Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಿಂಕ್ ಬಾಲ್ ಹಣಾಹಣಿಗೆ ಈಡನ್ ಗಾರ್ಡನ್ಸ್...

ಪಿಂಕ್ ಬಾಲ್ ಹಣಾಹಣಿಗೆ ಈಡನ್ ಗಾರ್ಡನ್ಸ್ ಸಜ್ಜು

ಶುಕ್ರವಾರದಿಂದ ಭಾರತ-ಬಾಂಗ್ಲಾ ಎರಡನೇ ಕ್ರಿಕೆಟ್ ಟೆಸ್ಟ್

ವಾರ್ತಾಭಾರತಿವಾರ್ತಾಭಾರತಿ21 Nov 2019 11:22 PM IST
share
ಪಿಂಕ್ ಬಾಲ್ ಹಣಾಹಣಿಗೆ ಈಡನ್ ಗಾರ್ಡನ್ಸ್ ಸಜ್ಜು

ಕೋಲ್ಕತಾ, ನ.21: ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡನೇ ಪಂದ್ಯ ಶುಕ್ರವಾರ ಕೋಲ್ಕತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ನಲ್ಲಿ ಆರಂಭಗೊಳ್ಳಲಿದ್ದು, ಗುಲಾಬಿ ಬಣ್ಣದ ಚೆಂಡಿನಲ್ಲಿ ಭಾರತ ಮತ್ತು ಬಾಂಗ್ಲಾದೇಶದ ಮಧ್ಯೆ ನಡೆಯಲಿರುವ ಈ ಪಂದ್ಯ ಉಭಯ ದೇಶಗಳ ಪಾಲಿಗೆ ಸ್ಮರಣೀಯವಾಗಲಿದೆ.

ಐಸಿಸಿ ವಿಶ್ವ ಚಾಂಪಿಯನ್‌ಶಿಪ್‌ನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ, ಒಂದು ವಾರದ ಹಿಂದೆ ಇಂದೋರ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಬಾಂಗ್ಲಾದೇಶವನ್ನು ಇನಿಂಗ್ಸ್ ಮತ್ತು 130 ರನ್‌ಗಳಿಂದ ಸೋಲಿಸಿತ್ತು.

ಐದು ದಿನಗಳ ಟೆಸ್ಟ್ ಪಂದ್ಯವು ಮೂರು ದಿನಗಳ ಒಳಗಾಗಿ ಮುಗಿಯಿತು. ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್ ಮೊದಲ ಇನಿಂಗ್ಸ್‌ನಲ್ಲಿ 243 ರನ್ ದಾಖಲಿಸಿದ್ದರು. ಬಾಂಗ್ಲಾದೇಶ ತಂಡ ಮೊದಲ ಇನಿಂಗ್ಸ್‌ನಲ್ಲಿ 150 ಮತ್ತು ಎರಡನೇ ಇನಿಂಗ್ಸ್‌ನಲ್ಲಿ 213 ರನ್ ಗಳಿಸಿತ್ತು. ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತದ ತಂಡವು ಆಡಿರುವ ಎಲ್ಲಾ ಆರು ಪಂದ್ಯಗಳನ್ನು ಗೆದ್ದಿದೆ. ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಸರಣಿಗಳಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದೆ. ನಾಯಕ ಕೊಹ್ಲಿಗೆ ಗುಲಾಬಿ ಚೆಂಡಿನಲ್ಲಿ ಆಡಿರುವ ಅನುಭವವಿಲ್ಲ. ಬಾಂಗ್ಲಾ ತಂಡದ ಯಾರೂ ಕೂಡಾ ಈ ತನಕ ಗುಲಾಬಿ ಚೆಂಡಿನಲ್ಲಿ ಆಡಿಲ್ಲ.

ಭಾರತ ಇದೀಗ ಬಾಂಗ್ಲಾ ವಿರುದ್ಧದ ಸರಣಿಯಲ್ಲೂ ಕ್ಲೀನ್ ಸ್ವೀಪ್ ಸಾಧಿಸಲು ಎದುರು ನೋಡುತ್ತಿದೆ. ಆಲ್‌ರೌಂಡರ್ ಶಾಕಿಬ್ ಅಲ್ ಹಸನ್ ಬಾಂಗ್ಲಾದೇಶದ ಸಾರ್ವಕಾಲಿಕ ಅತ್ಯುತ್ತಮ ಕ್ರಿಕೆಟಿಗ. ಆದರೆ ಐಸಿಸಿ ಅವರಿಗೆ ಎರಡು ವರ್ಷಗಳ ನಿಷೇಧವನ್ನು ವಿಧಿಸಿರುವ ಹಿನ್ನೆಲೆಯಲ್ಲಿ ಬಾಂಗ್ಲಾಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ಭಾರತವು ಗುಲಾಬಿ ಚೆಂಡಿನಲ್ಲಿ ಟೆಸ್ಟ್ ನ್ನು ಮೊದಲ ಬಾರಿ ಆಡುತ್ತಿದೆ. ಈಡನ್‌ನಲ್ಲಿ ಎಸ್‌ಜಿ ಚೆಂಡಿನಲ್ಲಿ ಆಡಲಾಗುವುದು. ಸಂಜೆ ಅದು ಹೇಗೆ ವರ್ತಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಸಂಜೆ ಇಬ್ಬನಿ ಬೀಳುವುದರಿಂದ ಆಟಕ್ಕೆ ಸಮಸ್ಯೆಯಾಗುತ್ತದೆ. ಇದನ್ನು ತಪ್ಪಿಸಲು ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಆಟ ಆರಂಭವಾಗಲಿದೆ. ರಿವರ್ಸ್‌ಸ್ವಿಂಗ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ ಭಾರತೀಯ ವೇಗಿಗಳು ಯಶಸ್ಸು ಸಾಧಿಸಿದ್ದಾರೆ. ಗಾಯಾಳು ಜಸ್ಪ್ರಿತ್ ಬುಮ್ರಾ ಅನುಪಸ್ಥಿತಿಯಲ್ಲೂ ಮುಹಮ್ಮದ್ ಶಮಿ, ಇಶಾಂತ್ ಶರ್ಮಾ ಮತ್ತು ಉಮೇಶ್ ಯಾದವ್ ಬಾಂಗ್ಲಾದೇಶವನ್ನು ಕಡಿಮೆ ಮೊತ್ತಕ್ಕೆ ಕಳೆದ ಪಂದ್ಯದಲ್ಲಿ ನಿಯಂತ್ರಿಸಿದ್ದರು. ಶಮಿ ಏಳು ವಿಕೆಟ್‌ಗಳನ್ನು ಕಬಳಿಸಿದರೆ ಇಶಾಂತ್ ಮತ್ತು ಉಮೇಶ್ ಕ್ರಮವಾಗಿ ಮೂರು ಮತ್ತು ನಾಲ್ಕು ವಿಕೆಟ್ ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X