆ ಚುನಾವಣಾ ಅಫಿಡವಿಟ್‌ನಲ್ಲಿ ಏಕೆ ನಮೂದಿಸಿಲ್ಲ ಎಂದು ಉಗ್ರಪ್ಪ ಇದೇ ವೇಳೆ ಪ್ರಶ್ನಿಸಿದರು.

ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದು ಅಲ್ಲದೆ, ಮಾಹಿತಿ ಮುಚ್ಚಿಟ್ಟಿದ್ದಾರೆ. ಹೀಗಾಗಿ ಅವರ ವಿರುದ್ಧ ಆಯೋಗ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಉಗ್ರಪ್ಪ, ಮತದಾರರಿಗೆ ಎಂಟಿಬಿ ನಾಗರಾಜ್ ಹಣದ ಆಮಿಷವೊಡ್ಡಿದ್ದು, ಈ ಬಗ್ಗೆ ಐಟಿ ಮತ್ತು ಇಡಿ ಏಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಳಿದರು.

ಕ್ಷಮೆ ಕೋರಿ: ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಅವರ ಪಾತ್ರವಿಲ್ಲ ಎಂದು ಸಿಬಿಐ ತನಿಖಾ ವರದಿಯಲ್ಲಿ ತಿಳಿಸಿದೆ. ಹೀಗಾಗಿ ಕೂಡಲೇ ಸಿಎಂ ಬಿಎಸ್‌ವೈ ಸೇರಿದಂತೆ ಬಿಜೆಪಿ ಮುಖಂಡರ ಕ್ಷಮೆ ಕೋರಬೇಕು ಎಂದು ಉಗ್ರಪ್ಪ ಆಗ್ರಹಿಸಿದರು.

‘ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ನಂಜೇಗೌಡರಿಗೆ ಸಾಲ ನೀಡಿದ್ದೇನೆ ಎಂದು ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಹೀಗಾಗಿ ತಪ್ಪು ಮಾಹಿತಿ ನೀಡಿದ್ದು, ಆಯೋಗ ಅವರ ನಾಮಪತ್ರವನ್ನು ತಿರಸ್ಕರಿಸಬೇಕು. ಸಾಲ ನೀಡಿದ ಬಗ್ಗೆ ಸಿಬಿಐ, ಐಟಿ-ಇಡಿ ತನಿಖೆ ನಡೆಸಬೇಕು’

-ವಿ.ಎಸ್.ಉಗ್ರಪ್ಪ, ಮಾಜಿ ಸಂಸದ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X