Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ತಿಂಗಳ ಜಿಎಸ್‌ಟಿ ಪರಿಹಾರ ಬಾಕಿ...

ಎರಡು ತಿಂಗಳ ಜಿಎಸ್‌ಟಿ ಪರಿಹಾರ ಬಾಕಿ ಪಾವತಿಗೆ ಕೇಂದ್ರಕ್ಕೆ ಐದು ಬಿಜೆಪಿಯೇತರ ರಾಜ್ಯಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Nov 2019 9:15 PM IST
share
ಎರಡು ತಿಂಗಳ ಜಿಎಸ್‌ಟಿ ಪರಿಹಾರ ಬಾಕಿ ಪಾವತಿಗೆ ಕೇಂದ್ರಕ್ಕೆ ಐದು ಬಿಜೆಪಿಯೇತರ ರಾಜ್ಯಗಳ ಆಗ್ರಹ

ಹೊಸದಿಲ್ಲಿ, ನ.21: ಕೇಂದ್ರವು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನ ಜಿಎಸ್‌ಟಿ ಪರಿಹಾರ ಬಾಕಿಯನ್ನು ಪಾವತಿಸಲು ವಿಳಂಬಿಸುತ್ತಿದೆ ಎಂದು ಬಿಜೆಪಿಯೇತರ ಆಡಳಿತದ ರಾಜ್ಯಗಳಾದ ದಿಲ್ಲಿ,ಪಶ್ಚಿಮ ಬಂಗಾಳ,ಪಂಜಾಬ್,ರಾಜಸ್ಥಾನ ಮತ್ತು ಕೇರಳ ದೂರಿವೆ. ಈ ವಿಳಂಬವು ತಮ್ಮನ್ನು ತೀವ್ರ ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಎಂದು ಜಂಟಿ ಹೇಳಿಕೆಯಲ್ಲಿ ಅವು ತಿಳಿಸಿವೆ.

ಈ ಸಮಸ್ಯೆಯತ್ತ ವೈಯಕ್ತಿಕವಾಗಿ ಗಮನ ಹರಿಸುವಂತೆ ಮತ್ತು ಸಂಸತ್ತು ಅಂಗೀಕರಿಸಿರುವ ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಇದೇ ಮೊದಲ ಬಾರಿಗೆ ಜಿಎಸ್‌ಟಿ ಪಾವತಿಗೆ ವಿಳಂಬವಾಗಿದ್ದು,ಇದು ಅಪಾಯಕಾರಿ ಸ್ಥಿತಿಯಾಗಿದೆ ಎಂದು ಪ.ಬಂಗಾಳದ ವಿತ್ತ ಸಚಿವ ಅಮಿತ್ ಮಿತ್ರಾ ಸುದ್ದಿಗಾರರಿಗೆ ತಿಳಿಸಿದರೆ,ಇದು ರಾಜ್ಯ ಹಣಕಾಸು ವ್ಯವಸ್ಥೆಯಲ್ಲಿ ಕೇಂದ್ರವು ಸೃಷ್ಟಿಸಿರುವ ಬಿಕ್ಕಟ್ಟು ಆಗಿದೆ. ಭಾರತದ ಇತಿಹಾಸದಲ್ಲೆಂದೂ ಇಂತಹುದು ಸಂಭವಿಸಿರಲಿಲ್ಲ. ಏನಾದರೂ ತೀವ್ರ ಕ್ರಮವನ್ನು ಕೈಗೊಳ್ಳಬೇಕಿದೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಇಸಾಕ್ ಹೇಳಿದರು.

ಕೇಂದ್ರವು ಪ.ಬಂಗಾಳಕ್ಕೆ 1,500 ಕೋ.ರೂ.,ಕೇರಳಕ್ಕೆ 1600 ಕೋ.ರೂ.,ಪಂಜಾಬಿಗೆ 4,100 ಕೋ.ರೂ.ಮತ್ತು ದಿಲ್ಲಿಗೆ 2,355 ಕೋ.ರೂ.ಜಿಎಸ್‌ಟಿ ಪರಿಹಾರವನ್ನು ಪಾವತಿಸಬೇಕಿದೆ. ರಾಜಸ್ಥಾನಕ್ಕೆ ಬಾಕಿಯಿರುವ ಮೊತ್ತ ಇನ್ನೂ  ಸ್ಪಷ್ಟವಾಗಿಲ್ಲ.

 ಕೇಂದ್ರವು ವಿಳಂಬಕ್ಕೆ ಯಾವುದೇ ವಿವರಣೆಯನ್ನು ನೀಡಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿರುವ ರಾಜ್ಯಗಳು, ಸಂವಿಧಾನದ ತಿದ್ದುಪಡಿಯಂತೆ ರಾಜ್ಯಗಳ ಆದಾಯ ಬೆಳವಣಿಗೆಯು ಶೇ.14ಕ್ಕೂ ಕಡಿಮೆಯಾದರೆ ಅವು ಕೇಂದ್ರದಿಂದ ಪರಿಹಾರ ಪಡೆಯಲು ಅರ್ಹವಾಗಿರುತ್ತವೆ. ಜಿಎಸ್‌ಟಿಯು ರಾಜ್ಯಗಳ ಆದಾಯದಲ್ಲಿ ಸುಮಾರು ಶೇ.60 ರಷ್ಟು ಪಾಲು ಹೊಂದಿದೆ. ಹೆಚ್ಚಿನ ರಾಜ್ಯಗಳು ಈಗಾಗಲೇ ಒಟ್ಟು ಜಿಎಸ್‌ಟಿಯ ಶೇ.50ರಷ್ಟು ಕೊರತೆಯನ್ನು ಎದುರಿಸುತ್ತಿವೆ. ಇಂತಹ ಬೃಹತ್ ಕೊರತೆಗಳು ಮುಂಗಡಪತ್ರದಲ್ಲಿ ಯೋಜನೆಗಳಿಗೆ ವ್ಯತ್ಯಯವನ್ನುಂಟು ಮಾಡುತ್ತವೆ ಎಂದಿವೆ. ಹಲವಾರು ಸವಾಲುಗಳು ಎದುರಾಗಿದ್ದರೂ ರಾಜ್ಯಗಳು ಜಿಎಸ್‌ಟಿ ಮಂಡಳಿಯ ಎಲ್ಲ ಪ್ರಮುಖ ನಿರ್ಧಾರಗಳನ್ನು ಒಪ್ಪಿಕೊಂಡಿವೆ ಎಂದಿರುವ ಅವು,ಜಿಎಸ್‌ಟಿ ಮಂಡಳಿಯ ಮುಂದಿನ ಸಭೆಯಲ್ಲಿ ಪರಿಹಾರ ಪಾವತಿ ವಿಳಂಬದ ಬಗ್ಗೆ ಚರ್ಚೆಯಾಗಬೇಕು ಎಂದು ಆಗ್ರಹಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X