Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ...

ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ?: ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 Nov 2019 11:29 AM IST
share
ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ?: ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ನ. 22: ‘ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ಮೋದಿ ಮತ್ತು ಅಮಿತ್ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ?’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ’ ಎಂದು ಟೀಕಿಸಿದ್ದಾರೆ.

‘ಏಕಾಂಗಿಯಾಗಿ ಹೋಗಿರುವ ಡಿ.ವಿ.ಸದಾನಂದಗೌಡ ಅವರನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ’ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

‘ಯಶವಂತಪುರ ಕ್ಷೇತ್ರದಲ್ಲಿಂದು ಆಯೋಜಿಸಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದೆ. ಸುಪ್ರೀಂ ಕೋರ್ಟ್ ಅನರ್ಹರು ಎಂದು ತೀರ್ಪು ನೀಡಿದವರನ್ನು ಜನತೆ ಮತ ನೀಡಿ ಗೆಲ್ಲಿಸಿದರೆ ಅದು ಅಭ್ಯರ್ಥಿಯ ಗೆಲುವಲ್ಲ, ನಂಬಿಕೆ ದ್ರೋಹ, ಸ್ವಾರ್ಥದ ಗೆಲುವಾಗುತ್ತದೆ. ಮತ ನೀಡುವಾಗ ಈ ವಿಚಾರವನ್ನು ಜನತೆ ಗಮನದಲ್ಲಿಟ್ಟುಕೊಂಡು ಮತ ನೀಡಬೇಕು’ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಪಿಎಫ್‌ಐ ಸಮರ್ಥಕ: ‘ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು? ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು’ ಎಂದು ಕುವೆಂಪು ಕಾವ್ಯ ಉಲ್ಲೇಖಿಸಿ ಸದಾನಂದಗೌಡ ತಿರುಗೇಟು ನೀಡಿದ್ದಾರೆ.

‘ನಾನು ಗೊಬ್ಬರ ಹೌದು ಸ್ವಪಕ್ಷೀಯರ ರಕ್ತ ಹೀರಿದ ಪಿಎಫ್‌ಐನ ಸಮರ್ಥಕ ನೀವಲ್ಲವೇ? ನಾವು ತಿನ್ನುವ ಅನ್ನ ಗೊಬ್ಬರದಿಂದಲೇ.. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ’ ಎಂದು ಡಿವಿಎಸ್ ಟ್ವೀಟ್ ಮೂಲಕ ಸಿದ್ದರಾಮಯ್ಯರನ್ನು ಟೀಕಿಸಿದ್ದಾರೆ.

ರಾಜ್ಯದ @BJP4Karnataka ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ,
ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು @narendramodi ಮತ್ತು @AmitShah ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ?@INCKarnataka

— Siddaramaiah (@siddaramaiah) November 22, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X