Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.23: ಶಾದಿ ಮಹಲ್‌ನಲ್ಲಿ ‘ಅಲ್ ಕಲಮ್...

ನ.23: ಶಾದಿ ಮಹಲ್‌ನಲ್ಲಿ ‘ಅಲ್ ಕಲಮ್ ಫೆಸ್ಟ್’

ವಾರ್ತಾಭಾರತಿವಾರ್ತಾಭಾರತಿ21 Nov 2019 8:07 PM IST
share

ಮಂಗಳೂರು, ನ.21:ನಗರದ ಅಲ್ ಕಲಮ್ ಅರಬಿಕ್ ಅಕಾಡಮಿಯ ವತಿಯಿಂದ ನ. 23ರಂದು ಬೆಳಗ್ಗೆ 10ರಿಂದ ರಾತ್ರಿ 7 ಗಂಟೆಯವರೆಗೆ ಬೋಳಾರದ ಶಾದಿಮಹಲ್‌ನಲ್ಲಿ ‘ಅಲ್ ಕಲಮ್ ಫೆಸ್ಟ್’ ನಡೆಯಲಿದೆ.

ಎಲ್ಲಾ ಧರ್ಮದ ಮಹಿಳೆಯರಿಗಾಗಿ ಮಹಿಳೆಯರೇ ನಡೆಸುವ ಈ ಫೆಸ್ಟ್‌ನಲ್ಲಿ ಆಹಾರ, ಕ್ವಿಝ್-ಆಟೋಟ ಸ್ಪರ್ಧೆಗಳಲ್ಲದೆ ಚಪ್ಪಲಿ, ಬ್ಯಾಗ್, ಆಟಿಕೆ ಸಾಮಗ್ರಿಗಳು, ಬಟ್ಟೆಬರೆಗಳ ಮಾರಾಟ ಮತ್ತು ಪ್ರದರ್ಶನ ಮತ್ತಿತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಫೆಸ್ಟ್‌ನಿಂದ ಬರುವ ಲಾಭವನ್ನು ಅನಾಥ ಹಾಗೂ ಆರ್ಥಿಕವಾಗಿ ಹಿಂದುಳಿದ ಹೆಣ್ಮಕ್ಕಳ ಅಧ್ಯಯನ, ವಸತಿ, ಆಹಾರ ಇತ್ಯಾದಿಗಳಿಗೆ ಬಳಸಿಕೊಳ್ಳಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

2011ರಲ್ಲಿ ಪಾಂಡೇಶ್ವರ ಸಮೀಪದ ಸುಭಾಷ್‌ನಗರದಲ್ಲಿ ಸ್ಥಾಪನೆಗೊಂಡ ‘ಅಲ್ ಕಲಮ್ ಅರಬಿಕ್ ಅಕಾಡಮಿ’ಯಲ್ಲಿ ದರ್ಸ್ (ಪ್ರೌಢ) ಶಿಕ್ಷಣ ನೀಡಲಾಗುತ್ತಿತ್ತು. ಇದರ ಇನ್ನೊಂದು ಶಾಖೆಯು ವಾಸ್‌ಲೇನ್ ಸಮೀಪವಿದೆ. ಶ್ರೀಮಂತರು ತಮ್ಮ ಮಕ್ಕಳನ್ನು ಅಧಿಕ ಶುಲ್ಕ ಭರಿಸಿದ ಅರಬಿಕ್ ಶಿಕ್ಷಣ ನೀಡಿದರೂ ಅನಾಥ ಹೆಣ್ಮಕ್ಕಳಿಗೆ ಶಿಕ್ಷಣ ನೀಡುವವರು ಯಾರೂ ಇಲ್ಲವಲ್ಲ ಎಂದು ಭಾವಿಸಿ 2015ರಲ್ಲಿ ನಾವು ಅನಾಥ ಹೆಣ್ಮಕ್ಕಳಿಗೂ ಕುರಾನ್ ಹಿಫ್ಳ್ ಕಲಿಸುವ ಮಹತ್ವದ ಯೋಜನೆಗೆ ಕೈ ಹಾಕಿದೆವು. 5 ಅನಾಥ ಮಕ್ಕಳಿಂದ ಆರಂಭಗೊಂಡ ಹಿಫ್ಳ್ ತರಗತಿಯಲ್ಲಿ ಹಾಸನ, ಮಡಿಕೇರಿ, ಶಿವಮೊಗ್ಗ ಮತ್ತಿತರ ಪ್ರದೇಶದ 30 ಮಕ್ಕಳಿದ್ದಾರೆ.

ಈಗಾಗಲೆ ನಾವು ಇಬ್ಬರು ಅನಾಥ ಹೆಣ್ಮಕ್ಕಳ ಮದುವೆಯನ್ನೂ ಮಾಡಿಸಿದ್ದೇವೆ. ಮೊದಲು ನಮ್ಮ ಕುಟುಂಬದ ಮೂವರು ಸದಸ್ಯರು ಸೇರಿಕೊಂಡು ಅಕಾಡಮಿಯನ್ನು ಸ್ಥಾಪಿಸಿದ್ದರೆ ಇದೀಗ ಐದು ಮಂದಿ ಇದರಲ್ಲಿ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಸ್ವಂತ ಕಟ್ಟಡ ನಿರ್ಮಿಸುವ ಸಲುವಾಗಿ ರಾ.ಹೆ.66ರ ಕಲ್ಲಾಪು ಬಳಿ ಸ್ವಂತ ಜಮೀನು ಖರೀದಿಸಿದ್ದೇವೆ ಎಂದು ಅಕಾಡಮಿಯ ಎಚ್‌ಒಡಿ ರೇಶ್ಮಾ ಎಂ.ಎಸ್. ತಿಳಿಸಿದ್ದಾರೆ.

ಅನಾಥ ಹೆಣ್ಮಕ್ಕಳಿಗೆ ಸಹಾಯ ಮಾಡುವ ಸಲುವಾಗಿ ನಾವು ಕಳೆದ ವರ್ಷ ನವೆಂಬರ್ 17ರಂದು ಮೊದಲ ಬಾರಿಗೆ ‘ಅಲ್ ಕಲಮ್ ಫೆಸ್ಟ್’ ಆರಂಭಿಸಿದೆವು. ಇದೀಗ ಎರಡನೆ ವರ್ಷದ ಫೆಸ್ಟ್ ನಡೆಸಲು ಸಿದ್ಧತೆ ನಡೆಸುತ್ತಿದ್ದೇವೆ. ಕಳೆದ ಬಾರಿ 3 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. 15 ವರ್ಷ ಮೇಲ್ಪಟ್ಟವರಿಗೆ ಪ್ರವೇಶ ಶುಲ್ಕವಿದೆ. ಅನಾಥ ಮಕ್ಕಳ ಕಲ್ಯಾಣಕ್ಕಾಗಿಯೇ ‘ಅಲ್ ಕಲಮ್ ಫೆಸ್ಟ್’ನ್ನ ಆಯೋಜಿಸಲಾಗಿದೆ ಎಂದು ರೇಶ್ಮಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X