Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ...

ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಡಿ.4ರಂದು ಚುನಾವಣೆ

ಪಾಲಿಕೆ ಕೇಂದ್ರ ಕಚೇರಿಯಲ್ಲಿ ಚುನಾವಣೆ ಪ್ರಕ್ರಿಯೆ ಆರಂಭ

ವಾರ್ತಾಭಾರತಿವಾರ್ತಾಭಾರತಿ21 Nov 2019 11:27 PM IST
share
ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಡಿ.4ರಂದು ಚುನಾವಣೆ

ಬೆಂಗಳೂರು, ನ.21: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹನ್ನೆರಡು ಸ್ಥಾಯಿ ಸಮಿತಿಗಳಿಗೆ ಡಿ.4ರಂದು ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಅವರು ಆದೇಶ ಹೊರಡಿಸಿದ್ದಾರೆ.

ಅವಧಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಚುನಾವಣೆ ನಡೆಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದ 9 ಸ್ಥಾಯಿ ಸಮಿತಿ ಸೇರಿ 12 ಸಮಿತಿಗಳಿಗೂ ಚುನಾವಣೆ ನಡೆಯಲಿದ್ದು, ಡಿ.4ರಂದು ಬೆಳಗ್ಗೆ 11:30ಕ್ಕೆ ಬಿಬಿಎಂಪಿ ಕೇಂದ್ರ ಕಚೇರಿಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ.

ಮೇಯರ್ ಆಯ್ಕೆ ಸಂದರ್ಭದಲ್ಲಿಯೇ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ಸದಸ್ಯರ ಆಯ್ಕೆಗೆ ನಡೆಸಬೇಕಾಗಿದ್ದ ಚುನಾವಣೆ ಗೊಂದಲದಿಂದಾಗಿ ಮುಂದೂಡಲಾಗಿತ್ತು. ಈ ವೇಳೆ ಒಂಬತ್ತು ಸ್ಥಾಯಿ ಸಮಿತಿ ಅಧ್ಯಕ್ಷರು ಹೈಕೋರ್ಟ್ ಮೊರೆ ಹೋಗಿ ‘ಡಿಸೆಂಬರ್‌ವರೆಗೆ ನಮ್ಮ ಕಾಲಾವಧಿ ಇದ್ದು, ಸೆಪ್ಟೆಂಬರ್‌ನಲ್ಲೇ ಸ್ಥಾಯಿ ಸಮಿತಿಗೆ ಚುನಾವಣೆ ನಡೆಸುವುದರಿಂದ ನಮ್ಮ ಹಕ್ಕುಗಳು ಮೊಟಕಾಗುತ್ತದೆ’ ಎಂದು ವಿನಂತಿಸಿಕೊಂಡಿದ್ದರು. ಆದ್ದರಿಂದ ಒಂಬತ್ತು ಸ್ಥಾಯಿ ಸಮಿತಿಗಳ ಚುನಾವಣೆಗೆ ಕೋರ್ಟ್ ತಡೆ ನೀಡಿ, ಅವಧಿ ಪೂರ್ಣಗೊಳ್ಳುವವರೆಗೂ ಚುನಾವಣೆ ನಡೆಸದಂತೆ ಕೋರ್ಟ್ ಆದೇಶಿಸಿತ್ತು.

ಹೀಗಾಗಿ ಒಂಬತ್ತು ಸ್ಥಾಯಿ ಸಮಿತಿ ಹೊರತು ಪಡಿಸಿ ಮೂರು ಸ್ಥಾಯಿ ಸಮಿತಿಗಳ ಚುನಾವಣೆಗೆ ಪ್ರಾದೇಶಿಕ ಆಯುಕ್ತರು ಸೂಚಿಸಿದ್ದರು. ಆದರೆ, ಪ್ರತಿ ಸ್ಥಾಯಿ ಸಮಿತಿಗೆ ಹನ್ನೊಂದು ಸದಸ್ಯರು ನಾಮಪತ್ರ ಸಲ್ಲಿಸಬೇಕಿತ್ತಾದರೂ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ನಡೆಸಿರಲಿಲ್ಲ. ಈಗ ಡಿ. 4ರೊಳಗೆ ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತರು ಮುಂದಾಗಿದ್ದಾರೆ.

ಯಾವ ಸ್ಥಾಯಿ ಸಮಿತಿ?: ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ, ಅಪೀಲು ಸ್ಥಾಯಿ ಸಮಿತಿ, ತೋಟಗಾರಿಕೆ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಆಡಳಿತ ಸುಧಾರಣಾ ಸ್ಥಾಯಿ ಸಮಿತಿ, ನಗರ ಯೋಜನೆ ಸ್ಥಾಯಿ ಸಮಿತಿ, ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ, ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ, ಶಿಕ್ಷಣ ಸ್ಥಾಯಿ ಸಮಿತಿ, ಆರೋಗ್ಯ ಸ್ಥಾಯಿ ಸಮಿತಿ, ಮಾರುಕಟ್ಟೆ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಮತ್ತು ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.

ಸದಸ್ಯರ ಅಧಿಕಾರಾವಧಿ ಹತ್ತು ತಿಂಗಳ ಮಾತ್ರ...

ಮೇಯರ್ ಮತ್ತು ಉಪಮೇಯರ್ ಅವಧಿಯಷ್ಟೇ ಸ್ಥಾಯಿ ಸಮಿತಿ ಸದಸ್ಯರ ಅವಧಿ ಇದ್ದು, ಮೇಯರ್ ಚುನಾವಣೆ ವೇಳೆ ನಡೆಯಬೇಕಾಗಿದ್ದ ಚುನಾವಣೆ ಮುಂದೂಡಿ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುವುದರಿಂದ ಸದಸ್ಯರ ಅಧಿಕಾರಾವಧಿ ಹತ್ತು ತಿಂಗಳು ಮಾತ್ರ ಇರಲಿದೆ. 2020 ಸೆಪ್ಟಂಬರ್ ತಿಂಗಳಾಂತ್ಯದಲ್ಲಿ ಮೇಯರ್ ಅವಧಿ ಮುಗಿಯಲಿದ್ದು, ನಂತರ ಪಾಲಿಕೆ ಚುನಾವಣೆ ನಡೆಯಲಿದೆ.

ಸ್ಥಾಯಿ ಸಮಿತಿ ಚುನಾವಣೆಗೆ ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಚುನಾವಣೆಗೆ ವಾರದ ಮುನ್ನವೇ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ಒಂದೇ ದಿನದಲ್ಲಿ ಹನ್ನೆರಡು ಸ್ಥಾಯಿ ಸಮಿತಿಗಳ ಚುನಾವಣೆ ನಡೆಸಲಾಗುವುದು.

- ಹರ್ಷಗುಪ್ತ, ಪ್ರಾದೇಶಿಕ ಆಯುಕ್ತ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X